Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೌರ ಕಾರ್ಮಿಕರ ಕೆಲಸ ಮಾಡದಿದ್ದರೆ...

ಪೌರ ಕಾರ್ಮಿಕರ ಕೆಲಸ ಮಾಡದಿದ್ದರೆ ಅಟ್ರಾಸಿಟಿ ಪ್ರಕರಣ: ಜಗದೀಶ್‍ ಹಿರೇಮಣಿ

"ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಕೇಸ್"

ವಾರ್ತಾಭಾರತಿವಾರ್ತಾಭಾರತಿ9 Dec 2019 11:55 PM IST
share
ಪೌರ ಕಾರ್ಮಿಕರ ಕೆಲಸ ಮಾಡದಿದ್ದರೆ ಅಟ್ರಾಸಿಟಿ ಪ್ರಕರಣ: ಜಗದೀಶ್‍ ಹಿರೇಮಣಿ

ತುಮಕೂರು, ಡಿ.9: ಸಫಾಯಿ ಕರ್ಮಚಾರಿಗಳಿಗೆ ನೀಡಬೇಕಾದ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡದ ಅಧಿಕಾರಿಗಳನ್ನು ದೆಹಲಿ ನ್ಯಾಯಾಲಯಕ್ಕೆ ಕರೆಸಿ, ಅಟ್ರಾಸಿಟಿ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್ ಹಿರೇಮಣಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿಗಳಿಗೆ ನೀಡಬೇಕಾದ ಸೌಲಭ್ಯವನ್ನು ಕಾಲಕಾಲಕ್ಕೆ ನೀಡಬೇಕು, ಪೌರ ಕಾರ್ಮಿಕರಿಗೆ ಭವಿಷ್ಯ ನಿಧಿ ವಂತಿಗೆ ಕಟ್ಟದ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಪಾವಗಡ ಪುರಸಭೆಯಲ್ಲಿ ಪೌರ ಕಾರ್ಮಿಕರ ವಸತಿಗಾಗಿ ಗುರುತಿಸಿರುವ ಭೂಮಿಯಲ್ಲಿ ಬಂಡೆ ಇದ್ದು, ಈ ಜಾಗದಲ್ಲಿ ಮನೆ ಕಟ್ಟಲು ಆಗುವುದಿಲ್ಲ ಎಂದು ಪೌರ ಕಾರ್ಮಿಕರು ಸಮಸ್ಯೆಯನ್ನು ಬಿಚ್ಚಿಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಜಗದೀಶ್ ಹಿರೇಮಣಿ ಅವರು, ಆ ಜಾಗದಲ್ಲಿ ಮನೆಕಟ್ಟಲು ಆಗದಿದ್ದ ಮೇಲೆ ಬೇರೆ ಜಾಗ ಗುರುತಿಸಿ, ಸದರಿ ಜಾಗ ಮನೆ ಕಟ್ಟಲು ಯೋಗ್ಯವೋ ಅಲ್ಲವೋ ಎಂಬ ಬಗ್ಗೆ ಪಿಡಬ್ಲ್ಯೂಡಿ ಅಧಿಕಾರಿಗಳಿಂದ ವರದಿ ಪಡೆಯುವಂತೆ ಸೂಚಿಸಿದರು.
ಚಿಕ್ಕನಾಯಕಹಳ್ಳಿ ಪುರಸಭೆ ಪೌರ ಕಾರ್ಮಿಕರು 2011ರಿಂದ ಭವಿಷ್ಯ ನಿಧಿ ವಂತಿಗೆ ಕಟ್ಟುತ್ತಿರುವ ಬಗ್ಗೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡುತ್ತಿಲ್ಲ, ಕಳೆದ ಮೂರು ವರ್ಷಗಳಿಂದ ಇದೇ ರೀತಿ ಮಾಡುತ್ತಿದ್ದಾರೆ, ಪ್ರತಿಭಟನೆ ಮಾಡಿ, ದಿನಗಟ್ಟಲೆ ಕಚೇರಿ ಮುಂದೆ ಕುಳಿದ್ದರು ಯಾವುದೇ ಪ್ರಯೋಜನವಾಗಲಿಲ್ಲ ಎಂದು ಅಲವತ್ತುಕೊಂಡರು.

ಚಿ.ನಾ.ಹಳ್ಳಿ ಪುರಸಭೆ ಮುಖ್ಯಾಧಿಕಾರಿ ಮಾತನಾಡಿ, 2011ರಿಂದ ಭವಿಷ್ಯ ನಿಧಿ ಕಟ್ಟದ್ದರಿಂದ 61ಲಕ್ಷ ರೂ ವಂತಿಗೆ ಕಟ್ಟಲು ಭವಿಷ್ಯ ನಿಧಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದು, ಹಣ ಕಟ್ಟಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಆಗ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಪೌರ ಕಾರ್ಮಿಕರು ಸತ್ತು ಹೋಗಿದ್ದಾರೆ. ಅವರಿಗೆ ಹೇಗೆ ಸೌಲಭ್ಯ ನೀಡುತ್ತೀರಾ? ಎಂದು ಹಿರೇಮಣಿ ಅವರು ಪ್ರಶ್ನಿಸಿದರು.

