Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಸ್ವಾತಂತ್ರ್ಯ ಹೋರಾಟದಲ್ಲಿ ಭಾರತ...

'ಸ್ವಾತಂತ್ರ್ಯ ಹೋರಾಟದಲ್ಲಿ ಭಾರತ ಸೇವಾದಳದ ಕೊಡುಗೆ ಅಪಾರ'

ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳದಲ್ಲಿ ಶಾಸಕ ಲಾಲಾಜಿ ಮೆಂಡನ್

ವಾರ್ತಾಭಾರತಿವಾರ್ತಾಭಾರತಿ7 Dec 2019 9:49 PM IST
share
ಸ್ವಾತಂತ್ರ್ಯ ಹೋರಾಟದಲ್ಲಿ ಭಾರತ ಸೇವಾದಳದ ಕೊಡುಗೆ ಅಪಾರ

ಶಿರ್ವ, ಡಿ.7: ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಬೆಂಬಲವಾಗಿ ನಿಂತು ಅವರ ಹೋರಾಟದಲ್ಲಿ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸಿದ ಭಾರತ ಸೇವಾದಳ ಸ್ವಾತಂತ್ರ್ಯ ಹೋರಾಟದಲ್ಲಿ ಅತ್ಯಪೂರ್ವ ಕೊಡುಗೆ ನೀಡಿದೆ ಎಂದು ಕಾಪು ಕ್ಷೇತ್ರ ಶಾಸಕ ಲಾಲಾಜಿ ಆರ್.ಮೆಂಡನ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಸೇವಾದಳದ ಮಾರ್ಗದರ್ಶನದಲ್ಲಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ನಿರ್ದೇಶನದಲ್ಲಿ ಭಾರತ ಸೇವಾದಳ ಉಡುಪಿ ತಾಲೂಕು ಸಮಿತಿ, ಮಕ್ಕಳ ಮೇಳ ಸಮಿತಿ, ಶಂಕರಪುರ ಸೈಂಟ್ ಜೋನ್ಸ್ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಶಂಕರಪುರ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಉಡುಪಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಶಾಲೆಗಳಲ್ಲಿ ಮಕ್ಕಳಲ್ಲಿ ಸೇವಾ ಮನೋಭಾವನೆ, ಸ್ವಯಂಶಿಸ್ತು, ದೇಶಪ್ರೇಮ, ರಾಷ್ಟ್ರೀಯ ಭಾವೈಕ್ಯತೆಯನ್ನು ಜಾಗೃತಗೊಳಿಸು ವಲ್ಲಿ ಭಾರತ ಸೇವಾದಳದ ಪಾತ್ರ ಅಪಾರವಾದುದು. ಈ ಕಾರ್ಯಕ್ಕೆ ಸರಕಾರದಿಂದ ನೆರವು ಒದಗಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದರು.

ಬಂಟಕಲ್ಲು ಶ್ರೀಮಧ್ವವಾದಿರಾಜ ತಾಂತ್ರಿಕ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ರತ್ನ ಕುಮಾರ್ ವಿದ್ಯಾರ್ಥಿಗಳ ಪುರ ಮೆರವಣಿಗೆಯನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಚರ್ಚ್‌ನ ಧರ್ಮಗುರು, ವಿದ್ಯಾಸಂಸ್ಥೆಗಳ ಸಂಚಾಲಕ ರೆ.ಫಾ.ಫರ್ಡಿನಾಂಡ್ ಗೊನ್ಸಲ್ವಿಸ್ ವಹಿಸಿದ್ದರು. ಕಟಪಾಡಿ ಗ್ರಾಪಂ ಅಧ್ಯಕ್ಷೆ ಜ್ಯೂಲಿಯೆಟ್ ವೇರಾ ಡಿೋಜ ರಾಷ್ಟ್ರಧ್ವಜಾರೋಹಣಗೈದರು.

ಮುಖ್ಯ ಅತಿಥಿಗಳಾಗಿ ಮುಂಬೈ ಉದ್ಯಮಿ ಶಶಿಧರ ಕೆ.ಶೆಟ್ಟಿ ಇನ್ನಂಜೆ, ಇನ್ನಂಜೆ ವ್ಯ.ಸೇ.ಸಹಕಾರಿ ಸಂಘದ ಅಧ್ಯಕ್ಷ ರಾಜೇಶ ರಾವ್ ಪಾಂಗಾಳ, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ತಾಪಂ ಅಧ್ಯಕ್ಷೆ ನೀತಾ ಗುರುರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ., ತಾಲೂಕು ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಬಾಯಿರಿ, ಕುರ್ಕಾಲು ಗ್ರಾಪಂ ಅಧ್ಯಕ್ಷೆ ಶೋಭಾ ಸಾಲಿಯಾನ್, ಸೇವಾದಳ ಜಿಲ್ಲಾ ಕಾರ್ಯದರ್ಶಿ ಆರೂರು ತಿಮ್ಮಪ್ಪಶೆಟ್ಟಿ, ಸದಸ್ಯ ಬಿ.ಪುಂಡಲೀಕ ಮರಾಠೆ, ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯ ಸಂಚಾಲಕ ಶಂಭುದಾಸ್ ಗುರೂಜಿ ಕುತ್ಯಾರು, ಹೆರಾಲ್ಡ್ ಡಿಸೋಜ ಉಡುಪಿ, ಅಧಿನಾಯಕರಾದ ಸತ್ಯಸಾಯಿ ಪ್ರಸಾದ್, ರಾಜೇಶ್ವರೀ, ಸಹಕಾರ್ಯದರ್ಶಿ ಡೋಮಿಯನ್ ನೊರೋನ್ನಾ, ಉಪಸ್ಥಿತರಿದ್ದರು.

ಭಾರತ ಸೇವಾದಳ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಯು. ಆರ್.ಸಭಾಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಅಶ್ವಿನ್ ರೊಡ್ರಿಗಸ್ ವಂದಿಸಿದರು. ಸತೀಶ್ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸಂಘಟಕ ಪಕ್ಕೀರಗೌಡ ನಾ.ಹಳೆಮನಿ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X