Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.29: ಹನುಮಗಿರಿಯಲ್ಲಿ 'ಭಜನಾ ಸಂಭ್ರಮ...

ದ.29: ಹನುಮಗಿರಿಯಲ್ಲಿ 'ಭಜನಾ ಸಂಭ್ರಮ -2019' ಸಮಾವೇಶ

ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ನಿರ್ಮಾಣದ ಐತಿಹಾಸಿಕ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ13 Dec 2019 6:03 PM IST
share

ಪುತ್ತೂರು: ಮಂಗಳೂರು ವಿಭಾಗದ ಭಜನಾ ಮಹಾಮಂಡಲ ಹಾಗೂ ಹುನುಮಗಿರಿ ಕ್ಷೇತ್ರದ ಸಂಯುಕ್ತ ಆಶ್ರಯದಲ್ಲಿ ಡಿ.29ರಂದು ದ.ಕ.ಉಡುಪಿ, ಕೊಡಗು,ಕಾಸರಗೋಡು ಭಾಗದ ಸಾವಿರಕ್ಕೂ ಮಿಕ್ಕಿದ ಭಜನಾ ತಂಡಗಳ ಕೂಡುವಿಕೆಯೊಂದಿಗೆ 'ಭಜನಾ ಸಂಭ್ರಮ-2019' ಸಮಾವೇಶ ನಡೆಯಲಿದ್ದು, ಇದೊಂದು ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ನಿರ್ಮಿಸುವ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಹನುಮಗಿರಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ ತಿಳಿಸಿದ್ದಾರೆ.

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಾಮಾಜಿಕ ಕಳಕಳಿಯುಳ್ಳ ಭಜನಾ ಮಂಡಳಿಗಳು ಒಂದೆಡೆ ಸೇರಿ ಸಮಾಜಮುಖಿ ಚಟುವಟಿಕೆಗಳಿಗೆ ಇನ್ನಷ್ಟು ಶಕ್ತಿ ತುಂಬುವ ಹಾಗೂ ಹೊಸ ಚಟುವಟಿಕೆಗಳ ಕುರಿತು ಸಂಕಲ್ಪ ಕೈಗೊಳ್ಳುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಜನಾ ಸಂಭ್ರಮದ ಕೇಂದ್ರ ಬಿಂದು ಕಾರ್ಯಕ್ರಮ ಅಂದು ಸಂಜೆ 6.12ಕ್ಕೆ ಶಂಖೋದ್ಘೋಷದೊಂದಿಗೆ ಆರಂಭಗೊಳ್ಳಲಿದೆ. ಸಾವಿರಕ್ಕೂ ಮಿಕ್ಕ ಭಜನಾ ಮಂಡಳಿಗಳ 5ಸಾವಿರ ಕಾರ್ಯಕರ್ತರು ಭಜನಾಂಗಣದಲ್ಲಿ ಸಾವಿರ ದೀಪಗಳನ್ನು ಬೆಳಗಿಸಿ, 5ಸಾವಿರ ಹಣತೆಗಳನ್ನು ಹಚ್ಚಿ ಏಕಕಾಲದಲ್ಲಿ ಆಯ್ದ 6 ಭಜನೆಗಳನ್ನು ಹಾಡುವ ಈ ಐತಿಹಾಸಿಕ ಕಾರ್ಯಕ್ರಮ 45 ನಿಮಿಷಗಳ ಕಾಲ ನಡೆಯಲಿದೆ. 1200ರಷ್ಟು ಭಜನಾ ಮಂಡಳಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. 20ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.                          

ಸಂಜೆ 4.45ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕೇಂದ್ರದ ಪಶುಸಂಗೋಪನಾ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಪ್ರತಾಪಚಂದ್ರ ಸಾರಂಗಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ ಮುಕುಂದ ಅವರು ಪ್ರಧಾನ ಭಾಷಣ ಮಾಡುಲಿದ್ದಾರೆ. ಭಜನಾ ಸಂಭ್ರಮ ಸ್ವಾಗತ ಸಮಿತಿಯ ಅಧ್ಯಕ್ಷ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರು ಅಧ್ಯಕ್ಷತೆ ವಹಿಸುವರು ಎಂದು ನನ್ಯ ಅಚ್ಚುತ ಮೂಡೆತ್ತಾಯ ಅವರು ತಿಳಿಸಿದರು.

ಸಂಜೆ 3 ಗಂಟೆಗೆ ಈಶ್ವರಮಂಗಲ ಪಂಚಲಿಂಗೇಶ್ವರ ದೇವಾಲಯ ಹಾಗೂ ಈಶ್ವರಮಂಗಲ ಗ್ರಾಮ ಪಂಚಾಯಿತಿ ಕಚೇರಿ ಬಳಿಯಿಂದ ಏಕಕಾಲದಲ್ಲಿ ಎರಡು  ಕಡೆಗಳಿಂದ ಭಜನಾಂಗಣಕ್ಕೆ ಶೋಭಾ ಯಾತ್ರೆ ನಡೆಯಲಿದೆ. ಶೋಭಾ ಯಾತ್ರೆಯಲ್ಲಿ ಕುಣಿತ ಭಜನೆಗೆ ಅವಕಾಶವಿದೆ. ಭಜನಾ ಮಂಡಳಿಗಳ ಎಲ್ಲರೂ ಶೋಭಾ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವರು. ರಾತ್ರಿ 7.30ರಿಂದ ಆಳ್ವಾಸ್ ದೇಶಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ. 

ಡಿ.15 ಬೆಳಿಗ್ಗೆ 10 ಗಂಟೆಗೆ ಚಪ್ಪರ ಮುಹೂರ್ತ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಚಪ್ಪರ ಮುಹೂರ್ತ ನೆರವೇರಿಸಲಿದ್ದಾರೆ ಎಂದು ಮೂಡೆತ್ತಾಯ ಅವರು ತಿಳಿಸಿದರು. 

ಸುದ್ದಿಗೋಷ್ಟಿಯಲ್ಲಿ ಭಜನಾ ಸಂಭ್ರಮ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಹಜ್ ರೈ ಬಳೆಜ್ಜ, ವಿಭಾಗ ಸಂಯೋಜಕ ಪ್ರವೀಣ್ ಸರಳಾಯ,ನಿರ್ವಹಣಾ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ್ ರೈ, ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಹಾಜರಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X