Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೈದ್ಯಕೀಯ ಕಾಲೇಜು ವಿಚಾರದಲ್ಲಿ ಸಿಎಂಗೆ...

ವೈದ್ಯಕೀಯ ಕಾಲೇಜು ವಿಚಾರದಲ್ಲಿ ಸಿಎಂಗೆ ಪತ್ರ ಬರೆದು ಎಚ್ಚರಿಕೆ ನೀಡಿದ ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ7 Dec 2019 7:44 PM IST
share
ವೈದ್ಯಕೀಯ ಕಾಲೇಜು ವಿಚಾರದಲ್ಲಿ ಸಿಎಂಗೆ ಪತ್ರ ಬರೆದು ಎಚ್ಚರಿಕೆ ನೀಡಿದ ಡಿಕೆಶಿ

ಬೆಂಗಳೂರು, ಡಿ.7: ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಆದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೆ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಯಡಿಯೂರಪ್ಪನವರೇ ನೀವು ಅಧಿಕಾರಕ್ಕೆ ಬಂದಾಗ ದ್ವೇಷದ ರಾಜಕಾರಣ ಮಾಡುವುದಿಲ್ಲ, ಜನರ ಹಿತದೃಷ್ಟಿ ಹಾಗೂ ಅಭಿವೃದ್ಧಿ ವಿಚಾರವಾಗಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವೆಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದೀರಿ ಎಂದು ತಿಳಿಸಿದ್ದಾರೆ.

ಬಸವ ತತ್ವಗಳನ್ನು ಪಾಲಿಸುವುದಾಗಿ ಹೇಳಿಕೊಳ್ಳುವ ನೀವು ಈ ಹಿಂದೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೀರ ಎಂದು ಭಾವಿಸಿದ್ದೆ. ಆದರೆ ನಂತರದ ದಿನಗಳಲ್ಲಿ ತಮ್ಮ ಮಾತಿಗೆ ತದ್ವಿರುದ್ಧವಾಗಿ ನಡೆದುಕೊಂಡಿದ್ದೀರಾ. ಕನಕಪುರ ವೈದ್ಯಕೀಯ ವಿಜ್ಞಾನ ಕಾಲೇಜು ಆದೇಶವನ್ನು ರದ್ದುಗೊಳಿಸುವ ಮೂಲಕ ನೀವು ನಿಮ್ಮ ಮಾತನ್ನು ತಪ್ಪಿದ್ದೀರಾ ಎಂದು ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಂಜುಂಡಪ್ಪ ಸಮಿತಿಯು ಕನಕಪುರವನ್ನು ಹಿಂದುಳಿದ ತಾಲೂಕು ಎಂದು ಪರಿಗಣಿಸಿದ ಹಿನ್ನೆಲೆಯಲ್ಲಿ, ಅಭಿವೃದ್ಧಿ ಹಾಗೂ ಈ ಭಾಗದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಮೂಲಸೌಕರ್ಯ ಹೆಚ್ಚಿಸಲು ಹಾಗೂ ಈ ಭಾಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ತಲುಪುವಂತೆ ಮಾಡಲು ಕಳೆದ ಸರಕಾರ 2018-19ನೇ ಸಾಲಿನ ಬಜೆಟ್‌ನಲ್ಲಿ ಕನಕಪುರ ವೈದ್ಯಕೀಯ ಕಾಲೇಜಿಗೆ ಅನುಮೋದನೆ ನೀಡಿತ್ತು ಎಂದು ಅವರು ಹೇಳಿದ್ದಾರೆ.

ಈ ವಿಚಾರವಾಗಿ ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ನೀವು ನಿಮ್ಮ ಅಭಿಪ್ರಾಯ ಹಾಗೂ ಒಪ್ಪಿಗೆಯನ್ನೂ ಸೂಚಿಸಿದ್ದಿರಿ. ನಂತರ ಯೋಜನಾ ಇಲಾಖೆ, ಆರ್ಥಿಕ ಇಲಾಖೆ, ಕಾನೂನು ಮತ್ತು ಸಂಸದೀಯ ಇಲಾಖೆ ಈ ಪ್ರಸ್ತಾವನೆ ಪರಿಶೀಲಿಸಿ 2018ರ ಡಿ.13ರಂದು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಇದಾದ ನಂತರ ಮೆಡಿಕಲ್ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ಕನಕಪುರದ ರಾಯಸಂದ್ರ ಹಳ್ಳಿಯಲ್ಲಿ 25 ಎಕರೆ ಜಮೀನು ನಿಗದಿ ಮಾಡಲಾಗಿತ್ತು. ನಂತರ ಟೆಂಡರ್ ಕರೆದು ಗುದ್ದಲಿ ಪೂಜೆ ಮಾತ್ರ ಬಾಕಿ ಉಳಿದಿತ್ತು ಎಂದು ಶಿವಕುಮಾರ್ ತಿಳಿಸಿದ್ದಾರೆ.

