Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 312 ಪದಕಗಳನ್ನು ಬಾಚಿಕೊಂಡ ಭಾರತ

312 ಪದಕಗಳನ್ನು ಬಾಚಿಕೊಂಡ ಭಾರತ

ದಕ್ಷಿಣ ಏಶ್ಯನ್ ಗೇಮ್ಸ್

ವಾರ್ತಾಭಾರತಿವಾರ್ತಾಭಾರತಿ10 Dec 2019 11:52 PM IST
share
312 ಪದಕಗಳನ್ನು ಬಾಚಿಕೊಂಡ ಭಾರತ

ಕಠ್ಮಂಡು, ಡಿ.10: ದಕ್ಷಿಣ ಏಶ್ಯನ್ ಗೇಮ್ಸ್‌ನಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಭಾರತ ಒಟ್ಟು 312 ಪದಕಗಳನ್ನು ಜಯಿಸುವುದರೊಂದಿಗೆ ತನ್ನ ಅಭಿಯಾನ ಅಂತ್ಯಗೊಳಿಸಿದೆ. ಈ ಮೂಲಕ 13ನೇ ಆವೃತ್ತಿಯ ಗೇಮ್ಸ್‌ನ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. 10 ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ ಭಾರತ 174 ಚಿನ್ನ, 93 ಬೆಳ್ಳಿ ಹಾಗೂ 45 ಕಂಚಿನ ಪದಕಗಳನ್ನು ಜಯಿಸಿದ್ದು, 2016ರಲ್ಲಿ ಗುವಾಹಟಿ ಹಾಗೂ ಶಿಲ್ಲಾಂಗ್‌ನಲ್ಲಿ ನಡೆದ ಗೇಮ್ಸ್‌ನಲ್ಲಿ ಗಳಿಸಿದ್ದ 309 ಪದಕಗಳ ದಾಖಲೆಯನ್ನು ಉತ್ತಮಪಡಿಸಿಕೊಂಡಿದೆ. 2016ರಲ್ಲಿ ಭಾರತ 189 ಚಿನ್ನ ಜಯಿಸಿತ್ತು. ಆದರೆ ಈ ಬಾರಿ 174 ಚಿನ್ನ ಜಯಿಸಿದೆ. ಈ ಆವೃತ್ತಿಯ ಗೇಮ್ಸ್‌ಗೆ ಭಾರತ 487 ಕ್ರೀಡಾಪಟುಗಳನ್ನು ಕಣಕ್ಕಿಳಿಸಿತ್ತು. ಆತಿಥೇಯ ನೇಪಾಳ 206 ಪದಕಗಳು(51 ಚಿನ್ನ,60 ಬೆಳ್ಳಿ, 95 ಕಂಚು)ಗಳಿಸಿ 2ನೇ ಸ್ಥಾನ ಪಡೆದಿದೆ. ಶ್ರೀಲಂಕಾ 251 ಪದಕಗಳನ್ನು(40 ಚಿನ್ನ,83 ಬೆಳ್ಳಿ ಹಾಗೂ 128 ಕಂಚು)ಜಯಿಸಿ 3ನೇ ಸ್ಥಾನ ಪಡೆದುಕೊಂಡಿದೆ. 1984ರಲ್ಲಿ ದಕ್ಷಿಣ ಏಶ್ಯನ್ ಗೇಮ್ಸ್ ಆರಂಭವಾದ ಬಳಿಕ ಪ್ರತಿ ವರ್ಷವೂ ಭಾರತ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸುತ್ತಾ ಬಂದಿದೆ. 10ನೇ ಹಾಗೂ ಕೊನೆಯ ದಿನವಾದ ಮಂಗಳವಾರ ಭಾರತ 18 ಪದಕಗಳನ್ನು(15 ಚಿನ್ನ,2 ಬೆಳ್ಳಿ, 1ಕಂಚು)ಜಯಿಸಿದ್ದು, ಬಾಕ್ಸರ್‌ಗಳು 6 ಚಿನ್ನ ಹಾಗೂ 1 ಬೆಳ್ಳಿ ಜಯಿಸಿದ್ದರು. ಕ್ರಮವಾಗಿ ಶ್ರೀಲಂಕಾ(101-62)ಹಾಗೂ ಆತಿಥೇಯ ನೇಪಾಳ(127-46)ತಂಡವನ್ನು ಮಣಿಸಿದ ಭಾರತದ ಪುರುಷರ ಹಾಗೂ ಮಹಿಳಾ ಬಾಸ್ಕೆಟ್‌ಬಾಲ್ ತಂಡಗಳು ಚಿನ್ನ ಗೆದ್ದುಕೊಂಡಿವೆ. ಸ್ಕ್ವಾಷ್‌ನಲ್ಲಿ ಭಾರತ ಮಹಿಳಾ ಹಾಗೂ ಪುರುಷರ ಟೀಮ್ ಸ್ಪರ್ಧೆಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಜಯಿಸಿದೆ.

ಇಂದಿನ ದಿನ ಭಾರತೀಯ ಬಾಕ್ಸರ್ ದಿನವಾಗಿತ್ತು. ಬಾಕ್ಸರ್‌ಗಳು 12 ಚಿನ್ನ, 3 ಬೆಳ್ಳಿ ಹಾಗೂ 1 ಕಂಚಿನ ಪದಕ ಜಯಿಸಿದ್ದಾರೆ. ಹಾಲಿ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ವಿಕಾಸ್ ಕ್ರಿಷನ್(ಪುರುಷರ 69ಕೆಜಿ)ಹಾಗೂ 2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ವಿಜೇತ ಪಿಂಕಿ ರಾಣಿ(ಮಹಿಳೆಯರ 51ಕೆಜಿ)ಭಾರತಕ್ಕೆ ಇನ್ನೂ 6 ಚಿನ್ನ ಜಯಿಸಲು ನೆರವಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X