Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನರ್ಹರ ‘ರಾಜಕೀಯ ಭವಿಷ್ಯ’ ನಾಳೆ...

ಅನರ್ಹರ ‘ರಾಜಕೀಯ ಭವಿಷ್ಯ’ ನಾಳೆ ನಿರ್ಧಾರ: ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ

ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ8 Dec 2019 5:30 PM IST
share
ಅನರ್ಹರ ‘ರಾಜಕೀಯ ಭವಿಷ್ಯ’ ನಾಳೆ ನಿರ್ಧಾರ: ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ

ಬೆಂಗಳೂರು, ಡಿ. 8: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಹಾಗೂ ಅನರ್ಹ ಶಾಸಕರ ಮುಂದಿನ ‘ರಾಜಕೀಯ ಭವಿಷ್ಯ’ ನಿರ್ಧರಿಸಲಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಕಾರ್ಯ ನಾಳೆ(ಡಿ.9) ಬೆಳಗ್ಗೆ 8ರಿಂದ ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದ್ದು, ಮತ ಎಣಿಕೆಗೆ ಆಯೋಗ ಸಕಲ ಸಿದ್ಧತೆ ಕೈಗೊಂಡಿದೆ.

ಮೊದಲಿಗೆ ಅಂಚೆ ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಆ ಬಳಿಕ ಇವಿಎಂಗಳ ಮತ ಎಣಿಕೆ ನಡೆಯಲಿದೆ. ಎಲ್ಲ ಎಣಿಕೆ ಕೇಂದ್ರಗಳಲ್ಲಿ 14 ಮೇಜುಗಳನ್ನು ಅಳವಡಿಸಿದ್ದು, ಹೊಸಕೋಟೆ ಕ್ಷೇತ್ರದಲ್ಲಿ ಮಾತ್ರ 21 ಟೇಬಲ್‌ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.

ಟೇಬಲ್ ವ್ಯವಸ್ಥೆ: ಪ್ರತಿ ಮತಕ್ಷೇತ್ರದ ಮತ ಎಣಿಕೆಗೆ 14 ಟೇಬಲ್ ವ್ಯವಸ್ಥೆ ಮಾಡಲಾಗಿರುತ್ತದೆ. ಆಯಾ ಮತಕ್ಷೇತ್ರಗಳ ಮತಗಟ್ಟೆ ಸಂಖ್ಯೆ ಆಧಾರದಲ್ಲಿ ಗರಿಷ್ಠ 21 ಸುತ್ತಿನಲ್ಲಿ ಮತ ಎಣಿಕೆ ಪೂರ್ಣಗೊಳ್ಳಲಿದೆ. ಆಯೋಗದ ಅನುಮತಿಯ ನಂತರವೇ ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಮತ ಎಣಿಕೆ ಕೇಂದ್ರಗಳ ಉಸ್ತುವಾರಿಗಾಗಿ ಎಲ್ಲ ಕಡೆಗಳಲ್ಲಿ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಪ್ರತಿಯೊಂದು ಟೇಬಲ್‌ಗೂ ಎಣಿಕೆ ಸಹಾಯಕರು ಕಾರ್ಯ ನಿರ್ವಹಿಸಲಿದ್ದು, ಪ್ರತಿಯೊಂದು ಕೇಂದ್ರದಲ್ಲಿಯೂ ಸೂಕ್ಷ್ಮ-ಅತಿಸೂಕ್ಷ್ಮ ವೀಕ್ಷಕರನ್ನು ನೇಮಕ ಮಾಡಲಾಗಿದೆ.

ಮೊಬೈಲ್ ನಿಷೇಧ: ಅಭ್ಯರ್ಥಿಗಳ ಏಜೆಂಟರು, ಕೌಂಟಿಂಗ್ ಏಜೆಂಟರು ಮತ ಎಣಿಕೆ ಕೇಂದ್ರದಲ್ಲಿ ಮೊಬೈನ್‌ಫೋನ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆದುರಿಂದ ಯಾರೂ ಮೊಬೈಲ್ ಗಳನ್ನು ಎಣಿಕೆ ಕೇಂದ್ರಕ್ಕೆ ಕೊಂಡೊಯ್ಯಂತಿಲ್ಲ ಎಂದು ಸೂಚಿಸಲಾಗಿದೆ.

ಮಾಧ್ಯಮ ಪ್ರತಿನಿಧಿಗಳು ಮೊಬೈಲ್ ಬಳಕೆಗೆ ಅವಕಾಶ ನೀಡಲಾಗಿದ್ದು, ಅವರು ಮಾಧ್ಯಮ ಕೇಂದ್ರಗಳಲ್ಲಿ ಮಾತ್ರ ಮೊಬೈಲ್ ಬಳಸಲು ಅವಕಾಶವಿದೆ. ಯಾವುದೇ ಕಾರಣಕ್ಕೂ ಮತ ಎಣಿಕೆ ಕೊಠಡಿಗಳಿಗೆ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಆಯೋಗ ನಿರ್ದೇಶನ ನೀಡಿದೆ.

