Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕತರ್: ಅಮೆರಿಕ-ತಾಲಿಬಾನ್ ಮಾತುಕತೆಗೆ...

ಕತರ್: ಅಮೆರಿಕ-ತಾಲಿಬಾನ್ ಮಾತುಕತೆಗೆ ಮತ್ತೆ ಚಾಲನೆ?

ವಾರ್ತಾಭಾರತಿವಾರ್ತಾಭಾರತಿ7 Dec 2019 7:58 PM IST
share
ಕತರ್: ಅಮೆರಿಕ-ತಾಲಿಬಾನ್ ಮಾತುಕತೆಗೆ ಮತ್ತೆ ಚಾಲನೆ?

ದೋಹಾ (ಕತರ್), ಡಿ. 7: ಅಫ್ಘಾನಿಸ್ತಾನದ ಭಯೋತ್ಪಾದಕ ಸಂಘಟನೆ ತಾಲಿಬಾನ್ ಜೊತೆಗಿನ ಮಾತುಕತೆಗಳನ್ನು ಅಮೆರಿಕ ಶನಿವಾರ ಕತರ್‌ನಲ್ಲಿ ಮುಂದುವರಿಸಿದೆ ಎಂದು ಅಮೆರಿಕದ ಮೂಲವೊಂದು ತಿಳಿಸಿದೆ.

ಅಫ್ಘಾನಿಸ್ತಾನದಲ್ಲಿ ಅಮೆರಿಕ ನಡೆಸುತ್ತಿರುವ ಸುದೀರ್ಘ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದ ರಾಜತಾಂತ್ರಿಕ ಪ್ರಯತ್ನಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಠಾತ್ತನೆ ನಿಲ್ಲಿಸಿದದ ಮೂರು ತಿಂಗಳ ಬಳಿಕ ತಾಲಿಬಾನ್ ಜೊತೆಗಿನ ಮಾತುಕತೆಗಳು ಪುನರಾರಂಭಗೊಂಡಿವೆ.

ಸೆಪ್ಟಂಬರ್‌ನಲ್ಲಿ ಅಮೆರಿಕ ಮತ್ತು ತಾಲಿಬಾನ್ ಶಾಂತಿ ಒಪ್ಪಂದವೊಂದಕ್ಕೆ ಸಹಿ ಹಾಕುವ ಹೊಸ್ತಿಲಲ್ಲಿದ್ದವು. ಆ ಒಪ್ಪಂದದ ಪ್ರಕಾರ, ತಾಲಿಬಾನ್‌ನ ಭದ್ರತೆಯ ಖಾತರಿಗೆ ಪ್ರತಿಯಾಗಿ, ಅಫ್ಘಾನಿಸ್ತಾನದಲ್ಲಿರುವ ಸಾವಿರಾರು ಅಮೆರಿಕ ಸೈನಿಕರು ತಮ್ಮ ದೇಶಕ್ಕೆ ವಾಪಸಾಗುತ್ತಿದ್ದರು.

ಅದೂ ಅಲ್ಲದೆ, ತಾಲಿಬಾನ್ ಮತ್ತು ಅಫ್ಘಾನಿಸ್ತಾನ ಸರಕಾರದ ನಡುವೆ ನೇರ ಮಾತುಕತೆಗೆ ಆ ಒಪ್ಪಂದ ಅವಕಾಶ ಮಾಡಿಕೊಡುತ್ತಿತ್ತು ಹಾಗೂ, ಅಂತಿಮವಾಗಿ, ಅಫ್ಘಾನಿಸ್ತಾನದಲ್ಲಿ 18 ವರ್ಷಗಳ ಸುದೀರ್ಘ ಯುದ್ಧದ ಬಳಿಕ ಶಾಂತಿ ಒಪ್ಪಂದವೊಂದು ಜಾರಿಗೆ ಬರುವ ಸಾಧ್ಯತೆಯಿತ್ತು.

ಆದರೆ, ಅದೇ ತಿಂಗಳು, ಒಂದು ವರ್ಷವಿಡೀ ಸಾಗಿ ಬಂದಿದ್ದ ಮಾತುಕತೆ ಪ್ರಕ್ರಿಯೆಯನ್ನು ಟ್ರಂಪ್ ‘ಶೂನ್ಯ’ ಎಂದು ಘೋಷಿಸಿದರು ಹಾಗೂ ಎಲ್ಲ ಮಾತುಕತೆಗಳನ್ನು ಸ್ಥಗಿತಗೊಳಿಸಿದರು. ಕ್ಯಾಂಪ್ ಡೇವಿಡ್‌ನಲ್ಲಿರುವ ರಿಸಾರ್ಟ್‌ನಲ್ಲಿ ನಡೆಯಲಿದ್ದ ಮಾತುಕತೆಯಲ್ಲಿ ಭಾಗವಹಿಸಲು ತಾಲಿಬಾನ್‌ಗೆ ನೀಡಿದ್ದ ಆಹ್ವಾನವನ್ನು ಹಿಂದಕ್ಕೆ ಪಡೆದುಕೊಂಡರು.

ತಾಲಿಬಾನ್ ದಾಳಿಯಲ್ಲಿ ಅಮೆರಿಕ ಸೈನಿಕನೊಬ್ಬ ಹತನಾದ ಬಳಿಕ ಟ್ರಂಪ್ ಈ ನಿರ್ಧಾರಕ್ಕೆ ಬಂದಿದ್ದರು.

‘‘ತಾಲಿಬಾನ್ ಜೊತೆಗಿನ ಮಾತುಕತೆಗೆ ಅಮೆರಿಕ ದೋಹಾದಲ್ಲಿ ಇಂದು ಮರುಸೇರ್ಪಡೆಗೊಂಡಿತು. ಹಿಂಸೆಯನ್ನು ತಗ್ಗಿಸುವುದು ಹಾಗೂ ಆ ಮೂಲಕ ಅಫ್ಘಾನಿಸ್ತಾನದಲ್ಲಿ ಆಂತರಿಕ ಮಾತುಕತೆಗೆ ಬಾಗಿಲು ತೆರೆಯುವುದು ಮತ್ತು ಯುದ್ಧವಿರಾಮ ಒಪ್ಪಂದವೊಂದಕ್ಕೆ ಬರುವುದು ಈ ಮಾತುಕತೆಯ ಉದ್ದೇಶವಾಗಿದೆ’’ ಎಂದು ಅಮೆರಿಕದ ಮೂಲ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X