Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಐಟಿಯು ಅಭ್ಯರ್ಥಿಗಳ ಗೆಲುವು ಖಚಿತ:...

ಸಿಐಟಿಯು ಅಭ್ಯರ್ಥಿಗಳ ಗೆಲುವು ಖಚಿತ: ಬಿ.ಕೆ. ಇಮ್ತಿಯಾಝ್

ಪಟ್ಟಣ ವ್ಯಾಪಾರ ಸಮಿತಿ ಚುನಾವಣೆ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ10 Dec 2019 8:00 PM IST
share
ಸಿಐಟಿಯು ಅಭ್ಯರ್ಥಿಗಳ ಗೆಲುವು ಖಚಿತ: ಬಿ.ಕೆ. ಇಮ್ತಿಯಾಝ್

ಮಂಗಳೂರು, ಡಿ.10: ಪಟ್ಟಣ ವ್ಯಾಪಾರ ಸಮಿತಿ ಚುನಾವಣೆಯಲ್ಲಿ ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ (ಸಿಐಟಿಯು) ಎಲ್ಲ ಅಭ್ಯರ್ಥಿಗಳು ಜಯಶಾಲಿಯಾಗಲಿದ್ದಾರೆ ಎಂದು ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಪಟ್ಟಣ ವ್ಯಾಪಾರ ಸಮಿತಿ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು. ಬೀದಿಬದಿ ವ್ಯಾಪಾರಸ್ಥರ ಪರವಾಗಿ ಸಿಐಟಿಯು ದೇಶಾದ್ಯಂತ ಹೋರಾಟ ನಡೆಸಿದ ಫಲವಾಗಿ ಬೀದಿಬದಿ ವ್ಯಾಪಾರಸ್ಥರ ಜೀವನೋಪಾಯ ಹಕ್ಕುಗಳು ಮತ್ತು ನಿಯಂತ್ರಣ ವಿಧೇಯಕ-2014 ಜಾರಿಗೆ ಬಂದಿದೆ. ಈ ಕಾಯ್ದೆಯ ನಿರ್ದೇಶನದಂತೆ ಚುನಾವಣೆ ನಡೆಯುತ್ತಿದೆ ಎಂದರು.

ಚುನಾವಣೆ ನಂತರ ರಸ್ತೆಬದಿ ವ್ಯಾಪಾರಸ್ಥರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಬೀಳಲಿದೆ. ಬೀದಿಬದಿ ವ್ಯಾಪಾರಸ್ಥರ ಸಮಸ್ಯೆಗಳ ಪರಿಹಾರಕ್ಕೆ ಕಾನೂನಾತ್ಮಕ ವೇದಿಕೆ ಸೃಷ್ಟಿ ಆಗಲಿದೆ. ರಸ್ತೆ ಬದಿ ವ್ಯಾಪಾರಸ್ಥರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಡಿ.21ರಂದು ನಡೆಯಲಿರುವ ಚುನಾವಣೆಗೆ ಈಗಾಗಲೇ ಅಧಿಸೂಚನೆ ಪ್ರಕಟವಾದೆ. ಬೀದಿಬದಿ ವ್ಯಾಪಾರಸ್ಥರ ಗುರುತು ಚೀಟಿ ಮತ್ತು ಪ್ರಮಾಣಪತ್ರ ಹೊಂದಿರುವ ಬೀದಿಬದಿ ವ್ಯಾಪಾರಸ್ಥರು ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಮತದಾನ ಮಾಡಲು ಅರ್ಹರಾಗಿರುತ್ತಾರೆ ಎಂದು ಹೇಳಿದರು.

ಪಟ್ಟಣ ವ್ಯಾಪಾರ ಸಮಿತಿಯ 10 ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ. 3 ಮಹಿಳಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಅಂಗವಿಕಲ ವಿಭಾಗದಲ್ಲಿ ತಲಾ ಒಬ್ಬರು ಮತ್ತು ಸಾಮಾನ್ಯ ವಿಭಾಗದಲ್ಲಿ ಇಬ್ಬರು ಅಭ್ಯರ್ಥಿ ಗಳು ಸ್ಪರ್ಧಿಸಲಿದ್ದಾರೆ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಎಲ್ಲ 10 ಅಭ್ಯರ್ಥಿಗಳ ಆಯ್ಕೆಯನ್ನು ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಪ್ರಕಟಿಸಿ ಸರ್ವ ಸದಸ್ಯರ ಅನುಮೋದನೆ ಪಡೆಯಲಾಯಿತು. ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ನೇತೃತ್ವದಲ್ಲಿ ಚುನಾವಣೆ ಎದುರಿಸಲು ತೀರ್ಮಾನಿಸಲಾಯಿತು.

 ಈ ಸಂದರ್ಭ ಸಂಘದ ಅಧ್ಯಕ್ಷ ಮುಹಮ್ಮದ್ ಮುಸ್ತಫ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಸಂಘದ ಮುಖಂಡರಾದ ಹಸನ್ ಕುದ್ರೋಳಿ, ಶಿವಪ್ಪ, ಹಿತೇಶ್, ಶ್ರೀಧರ, ಆದಮ್ ಬಜಾಲ್, ಸಿಖಂದರ್, ಶಂಕರ್, ನಾಗರಾಜ್, ಮಾರುತಿ, ಮೇರಿ, ಸಿದ್ದಮ್ಮ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X