ಅಭ್ಯರ್ಥಿ ಅಥವಾ ಏಜೆಂಟರಿಗೆ ಮತ ಎಣಿಕೆ ಸ್ಥಳಕ್ಕೆ ಪ್ರವೇಶಿಸಲು ನಿರ್ಬಂಧ ಹೇರಿದ್ದು, ಅವರಿಗೆ ಪ್ರತ್ಯೇಕ ಸ್ಥಳ ನಿಗದಿಪಡಿಸಲಾಗಿದೆ. ಎಣಿಕಾ ಏಜೆಂಟರಿಗೆ ಕೇಂದ್ರದಲ್ಲಿ ಕುಳಿತು ಕೊಳ್ಳಲು ಕುರ್ಚಿಯ ವ್ಯವಸ್ಥೆ ಇರುವುದಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.

ನಿಷೇಧಾಜ್ಞೆ ಜಾರಿ: ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಮುನ್ನಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪೊಲೀಸ್ ಸಿಬ್ಬಂದಿ ಜತೆಗೆ ಕೆಎಸ್‌ಆರ್‌ಪಿ ತುಕಡಿ ಹಾಗೂ ಅರೆಸೇನಾ ಪಡೆಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಮೊಕ್ಕಾಂ ಹೂಡಲಿದ್ದಾರೆ.

ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಡಿ.8 ಮಧ್ಯರಾತ್ರಿ 12ಗಂಟೆಯಿಂದ ಡಿ.9ರ ಮಧ್ಯರಾತ್ರಿವರೆಗೂ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಿ ಈಗಾಗಲೇ ಆದೇಶ ಹೊರಡಿಸಲಾಗಿದೆ.

ಮತ ಎಣಿಕೆ ಕೇಂದ್ರಗಳು: ಅಥಣಿ, ಕಾಗವಾಡ, ಗೋಕಾಕ್ ಕ್ಷೇತ್ರಗಳ ಮತ ಎಣಿಕೆ ಬೆಳಗಾವಿಯ ವಾಸುದೇವ ಸೀತಾರಾಮ್ ಗೌತಮ್ ವಿದ್ಯಾಭವನ, ಯಲ್ಲಾಪುರ-ಶಿರಸಿಯ ಎಂಇಎಸ್ ಕಾಲೇಜು, ಹಿರೇಕೆರೂರು ಹಾಗೂ ರಾಣೆಬೆನ್ನೂರು- ಹಾವೇರಿ ಸರಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.

ವಿಜಯನಗರ- ಬಳ್ಳಾರಿಯ ಸರಕಾರಿ ಪಾಲಿಟೆಕ್ನಿಕ್, ಚಿಕ್ಕಬಳ್ಳಾಪುರ- ಚಿಕ್ಕಬಳ್ಳಾಪುರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆ.ಆರ್.ಪುರಂ ಹಾಗೂ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಗಳ ಮತ ಎಣಿಕೆ ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆಯ ಸೈಂಟ್ ಜೋಸೆಫ್ ಶಾಲೆಯಲ್ಲಿ ನಡೆಯಲಿದೆ. ಯಶವಂತಪುರ-ಬೆಂಗಳೂರಿನ ಆರ್.ವಿ.ಎಂಜಿನಿಯರಿಂಗ್ ಕಾಲೇಜು, ಶಿವಾಜಿನಗರ-ಬೆಂಗಳೂರಿನ ಮೌಂಟ್ ಕಾರ್ಮಲ್ ಕಾಲೇಜು, ಹೊಸಕೋಟೆ ಕ್ಷೇತ್ರದ ಎಣಿಕೆ ಕಾರ್ಯವು ದೇವನಹಳ್ಳಿಯ ಅಶೋಕ ಇಂಟರ್‌ನ್ಯಾಷನಲ್ ಸ್ಕೂಲ್, ಕೆ.ಆರ್.ಪೇಟೆ-ಮಂಡ್ಯದ ಸರಕಾರಿ ಪಾಲಿಟೆಕ್ನಿಕ್ ಹಾಗೂ ಹುಣಸೂರು ಕ್ಷೇತ್ರದ್ದು ಹುಣಸೂರಿನ ಡಿ.ದೇವರಾಜ ಅರಸು ಪದವಿ ಕಾಲೇಜಿನಲ್ಲಿ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಮತ ಎಣಿಕೆ ಕೇಂದ್ರದಲ್ಲಿ ಅಧಿಕಾರಿಗಳು ಸೇರಿ ಬೆಳಗಾವಿಯ ಮೂರು ಕ್ಷೇತ್ರಗಳ ಮತ ಎಣಿಕೆ ಕಾರ್ಯದ ಭದ್ರತೆಗೆ 750 ಮಂದಿಯನ್ನು ನಿಯೋಜಿಸಲಾಗಿದೆ. ಬೆಳಗಾವಿ ತಾಲೂಕಿನಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮದ್ಯ ಮಾರಾಟ ನಿಷೇಧಿಸಲಾಗಿದೆ. ಶಾಂತಿಯುತ ಮತ ಎಣಿಕೆಗೆ ಕ್ರಮ ಕೈಗೊಳ್ಳಲಾಗಿದೆ

-ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಚುನಾವಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X