ಪೌರ ಕಾರ್ಮಿಕರಿಗೆ ವೈಯಕ್ತಿಕವಾಗಿ ಇಎಸ್‍ಐ, ಪಿಎಫ್ ಕಟ್ಟುತ್ತಿರುವ ದಾಖಲೆಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಮಾಹಿತಿ ನೀಡುವಂತೆ ಎಲ್ಲ ಪುರಸಭೆ, ಪಟ್ಟಣ ಪಂಚಾಯತಿ, ನಗರಸಭೆ, ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಕೇಶ್‍ ಕುಮಾರ್ ಸೂಚಿಸಿದರು.

ಮಹಾನಗರ ಪಾಲಿಕೆಯಿಂದ ಪೌರ ಕಾರ್ಮಿಕರ ವಸತಿಗಾಗಿ ಭೂಮಿಯನ್ನು ನಿಗದಿ ಮಾಡಿದ್ದರೂ ಹಂಚುತ್ತಿಲ್ಲ ಏಕೆ ಎಂದು ಪಾಲಿಕೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಅವರು, ಗುರುತಿಸಿರುವ ಜಾಗವನ್ನು ಹಂಚಿ ಮಾಡಿ ಪೌರ ಕಾರ್ಮಿಕರಿಗೆ ವಸತಿ ನಿರ್ಮಿಸಿಕೊಡಲು ಕ್ರಮ ಕೈಗೊಳ್ಳಬೇಕು, ಇನ್ನೊಂದು ತಿಂಗಳಲ್ಲಿ ಈ ಕೆಲಸವನ್ನು ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಾನಗರ ಪಾಲಿಕೆಯಿಂದ ಆರು ತಿಂಗಳಿಂದ ಪೌರ ಕಾರ್ಮಿಕರಿಗೆ ತಿಂಡಿ ನೀಡಿಲ್ಲ, ಇಂದಿರಾ ಕ್ಯಾಟೀನ್‍ನಿಂದ ತಿಂಡಿ ನೀಡಲು ಪಾಲಿಕೆ ಸಾಮಾನ್ಯ ಸಭೆ ಒಪ್ಪಿಗೆ ನೀಡಿದ್ದು, ಮುಂದಿನ ತಿಂಗಳಿಂದ ನೀಡಲಾಗುವುದು ಎಂದು ಪರಿಸರ ಇಂಜಿನಿಯರ್ ಸಭೆಗೆ ತಿಳಿಸಿದರು, ಇದು ಅವೈಜ್ಞಾನಿಕವಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಿಂದ ಇದಕ್ಕೆ ಒಪ್ಪಿಗೆ ನೀಡುವುದಿಲ್ಲ, ಇಂದಿರಾ ಕ್ಯಾಂಟೀನ್‍ನಿಂದ ಪೌರ ಕಾರ್ಮಿಕರಿಗೆ ತಿಂಡಿ ನೀಡಿದ ಜನ ಸಾಮಾನ್ಯರಿಗೆ ನೀಡಲು ತೊಂದರೆಯಾಗುತ್ತದೆ. ಪೌರ ಕಾರ್ಮಿಕರಿಗೆ ಪ್ರತ್ಯೇಕವಾಗಿ ತಿಂಡಿ ನೀಡಿ ಇಲ್ಲ ಪೌರಾಡಳಿತ ಇಲಾಖೆಯಿಂದ ಒಪ್ಪಿಗೆ ಪಡೆದು ನೀಡಿ ಎಂದರು.

ಪೌರ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‍ನಿಂದ ನೀಡುವ ತಿಂಡಿ ನೀಡದಂತೆ ಸೂಚನೆ ಹಿರೇಮಣಿ ಅವರು, ಇಂದಿರಾ ಕ್ಯಾಂಟೀನ್‍ನಲ್ಲಿ ಐದು ರೂಪಾಯಿಗೆ ತಿಂಡಿ ಸಿಗುತ್ತದೆ, ಉಳಿದ ಹಣವನ್ನು ಪೌರ ಕಾರ್ಮಿಕರಿಗೆ ನೀಡಿದ್ದೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಅವರು, ಮೊದಲು ತಿಂಡಿ ನೀಡಿ, ಹಣವನ್ನು ಪೌರ ಕಾರ್ಮಿಕರ ಖಾತೆಗೆ ಹಾಕಿ, ಹದಿನೈದು ದಿನದಲ್ಲಿ ತಿಂಡಿ ನೀಡುವುದನ್ನು ಪ್ರಾರಂಭಿಸಬೇಕು ಎಂದು ಸೂಚಿಸಿದರು.

