Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಸೋಲು

ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಸೋಲು

ಮೂರು ರಾಷ್ಟ್ರಗಳ ಜೂನಿಯರ್ ಮಹಿಳಾ ಹಾಕಿ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ8 Dec 2019 11:45 PM IST
share
ಆಸ್ಟ್ರೇಲಿಯ ವಿರುದ್ಧ  ಭಾರತಕ್ಕೆ ಸೋಲು

ಕ್ಯಾನ್‌ಬೆರಾ, ಡಿ.8: ತ್ರಿರಾಷ್ಟ್ರಗಳ ಹಾಕಿ ಟೂರ್ನಮೆಂಟ್‌ನ ನಾಲ್ಕನೇ ಪಂದ್ಯದಲ್ಲಿ ಭಾರತೀಯ ಜೂನಿಯರ್ ಮಹಿಳಾ ಹಾಕಿ ತಂಡ ಆಸ್ಟ್ರೇಲಿಯ ವಿರುದ್ಧ 1-2 ಅಂತರದಿಂದ ಸೋಲನುಭವಿಸಿದೆ. ಟೂರ್ನಿಯಲ್ಲಿ ಮೊದಲ ಸೋಲು ಕಂಡ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಭಾರತ ನಾಲ್ಕು ಪಂದ್ಯಗಳಲ್ಲಿ ಏಳು ಅಂಕವನ್ನು ಗಳಿಸಿದೆ. ಗೋಲು ವ್ಯತ್ಯಾಸದಲ್ಲಿ ಆತಿಥೇಯ ಆಸ್ಟ್ರೇಲಿಯಗಿಂತ ಮುಂದಿದೆ. ನಾಲ್ಕು ಪಂದ್ಯಗಳಲ್ಲಿ ಕೇವಲ ಮೂರು ಅಂಕಗಳನ್ನು ಗಳಿಸಿರುವ ನ್ಯೂಝಿಲ್ಯಾಂಡ್ ಮೂರನೇ ಸ್ಥಾನದಲ್ಲಿದೆ.

 ರವಿವಾರ ನಡೆದ ನಾಲ್ಕನೇ ಹಾಗೂ ಅಂತಿಮ ಪಂದ್ಯದಲ್ಲಿ ಗಗನ್‌ದೀಪ್ ಕೌರ್ 53ನೇ ನಿಮಿಷದಲ್ಲಿ ಭಾರತದ ಪರ ಏಕೈಕ ಗೋಲು ಗಳಿಸಿ 1-1ರಿಂದ ಸಮಬಲ ಸಾಧಿಸಿದರು. 15ನೇ ನಿಮಿಷದಲ್ಲಿ ಗೋಲು ಗಳಿಸಿದ ಅಬಿಗೈಲ್ ವಿಲ್ಸನ್ ಆಸ್ಟ್ರೇಲಿಯಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟಿದ್ದರು.

ಆಸ್ಟ್ರೇಲಿಯದ ವಿಲ್ಸನ್ 56ನೇ ನಿಮಿಷದಲ್ಲಿ ಮತ್ತೊಂದು ಗೋಲು ಗಳಿಸಿ ತನ್ನ ತಂಡಕ್ಕೆ 2-1 ಅಂತರದ ಗೆಲುವು ತಂದುಕೊಟ್ಟರು.

