Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಮನೆ ಹಿತ್ತಲಲ್ಲಿ ಹೈಡ್ರೋ...

ಬೆಂಗಳೂರು: ಮನೆ ಹಿತ್ತಲಲ್ಲಿ ಹೈಡ್ರೋ ಗಾಂಜಾ ಬೆಳೆದ ಪದವೀಧರರು; ಆರೋಪಿಗಳ ಬಂಧನ

ಇದು ದೇಶದಲ್ಲಿಯೇ ಮೊಟ್ಟ ಮೊದಲ ಪ್ರಕರಣ !

ವಾರ್ತಾಭಾರತಿವಾರ್ತಾಭಾರತಿ13 Dec 2019 7:27 PM IST
share
ಬೆಂಗಳೂರು: ಮನೆ ಹಿತ್ತಲಲ್ಲಿ ಹೈಡ್ರೋ ಗಾಂಜಾ ಬೆಳೆದ ಪದವೀಧರರು; ಆರೋಪಿಗಳ ಬಂಧನ

ಬೆಂಗಳೂರು, ಡಿ.13: ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಧುನಿಕ ತಂತ್ರಜ್ಞಾನ ಮೂಲಕ ಮನೆಯ ಹಿತ್ತಲಲ್ಲಿ ಮಾದಕ ವಸ್ತು ಹೈಡ್ರೋ ಗಾಂಜಾ ಬೆಳೆದ ಪದವೀಧರರ ಪ್ರಕರಣವೊಂದನ್ನು ಸಿಸಿಬಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬಿಹಾರ ಮೂಲದ ಅಮಾತ್ಯರಿಶಿ ಜೈನ್(23), ಮಂಗಲ್‌ ಮುಕ್ಯ(30) ಹಾಗೂ ಹೊಸಕೆರೆಹಳ್ಳಿಯ ದ್ವಾರಕಾನಗರದ ಆದಿತ್ಯಕುಮಾರ್(21) ಎಂಬುವರು ಬಂಧಿತ ಪದವೀಧರರು ಎಂದು ಮಾಹಿತಿ ನೀಡಿದರು.

ಬಂಧಿತರಿಂದ 225 ಎಸ್‌ಎಲ್‌ಡಿ ಸ್ಲಿಪ್ಸ್‌ಗಳು, 2 ಕೆಜಿ ಗಾಂಜಾ, 10 ಸಾವಿರ ರೂ. ನಗದು, ಗಾಂಜಾ ಗಿಡಗಳಿದ್ದ ಕುಂಡಗಳು, 3 ಮೊಬೈಲ್‌ಗಳು, ಎಲ್‌ಇಡಿ ಲೈಟ್‌ಗಳು, ಕಂಪ್ಯೂಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಪ್ರಮುಖ ಆರೋಪಿ ಅಮಾತ್ಯರಿಶಿ ಜೈನ್ ಬಿಬಿಎಂ ವಿದ್ಯಾಭ್ಯಾಸಕ್ಕೆ ನಗರಕ್ಕೆ ಬಂದಿದ್ದ. ತನ್ನದೇ ರಾಜ್ಯದಿಂದ ವಿದ್ಯಾಭ್ಯಾಸಕ್ಕಾಗಿ ಬಂದಿದ್ದ ಮತ್ತೊಬ್ಬ ಆರೋಪಿ ಮಂಗಲ್‌ಮುಕ್ಯನನ್ನು ಪರಿಚಯ ಮಾಡಿಕೊಂಡಿದ್ದು, ಇವರಿಬ್ಬರಿಗೆ ವಿದ್ಯಾಭ್ಯಾಸದ ವೇಳೆ ಆದಿತ್ಯಕುಮಾರ್ ಸ್ನೇಹಿತನಾಗಿದ್ದ. ಸುಲಭವಾಗಿ ಹಣ ಗಳಿಸಿ ಶ್ರೀಮಂತರಾಗಲು ಈ ಮೂವರು ಡಾರ್ಕ್ ವೆಬ್‌ಸೈಟ್‌ನಲ್ಲಿ ಹುಡುಕಾಟ ನಡೆಸಿ ಮನೆಯಲ್ಲಿಯೇ ಸೂರ್ಯನ ಪ್ರಖರವಾದ ಬೆಳಕಿನ ಎಲ್‌ಇಡಿ ಲೈಟ್‌ಗಳ ವ್ಯವಸ್ಥೆ ಮಾಡಿ ಹೈಡ್ರೋ ಗಾಂಜಾ ಗಿಡಗಳನ್ನು ಬೆಳೆಸುವುದು ಕಂಡುಕೊಂಡಿದ್ದಾರೆ.