ಕೊರಟಗೆರೆ ಪಟ್ಟಣ ಪಂಚಾಯತ್ ನಲ್ಲಿ ಆರು ತಿಂಗಳಿಂದ ಪೌರ ಕಾರ್ಮಿಕರಿಗೆ ತಿಂಡಿ ಕೊಟ್ಟಿಲ್ಲ. ಸರ್ಕಾರದ ಆದೇಶವಾದಗಿನಿಂದ ಇಲ್ಲಿಯವರೆಗೆ ಹಣವನ್ನು ಪೌರ ಕಾರ್ಮಿಕರಿಗೆ ನೀಡಬೇಕು. ಸರ್ಕಾರಿ ಆದೇಶಕ್ಕೆ ಬೆಲೆ ಇಲ್ಲವೇ? ಎಂದು ಕೊರಟಗೆರೆ ಮುಖ್ಯಾಧಿಕಾರಿ ಲಕ್ಷ್ಮಣ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ವಚ್ಚತಾಗಾರರನ್ನಾಗಿ ಕೆಲಸ ಮಾಡುತ್ತಿದ್ದವರನ್ನು ನೇಮಿಸಿಕೊಳ್ಳಲಾಗಿದೆಯೇ ಎಂದು ಜಿಲ್ಲಾ ಪಂಚಾಯತ್ ಅಧಿಕಾರಿಗಳನ್ನು ಪ್ರಶ್ನಿಸಿದ ಜಗದೀಶ್ ಹಿರೇಮಣಿ ಅವರು, ಬಹುತೇಕ ಹಳೆಯವರನ್ನು ತೆಗೆದುಕೊಳ್ಳಲಾಗಿದೆ. ಪೌರಕಾರ್ಮಿಕ ಹುದ್ದೆಗೆ 7ನೇ ತರಗತಿ ವ್ಯಾಸಂಗ ಮಾಡಿರಬೇಕು ಎಂಬ ನಿಯಮ ಮಾಡಿರುವುದರಿಂದ ಹಳಬರನ್ನು ತೆಗೆದುಕೊಳ್ಳಲು ಆಗಿಲ್ಲ ಎಂದು ತಿಳಿಸಿದರು.

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರಿಗೆ ವಿದ್ಯಾರ್ಹತೆ ಇಲ್ಲ ಇನ್ನು ಗ್ರಾಮ ಪಂಚಾಯತ್ ನಲ್ಲಿ ಏಕೆ? ಅವೈಜ್ಞಾನಿಕ ಕ್ರಮದಿಂದ ನೈಜ ಕಾರ್ಮಿಕರನ್ನು ಹೊರಗಿಡುತ್ತಿರುವುದು ಸರಿಯಲ್ಲ. ಪೌರ ಕಾರ್ಮಿಕರಾಗಿ ದುಡಿಯುತ್ತಿರುವವರನ್ನು ಗುರುತಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಹಿರೇಮಣಿ ಅವರು, ಸಂಬಳ ಇಲ್ಲದಾಗ ದುಡಿಸಿಕೊಂಡು ಈಗ ಹೊರಗಿಡುತ್ತೀರಾ ? ಗ್ರಾಮ ಪಂಚಾಯತ್ ಮಟ್ಟದಲ್ಲಿ ತನಿಖೆಯಾಗಲಿ. ನೈಜ ಫಲಾನುಭವಿಗಳನ್ನು ಗುರುತಿಸುವ ಕೆಲಸವನ್ನು ಅಧಿಕಾರಿಗಳು ಕೆಲಸ ಮಾಡಬೇಕು. ಅಧ್ಯಕ್ಷರಿಗೆ, ಪಿಡಿಒಗೆ ಬೇಕಾದವರನ್ನು ಕಳುಹಿಸುತ್ತಾರೆ ಅದನ್ನು ಒಪ್ಪುತ್ತೀರಾ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಎಸ್ಪಿ ವಂಶಿಕೃಷ್ಣ, ಸಿಇಒ ಶುಭಾ ಕಲ್ಯಾಣ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರೇಮನಾಥ್, ಡಿಎಚ್‍ಒ ಚಂದ್ರಕಲಾ, ನಗರಾಭಿವೃದ್ಧಿ ಕೋಶದ ನಿರ್ದೇಶಕ ರಂಗಸ್ವಾಮಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ರಂಗೇಗೌಡ, ಬಿಸಿಎಂ ಅಧಿಕಾರಿ ಸುಭ್ರಾನಾಯ್ಕ್, ಪರಿಶಿಷ್ಟ ಪಂಗಡದ ಕಲ್ಯಾಧಿಕಾರಿ ಪ್ರೇಮಾ, ಸಫಾಯಿ ಕರ್ಮಚಾರಿ ಸದಸ್ಯ ಕದರಪ್ಪ ಸೇರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X