ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ರಮೇಶ್ಗೆ ಸನ್ಮಾನ
ಮಂಗಳೂರು, ಡಿ.13: ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡ ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಯ ಪ್ರಧಾನ ಸಲಹೆಗಾರ ಕೆ. ರಮೇಶ್ ಅವರನ್ನು ಶಕ್ತಿ ಪಿಯು ಕಾಲೇಜು, ಶಕ್ತಿ ವಸತಿ ಶಾಲೆ, ಶ್ರೀಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ಶಕ್ತಿ ಎಜುಕೇಶನ್ ಟ್ರಸ್ಟ್ನ ಸದಸ್ಯರು ಶಕ್ತಿ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಶಕ್ತಿ ಸಂಸ್ಥೆಗಳ ಸ್ಥಾಪಕ ಕೆ.ಸಿ.ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಶಕ್ತಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಅಭಿನಂದನೆಯ ಮಾತುಗಳನ್ನಾಡಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಮಹಾನಗರದ ಸಹ ಸಂಘಚಾಲಕ ಸುನಿಲ್ ಆಚಾರ್, ಪತ್ರಕರ್ತ ಪ್ರಕಾಶ್ ಇಳಂತಿಲ, ಅಕ್ಷರೋದ್ಯಮ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಕುಲಕರ್ಣಿ, ತರ್ಜನಿ ಕಮ್ಯುನಿಕೇಶನ್ನಿನ ಶೇಷಗಿರಿ, ಎಬಿವಿಪಿ ಮಂಗಳೂರು ವಿಭಾಗದ ಸಂಘಟನಾ ಕಾರ್ಯದರ್ಶಿ ಬಸವೇಶ್, ಹೊಸದಿಗಂತ ಪತ್ರಿಕೆಯ ವ್ಯವಸ್ಥಾಪಕ ದೇವದಾಸ ಶೆಟ್ಟಿ, ಶಕ್ತಿ ಎಜುಕೇಶನ್ ಟ್ರಸ್ಟಿನ ಕಾರ್ಯದರ್ಶಿ ಸಂಜಿತ್, ಅಭಿವೃದ್ಧಿ ಅಧಿಕಾರಿ ಪ್ರಕ್ಯಾತ್ ರೈ ಉಪಸ್ಥಿತರಿದ್ದರು.
ಶಕ್ತಿ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಜಿ.ಎಸ್ ಸ್ವಾಗತಿಸಿದರು. ಶಕ್ತಿ ವಸತಿ ಶಾಲೆಯ ಪ್ರಾಚಾರ್ಯ ವಿದ್ಯಾ ಕಾಮತ್ ಜಿ. ವಂದಿಸಿದರು.