ಭಾರತೀಯ ತಂಡ ಆರಂಭದಲ್ಲಿ ಕಠಿಣ ಪರಿಸ್ಥಿತಿ ಎದುರಿಸಿದ್ದು, ಆತಿಥೇಯರಿಂದ ನಿರಂತರವಾಗಿ ಒತ್ತಡ ಎದುರಿಸಿತು. 15ನೇ ನಿಮಿಷದಲ್ಲಿ ಆಸ್ಟ್ರೇಲಿಯಕ್ಕೆ ಪೆನಾಲ್ಟಿ ಕಾರ್ನರ್ ಅವಕಾಶ ಲಭಿಸಿದ್ದು, ಇದನ್ನು ಗೋಲಾಗಿ ಪರಿವರ್ತಿಸಲು ವಿಲ್ಸನ್ ಯಶಸ್ವಿಯಾದರು.ಪರಿಣಾಮವಾಗಿ ಆತಿಥೇಯ ತಂಡ 1-0 ಮುನ್ನಡೆ ದಾಖಲಿಸಿತು. ಭಾರತ ಎರಡನೇ ಕ್ವಾರ್ಟರ್‌ನಲ್ಲಿ ಪ್ರತಿರೋಧ ಒಡ್ಡಲು ಯತ್ನಿಸಿತು. ಆದರೆ ಆತಿಥೇಯ ತಂಡ ಇದಕ್ಕೆ ಅವಕಾಶ ನೀಡಲಿಲ್ಲ. ಪ್ರವಾಸಿಗರಿಗೆ ಸಮಬಲ ಸಾಧಿಸಲು ಸಾಧ್ಯವಾಗಲಿಲ್ಲ.

ಭಾರತ ತಂಡ 22ನೇ ನಿಮಿಷದಲ್ಲಿ ಪೆನಾಲ್ಟಿಕಾರ್ನರ್ ಅವಕಾಶ ಪಡೆದಿದ್ದರೂ ಪ್ರಯೋಜನವಾಗಲಿಲ್ಲ. 26ನೇ ನಿಮಿಷದಲ್ಲಿ ಭಾರತ ಮತ್ತೊಂದು ಪೆನಾಲ್ಟಿಕಾರ್ನರ್ ಅವಕಾಶ ಪಡೆದಿತ್ತು. ಆದರೆ, ಗೋಲನ್ನು ನಿರಾಕರಿಸಿದ ಆಸ್ಟ್ರೇಲಿಯದ ಹನ್ನಾಹ್ ಅಸ್ಟಬರಿ ತನ್ನ ತಂಡ 1-0 ಮುನ್ನಡೆ ಕಾಯ್ದುಕೊಳ್ಳಲು ನೆರವಾದರು.

 ಎರಡು ನಿಮಿಷಗಳ ಬಳಿಕ ಆಸ್ಟ್ರೇಲಿಯ ಎರಡು ಬಾರಿ ಪೆನಾಲ್ಟಿ ಸ್ಟ್ರೋಕ್ ಮೂಲಕ ಎರಡು ಗೋಲುಗಳನ್ನು ಗಳಿಸುವ ಅಪೂರ್ವ ಅವಕಾಶ ಪಡೆದಿತ್ತು. ಆದರೆ, ಗೋಲ್‌ಕೀಪರ್ ಬಿಚು ದೇವಿ ಖರಿಬಮ್ ಗೋಲನ್ನು ನಿರಾಕರಿಸುವುದರೊಂದಿಗೆ ಆಸೀಸ್‌ದ ಮುನ್ನಡೆಗೆ ತಡೆಯೊಡ್ಡಿದರು. ನಾಲ್ಕನೇ ಕ್ವಾರ್ಟರ್‌ನ 53ನೇ ನಿಮಿಷದಲ್ಲಿ ಭಾರತ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದಿದ್ದು ಗಗನ್‌ದೀಪ್ ಕೌರ್ ಭಾರತ ಸಮಬಲ ಸಾಧಿಸಲು ನೆರವಾದರು. ಆಸ್ಟ್ರೇಲಿಯದ ಅಬಿಗೈಲ್ ವಿಲ್ಸನ್ ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಪಂದ್ಯದಲ್ಲಿ ಎರಡನೇ ಗೋಲು ಗಳಿಸಿ 2-1 ಅಂತರದಿಂದ ಗೆಲುವು ತಂದುಕೊಟ್ಟರು. ಭಾರತ ಉಳಿದ 4 ನಿಮಿಷಗಳ ಆಟದಲ್ಲಿ ಸಮಬಲ ಸಾಧಿಸಲು ಹೋರಾಟ ನಡೆಸಿತು. ಅಂತಿಮವಾಗಿ ಆಸ್ಟ್ರೇಲಿಯ 2-1 ಅಂತರದಿಂದ ಜಯ ಸಾಧಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X