Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ...

ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ತೀವ್ರಗೊಂಡ ಪ್ರತಿಭಟನೆ: ತ್ರಿಪುರಾ, ಅಸ್ಸಾಂನಲ್ಲಿ ಸೇನೆಯ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ11 Dec 2019 4:57 PM IST
share
ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ತೀವ್ರಗೊಂಡ ಪ್ರತಿಭಟನೆ: ತ್ರಿಪುರಾ, ಅಸ್ಸಾಂನಲ್ಲಿ ಸೇನೆಯ ನಿಯೋಜನೆ

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಮಸೂದೆಯ ಕುರಿತಂತೆ ರಾಜ್ಯಸಭೆಯಲ್ಲಿ ಬಿಸಿಯೇರಿದ ಚರ್ಚೆ ನಡೆಯುತ್ತಿರುವಂತೆಯೇ ಅತ್ತ  ಮಸೂದೆಯನ್ನು ವಿರೋಧಿಸಿ  ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ತ್ರಿಪುರಾ ಹಾಗೂ ಅಸ್ಸಾಂನಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ.

ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್ ಅವರು ನೀಡಿದ ಮಾಹಿತಿಯಂತೆ ತ್ರಿಪುರಾದ ಕಂಚನಪುರ್ ಹಾಗೂ ಮನು ಪ್ರದೇಶಗಳಿಗೆ ಸೇನೆಯ ಎರಡು ಕಲಮುಗಳನ್ನು ಈಗಾಗಲೇ ಕಳುಹಿಸಲಾಗಿದೆ. ಇನ್ನೊಂದು ಸೇನಾ ಕಲಮು ಅಸ್ಸಾಂ ರಾಜ್ಯದ ಬೊಂಗೈನ್ಗೊನ್‍ಗಿಂತ ಒಂದು ಕಿಮೀ ದೂರದಲ್ಲಿ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಒಂದು ಸೇನಾ ಕಲಮಿನಲ್ಲಿ ಕನಿಷ್ಠ 70 ಸೈನಿಕರಿರಲಿದ್ದು ಎರಡು ಅಧಿಕಾರಿಗಳು ಅದರ ನೇತೃತ್ವ ವಹಿಸುತ್ತಾರೆ. ತ್ರಿಪುರಾ ಹಾಗೂ  ಅಸ್ಸಾಂನಲ್ಲಿನ ಪರಿಸ್ಥಿತಿಯನ್ನು ಸೇನೆಯ ಹಿರಿಯ ಅಧಿಕಾರಿಗಳು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದಾರೆಂದೂ ಕರ್ನಲ್ ಆನಂದ್ ಹೇಳಿದ್ದಾರೆ.

ಅಸ್ಸಾಂನ ದಿಬ್ರೂಘರ್ ಎಂಬಲ್ಲಿ ಜಿಲ್ಲಾಡಳಿತದ ಮನವಿ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ತಂಡವನ್ನು ಕಳುಹಿಸಲಾಗಿದೆ.  ಪೌರತ್ವ ಕಾಯಿದೆಯನ್ನು ವಿರೋಧಿಸಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳಿಗೆ 5,000 ಅರೆಸೇನಾ ಸಿಬ್ಬಂದಿಯನ್ನು ಕಳುಹಿಸಲಾಗುತ್ತಿದೆ ಎಂಬ ಮಾಹಿತಿಯಿದೆ.

ತ್ರಿಪುರಾ ಸರಕಾರ ಮಂಗಳವಾರ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಹಾಗೂ ಎಸ್ಸೆಮ್ಮೆಸ್ ಸೇವೆಗಳಿಗೆ 48 ಗಂಟೆಗಳ ನಿರ್ಬಂಧ ಹೇರಿದೆ. ಅಸ್ಸಾಂನ ಗುವಹಾಟಿಯಲ್ಲಿ ನಾರ್ತ್ ಈಸ್ಟ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ಬಂದ್‍ಗೆ ಕರೆ ನೀಡಿರುವುದರಿಂದ ಜನಜೀವನ ಬಾಧಿತವಾಗಿದೆ.

ಅರುಣಾಚಲ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳು, ಬ್ಯಾಂಕುಗಳು, ವಾಣಿಜ್ಯ ಮಳಿಗೆಗಳು ಹಾಗೂ ಮಾರುಕಟ್ಟೆಗಳು ಬಂದ್ ಆಗಿದ್ದು ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X