ಭಟ್ಕಳ: ಕೆ ಬಸ್ - ಕಾರು ನಡುವೆ ಅಪಘಾತ, ಇಬ್ಬರಿಗೆ ಗಾಯ
![ಭಟ್ಕಳ: ಕೆ ಬಸ್ - ಕಾರು ನಡುವೆ ಅಪಘಾತ, ಇಬ್ಬರಿಗೆ ಗಾಯ ಭಟ್ಕಳ: ಕೆ ಬಸ್ - ಕಾರು ನಡುವೆ ಅಪಘಾತ, ಇಬ್ಬರಿಗೆ ಗಾಯ](https://www.varthabharati.in/sites/default/files/images/articles/2019/12/8/222736-1575814592.jpg)
ಭಟ್ಕಳ: ಇಲ್ಲಿನ ಸರ್ಪನಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಬಸ್ ಹಾಗೂ ಕಾರು ನಡುವೆ ಸಂಭವಿಸಿದ
ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.
ಮಡಿಕೇರಿ ಪಿನಾರಾಯಿ ಪಟ್ಟಣದ ರಘು ಮತ್ತು ಜತೀಶ ಗಾಯಗೊಂಡವರು. ಅವರನ್ನು ಇಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದಾಗ, ಅಂಕೋಲಾದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿದೆ ಎಂದು ದೂರಲಾಗಿದೆ.
ಈ ಕುರಿತು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story