Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳಿಗೆ ಪೋಷಕರು ಪರಿಸರವನ್ನು...

ಮಕ್ಕಳಿಗೆ ಪೋಷಕರು ಪರಿಸರವನ್ನು ಪರಿಚಯಿಸಬೇಕು: ಪರಿಸರ ತಜ್ಞ ಡಾ.ಯಲ್ಲಪ್ಪರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ8 Dec 2019 8:37 PM IST
share
ಮಕ್ಕಳಿಗೆ ಪೋಷಕರು ಪರಿಸರವನ್ನು ಪರಿಚಯಿಸಬೇಕು: ಪರಿಸರ ತಜ್ಞ ಡಾ.ಯಲ್ಲಪ್ಪರೆಡ್ಡಿ

ಬೆಂಗಳೂರು, ಡಿ.8: ಪೋಷಕರು ಮಕ್ಕಳಿಗೆ ಪರಿಸರವನ್ನು ಪರಿಚಯಿಸುವ ಕೆಲಸ ಮಾಡಬೇಕು ಎಂದು ಪರಿಸರ ತಜ್ಞ ಡಾ.ಎ.ಎನ್.ಯಲ್ಲಪ್ಪರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ವಾಡಿಯಾ ಸಭಾಂಗಣದಲ್ಲಿ ಅಂಕಿತ ಪುಸ್ತಕ ಪ್ರಕಾಶನದಿಂದ ಆಯೋಜಿಸಿದ್ದ ಲೇಖಕ ಡಾ. ಕೆ.ಎನ್.ಗಣೇಶಯ್ಯ ಅವರ ‘ಸಸ್ಯಸಗ್ಗ’ ಮತ್ತು ‘ಹೊರನೋಟ’ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ವಿಜ್ಞಾನಿಗಳು ನೋಡಲಾಗದ ಎಷ್ಟೋ ಪರಿಸರ ವೈಶಿಷ್ಟಗಳನ್ನು ಐದು ವರ್ಷ ಮಗು ನೋಡುತ್ತದೆ. ಆದರೆ, ಪೋಷಕರು ತಮ್ಮ ಮಕ್ಕಳನ್ನು ನಾಲ್ಕು ಗೋಡೆಗಳ ಮಧ್ಯೆಗೆ ಸೀಮಿತಗೊಳಿಸುತ್ತಿರುವುದರಿಂದ ಆ ಮಕ್ಕಳಿಗೆ ಪರಿಸರದ ಪರಿಚಯವೇ ಸಿಗುತ್ತಿಲ್ಲ. ಆದುದರಿಂದಾಗಿ, ಮಕ್ಕಳಿಗೆ ಪರಿಸರ ಅರಿವು ಮೂಡಿಸಬೇಕಿದೆ ಎಂದರು.

ಮಕ್ಕಳಲ್ಲಿ ಪರಿಸರದ ಕುರಿತು ತಿಳಿಯುವ ಕುತೂಹಲ ಸಾಕಷ್ಟಿರುತ್ತದೆ. ಆದರೆ, ಅವರಲ್ಲಿ ಮೂಡುವ ಪ್ರಶ್ನೆಗಳಿಗೆ ವಿಜ್ಞಾನಿಗಳ ಬಳಿಯೂ ಉತ್ತರವಿರಲ್ಲ. ಈ ಕುತೂಹಲ ಪೋಷಿಸಿ ಬೆಳೆಸಿದರೆ ಮಕ್ಕಳು ಭವಿಷ್ಯದಲ್ಲಿ ಪರಿಸರ ವಿಜ್ಞಾನಿಗಳಾಗುತ್ತಾರೆ. ಲೇಖಕ ಗಣೇಶಯ್ಯ ತಮ್ಮ ಸಾಹಿತ್ಯದ ಮೂಲಕ ನಿಸರ್ಗದ ಮೂಲದ ಬಗ್ಗೆ ಬರೆದಿದ್ದಾರೆ ಎಂದರು.

ಇಂದಿನ ಮನುಷ್ಯನ ಸಂಶೋಧನೆಗಳು ಬಾಂಬ್, ಕ್ಷಿಪಣಿಗಳವರೆಗೆ ಸಾಗಿದೆ. ಅದಕ್ಕೆ ಕೋಟ್ಯಾಂತರ ರೂ.ಗಳು ಖರ್ಚು ಮಾಡುತ್ತಾರೆ, ವಿಜ್ಞಾನಿಗಳು ದಿನದ 24 ಗಂಟೆ ಕೆಲಸ ಮಾಡುತ್ತಾರೆ. ಆದರೆ, ಅವುಗಳನ್ನು ಯಾರ ಮೇಲೆ ಪ್ರಯೋಗ ಮಾಡುತ್ತಿದ್ದಾರ ಎಂದ ಅವರು, ಭೂಮಿ, ಪರಿಸರದ ನಾಶಕ್ಕಾಗಿ ಇವುಗಳನ್ನು ಬಳಕೆ ಮಾಡಬೇಕಾ ಎಂದು ಹೇಳಿದರು.

ವಿಜ್ಞಾನಿ ಡಾ.ಆರ್.ಉಮಾಶಂಕರ್ ಮಾತನಾಡಿ, ಲೇಖಕ ಗಣೇಶಯ್ಯ ಸಸ್ಯ ಜಗತ್ತಿನ ಹಲವು ವೈಶಿಷ್ಟಗಳನ್ನು ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ. ಅವರು ನಾಲ್ಕು ದಶಕಗಳಲ್ಲಿ ಸಸ್ಯ ಸಂಶೋಧನೆಯಲ್ಲಿ ಕಂಡ ಸೋಜಿಗಳನ್ನು ದಾಖಲಿಸಿದ್ದಾರೆ. ಈ ಕೃತಿಯ ಓದು ಸಸ್ಯಗಳ ಕುರಿತ ಸಂಶೋಧನೆಗೆ ಪ್ರೇರೇಪಿಸುತ್ತದೆ. ಆಸಕ್ತಿದಾಯಕ ವೈಜ್ಞಾನಿಕ ಅಂಶಗಳನ್ನು ಒಳಗೊಂಡಿರುವ ಈ ಕೃತಿಯಲ್ಲಿ ಲೇಖಕರ ಅನುಭವದ ದೊಡ್ಡ ಪ್ರಯಾಣವಿದೆ ಎಂದು ಹೇಳಿದರು.

ಲೇಖಕ ಡಾ.ಕೆ.ಎನ್.ಗಣೇಶಯ್ಯ ಮಾತನಾಡಿ, ಸಸ್ಯ ಸಗ್ಗ ಕೃತಿಯು ವಿಜ್ಞಾನ, ಆತ್ಮಕಥೆ, ಅನುಭವ ಸೇರಿದಂತೆ ಎಲ್ಲದರ ಕಲಸುಮೇಲೊಗರವಾಗಿದೆ. ಸಸ್ಯಗಳ ಪ್ರೇಮ, ಸ್ವಯಂವರ, ಕಲಹ ಸೇರಿದಂತೆ ಹಲವು ಕುತೂಹಲಕರ ಅಂಶಗಳನ್ನು ಒಳಗೊಂಡಿದೆ. ಎಲ್ಲರೂ ಪುಸ್ತಕಕೊಂಡು ಓದುವಂತೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X