ಈ ಹಂತದಲ್ಲಿರುವ ಯೋಜನೆಯನ್ನು ನಿಮ್ಮ ಏಕವ್ಯಕ್ತಿ ಸಂಪುಟ ಹಿಂಪಡೆದು ಹಿಂದಿನ ಸರಕಾರದ ಆದೇಶ ರದ್ದುಗೊಳಿಸಿ ಯೋಜನೆಯನ್ನು ರಾತ್ರೋರಾತ್ರಿ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿರುವುದು ನನಗೆ ಅಚ್ಚರಿ ತಂದಿದೆ. ಸಾರ್ವಜನಿಕ ವೇದಿಕೆಯಲ್ಲಿ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ ನೀವು ಇಂತಹ ನಿರ್ಧಾರ ಕೈಗೊಂಡಿರುವುದು ನನ್ನ ಮನಸ್ಸಿಗೆ ನೋವು ತಂದಿದೆ. ಯಾವುದೇ ಬೇರೆ ಕ್ಷೇತ್ರಕ್ಕೆ ನೀಡಿದ್ದ ಕಾಲೇಜನ್ನು ರದ್ದುಗೊಳಿಸಿ ಕನಕಪುರಕ್ಕೆ ಕಾಲೇಜು ಅನುಮೋದನೆ ನೀಡಿರಲಿಲ್ಲ ಎಂದು ಶಿವಕುಮಾರ್ ಸ್ಪಷ್ಟಣೆ ನೀಡಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ನೀಡಿರುವ ಬಗ್ಗೆ ನಾನು ಯಾವುದೇ ಪ್ರಶ್ನೆ ಮಾಡುವುದಿಲ್ಲ. ಸರಕಾರ ತನಗೆ ಇಚ್ಛೆ ಬಂದ ಪ್ರದೇಶಗಳಿಗೆ ಎಷ್ಟು ಕಾಲೇಜುಗಳನ್ನು ಬೇಕಾದರೂ ನೀಡಲಿ. ಆದರೆ ಕನಕಪುರಕ್ಕೆ ನೀಡಲಾಗಿದ್ದ ಕಾಲೇಜನ್ನು ರದ್ದುಗೊಳಿಸಿರುವುದು ಸರಿಯಲ್ಲ. ಇತ್ತೀಚೆಗೆ ನೀವು ಮಾಗಡಿಯಲ್ಲಿ ಕನಕಪುರಕ್ಕೆ ವೈದ್ಯಕೀಯ ಕಾಲೇಜು ನೀಡುವುದಾಗಿ ಕೊಟ್ಟಿರುವ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಸರಕಾರ ಕೂಡಲೇ ಕನಕಪುರಕ್ಕೆ ನೀಡಲಾಗಿದ್ದ ಕಾಲೇಜನ್ನು ಮರು ಮಂಜೂರು ಮಾಡಬೇಕು. ಅಲ್ಲದೆ ಕಾಲೇಜು ಕಟ್ಟಡ ನಿರ್ಮಾಣದ ಭೂಮಿ ಪೂಜೆಗೆ ದಿನಾಂಕ ನಿಗದಿಪಡಿಸಬೇಕು. ಒಂದು ವೇಳೆ ನಿಮ್ಮ ಸರಕಾರ ಈ ವಿಚಾರದಲ್ಲಿ ದ್ವೇಷದ ರಾಜಕಾರಣ ಮುಂದುವರಿಸಿದರೆ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕನಕಪುರ ಜನರಿಗೆ ನ್ಯಾಯ ದೊರಕಿಸಿಕೊಡಲು ನನ್ನದೇ ಮಾರ್ಗ ಅನುಸರಿಸಬೇಕಾಗುತ್ತದೆ. ಇದಕ್ಕೆ ನೀವು ಅವಕಾಶ ನೀಡುವುದಿಲ್ಲವೆಂದು ಭಾವಿಸುತ್ತೇನೆ ಎಂದು ಶಿವಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X