ಬಳಿಕ, ಹೈಡ್ರೊ ಗಾಂಜಾ ಬೀಜಗಳು ನೆದರ್‌ಲ್ಯಾಂಡ್‌ನಲ್ಲಿ ದೊರೆಯುವ ಮಾಹಿತಿ ಲಭ್ಯವಾಗಿದೆ. ಕೂಡಲೇ ಅಲ್ಲಿಂದ ಕೊರಿಯರ್ ಮೂಲಕ ಬೀಜಗಳನ್ನು ತರಿಸಿ 3 ವರ್ಷಗಳ ಹಿಂದೆ, ನಗರದ ಶಾಂಘ್ರಿಲಾ ಅಪಾರ್ಟ್‌ಮೆಂಟ್‌ನಲ್ಲಿ ಫ್ಲಾಟ್‌ವೊಂದರಲ್ಲಿ ಅತ್ಯಾಧುನಿಕ ಎಲ್‌ಇಡಿ ಲೈಟ್‌ಗಳನ್ನು ಬಳಸಿ ಹೂ ಕುಂಡಗಳಲ್ಲಿ ಅವುಗಳನ್ನು ಬಿತ್ತಿ ರಾಸಾಯನಿಕಗಳನ್ನು ಸಿಂಪಡಿಸಿ 3 ತಿಂಗಳೊಳಗೆ ಹುಲುಸಾಗಿ ಬೆಳೆಯುವಂತೆ ಮಾಡಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ನಂತರ, ಮೊಬೈಲ್, ಆನ್‌ಲೈನ್ ಮೂಲಕ ಗಿರಾಕಿಗಳನ್ನು ಸಂಪರ್ಕಿಸಿ ಗಾಂಜಾ ಮಾರಾಟ ಮಾಡುತ್ತಿದ್ದರು. ಇದಲ್ಲದೆ ಸ್ಟಾಂಪ್ ಮಾದರಿಯಲ್ಲಿದ್ದ ಎಲ್‌ಎಸ್‌ಡಿ ಸ್ಲಿಪ್ಸ್‌ಗಳನ್ನು ತರಿಸಿ ಮಾರಾಟ ಮಾಡುತ್ತಿದ್ದು, ಒಂದು ಸ್ಟಾಂಪ್‌ನಲ್ಲಿ ಸುಮಾರು 100ರವರೆಗೆ ಸ್ಲಿಪ್ಸ್‌ಗಳನ್ನು ಮಾಡುತ್ತಿರುವುದು ಕಂಡು ಬಂದಿದೆ.

ಬೇಡಿಕೆ ಅನುಗುಣವಾಗಿ ಸ್ಲಿಪ್ಸ್‌ಗಳು ಸಾವಿರದಿಂದ ಲಕ್ಷ ರೂಪಾಯಿವರೆಗೂ ಮಾರಾಟವಾಗುತ್ತಿದ್ದವು. ಸ್ಥಳೀಯರಿಗೆ ಗೊತ್ತಾಗಿರಲಿಲ್ಲ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯಲ್ಲಿ ಅನುಮಾನ ಬರದಂತೆ ಆರೋಪಿಗಳು ಕೃತ್ಯ ನಡೆಸುತ್ತಿದ್ದರು. ಗಿರಾಕಿಯೊಬ್ಬರು ನೀಡಿದ ಮಾಹಿತಿಯಾಧರಿಸಿ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಆಯುಕ್ತರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿ ಕುಲ್‌ದೀಪ್ ಕುಮಾರ್ ಜೈನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೊದಲ ಪ್ರಯತ್ನ, ಆತಂಕಕಾರಿ

ಮನೆಯಲ್ಲಿ ಎಲ್‌ಇಡಿ ಲೈಟ್‌ಗಳನ್ನು ಬಳಸಿ ಗಾಂಜಾ ಬೆಳೆಸುತ್ತಿರುವುದು ದೇಶದಲ್ಲೇ ನೂತನ ಪ್ರಯೋಗವಾಗಿದೆ. ಐಪಿಎಸ್ ಅಧಿಕಾರಿಯಾದ ನನಗೇ ಈ ಬಗ್ಗೆ ತಿಳಿದಿರಲಿಲ್ಲ. ಇಂತಹ ವ್ಯವಸ್ಥಿತ ಕೃತ್ಯ ನಡೆಸಿ ಮುಂದಿನ ಪೀಳಿಗೆಯನ್ನು ಮಾದಕವಸ್ತು ಜಾಲಕ್ಕೆ ತಳ್ಳುತ್ತಿರುವುದು ಆತಂಕಕಾರಿ ಸಂಗತಿ.

-ಭಾಸ್ಕರ್ ರಾವ್, ನಗರ ಪೊಲೀಸ್ ಆಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X