Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭೆಯಲ್ಲಿ ದತ್ತಾಂಶ ರಕ್ಷಣೆ ಮಸೂದೆ...

ಲೋಕಸಭೆಯಲ್ಲಿ ದತ್ತಾಂಶ ರಕ್ಷಣೆ ಮಸೂದೆ ಪ್ರಸ್ತಾವ

ಜಂಟಿ ಸಮಿತಿಗೆ ಒಪ್ಪಿಸುವುದಾಗಿ ಸರಕಾರದ ಭರವಸೆ

ವಾರ್ತಾಭಾರತಿವಾರ್ತಾಭಾರತಿ11 Dec 2019 10:15 PM IST
share
ಲೋಕಸಭೆಯಲ್ಲಿ ದತ್ತಾಂಶ ರಕ್ಷಣೆ ಮಸೂದೆ ಪ್ರಸ್ತಾವ

ಹೊಸದಿಲ್ಲಿ,ಡಿ.11: ಬುಧವಾರ ಲೋಕಸಭೆಯಲ್ಲಿ ವ್ಯಕ್ತಿಗತ ದತ್ತಾಂಶ ರಕ್ಷಣಾ ಮಸೂದೆಯನ್ನು ಪ್ರಸ್ತಾವಿಸಿದ ಸರಕಾರವು ಅದನ್ನು ಸಂಸತ್ತಿನ ಉಭಯ ಸದನಗಳ ಜಂಟಿ ಆಯ್ಕೆ ಸಮಿತಿಗೆ ಒಪ್ಪಿಸುವುದಾಗಿ ಪ್ರತಿಪಕ್ಷಗಳ ವಿರೋಧದ ನಡುವೆಯೇ ತಿಳಿಸಿತು. ನಾಗರಿಕರ ಖಾಸಗಿತನದ ಹಕ್ಕನ್ನು ರಾಜಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ ಪ್ರತಿಪಕ್ಷಗಳು ಅದನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಇಲಾಖಾ ಸ್ಥಾಯಿ ಸಮಿತಿಗೆ ಕಳುಹಿಸುವಂತೆ ಆಗ್ರಹಿಸಿದವು.

ಪ್ರಜೆಗಳ ಮೇಲೆ ಕಣ್ಗಾವಲು ಹೆಚ್ಚುತ್ತಿರುವುದಕ್ಕಾಗಿ ಸರಕಾರದ ವಿರುದ್ಧ ದಾಳಿ ನಡೆಸಿದ ಕಾಂಗ್ರೆಸ್ ಮತ್ತು ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು,ಮಸೂದೆಯು ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದವು. ಇದನ್ನು ತಿರಸ್ಕರಿಸಿದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ ಅವರು,ಸಂಸದೀಯ ಸಮಿತಿಯು ಮಸೂದೆಯನ್ನು ವಿವರವಾಗಿ ಪರಿಶೀಲಿಸಬಹುದಾಗಿದೆ ಎಂದರು. ಸರಕಾರವು ಉದ್ದೇಶಿತ ಸಮಿತಿಗೆ ಮಸೂದೆಯನ್ನು ರವಾನಿಸಲು ಪ್ರಸ್ತಾವವೊಂದನ್ನು ಗುರುವಾರ ಮಂಡಿಸಲಿದೆ ಎಂದೂ ಅವರು ತಿಳಿಸಿದರು.

ಆದರೆ ಸಚಿವರ ಸಮಜಾಯಿಷಿ ಮಸೂದೆಯನ್ನು ತರೂರ್ ನೇತೃತ್ವದ ಸಮಿತಿಗೆ ಕಳುಹಿಸಬೇಕೆಂದು ಪಟ್ಟು ಹಿಡಿದಿದ್ದ ಪ್ರತಿಪಕ್ಷಗಳ ರೋಷಕ್ಕೆ ಕಾರಣವಾಯಿತು. ಈ ಸಮಿತಿಯು ಇತ್ತೀಚಿಗೆ ಬಿಜೆಪಿ ಸದಸ್ಯರ ಆಕ್ಷೇಪಗಳಿಗೆ ಹೊರತಾಗಿಯೂ ವಾಟ್ಸ್ಆ್ಯಪ್ ಬೇಹುಗಾರಿಕೆ ಪ್ರಕರಣವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿತ್ತು.

ಸರಕಾರದ ಕ್ರಮವನ್ನು ವಿರೋಧಿಸಿ ಪ್ರತಿಪಕ್ಷಗಳು ಸಭಾತ್ಯಾಗ ನಡೆಸಿದ್ದು,ಮಸೂದೆಯನ್ನು ಪ್ರಸ್ತಾವಿಸಲು ಸಚಿವರಿಗೆ ಅವಕಾಶವನ್ನು ಒದಗಿಸಿತು.

ಮಸೂದೆ ಪ್ರಸ್ತಾವಕ್ಕೆ ಮುನ್ನ ಅದನ್ನು ವಿರೋಧಿಸಿದ ಪ್ರತಿಪಕ್ಷಗಳ ಸದಸ್ಯರು ಮಸೂದೆಯನ್ನು ಸಂಬಂಧಿತ ಸಮಿತಿಯ ಪರಿಶೀಲನೆಗೊಪ್ಪಿಸುವಂತೆ ಆಗ್ರಹಿಸಿದರು.

‘ ಬೇಹುಗಾರಿಕೆ ಉದ್ಯಮ ’ವು ಬೆಳೆಯುತ್ತಿದೆ ಮತ್ತು ಪ್ರಸಾದ್ ಅವರ ಸಚಿವಾಲಯವು ತನ್ನ ವರ್ತನೆಯಿಂದ ಹಲವಾರು ಶಂಕೆಗಳನ್ನು ಮೂಡಿಸಿದೆ ಎಂದು ಕಾಂಗ್ರೆಸ್‌ನ ಆಧಿರ ರಂಜನ್ ಚೌಧುರಿ ಹೇಳಿದರೆ, ವಾಟ್ಸ್‌ಆ್ಯಪ್ ಬೇಹುಗಾರಿಕೆಗೆ ಇಸ್ರೇಲ್ ಸಾಫ್ಟ್‌ವೇರ್ ಪೆಗಾಸಸ್‌ನ ಬಳಕೆಯನ್ನು ಪ್ರಸ್ತಾಪಿಸಿದ ಟಿಎಂಸಿಯ ಸೌಗತ ರಾಯ್ ಅವರು ಜನರ ಖಾಸಗಿತನವನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿದರು.

ಮಸೂದೆಯನ್ನು ಬಲವಾಗಿ ಸಮರ್ಥಿಸಿಕೊಂಡ ಪ್ರಸಾದ್,ಸರ್ವೋಚ್ಚ ನ್ಯಾಯಾಲಯವೂ ದತ್ತಾಂಶ ರಕ್ಷಣೆ ಕಾನೂನಿನ ಅಗತ್ಯಕ್ಕೆ ಒತ್ತು ನೀಡಿದೆ. ಮಸೂದೆಯು ಜನರ ಹಕ್ಕುಗಳು ಮತ್ತು ಖಾಸಗಿತನದ ಸುರಕ್ಷತೆಯ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X