Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ರಮ ನಗದು ವಹಿವಾಟುಗಳಲ್ಲಿ ಹೆಚ್ಚಳ:...

ಅಕ್ರಮ ನಗದು ವಹಿವಾಟುಗಳಲ್ಲಿ ಹೆಚ್ಚಳ: ಐಟಿ ಇಲಾಖೆ ಅಂಕಿಅಂಶದಿಂದ ಬಹಿರಂಗ

ಪರಿಣಾಮ ಬೀರದ ನೋಟು ನಿಷೇಧ

ವಾರ್ತಾಭಾರತಿವಾರ್ತಾಭಾರತಿ13 Dec 2019 9:34 PM IST
share
ಅಕ್ರಮ ನಗದು ವಹಿವಾಟುಗಳಲ್ಲಿ ಹೆಚ್ಚಳ: ಐಟಿ ಇಲಾಖೆ ಅಂಕಿಅಂಶದಿಂದ ಬಹಿರಂಗ

ಹೊಸದಿಲ್ಲಿ, ಡಿ.13: ನರೇಂದ್ರ ಮೋದಿ ಸರಕಾರವು ಆದಾಯ ತೆರಿಗೆ ಕಾಯ್ದೆಗೆ ಕಟ್ಟುನಿಟ್ಟಿನ ನಿಯಮಾವಳಿಗಳನ್ನು ಜಾರಿಗೊಳಿಸಿರುವ ಹೊರತಾಗಿಯೂ 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಅಕ್ರಮ ನಗದು ವಹಿವಾಟುಗಳು ಸ್ಥಿರವಾಗಿ ಏರಿಕೆಯಾಗುತ್ತಲೇ ಇದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು 2,101 ಕೋಟಿ ರೂ. ಮೊತ್ತದ ನಗದು ವಹಿವಾಟನ್ನು ಒಳಗೊಂಡ 1421 ಪ್ರಕರಣಗಳನ್ನು ಪತ್ತೆಹಚ್ಚಿರುವುದಾಗಿ ಆದಾಯ ತೆರಿಗೆ ಇಲಾಖೆಯು ಲೋಕಸಭೆಗೆ ತಿಳಿಸಿದೆ. 2018-19ರ ಸಾಲಿನಲ್ಲಿ 1015 ಕೋಟಿ ರೂ. ನಗದು ಹಣವನ್ನು ಒಳಗೊಂಡ 1110 ಪ್ರಕರಣಗಳನ್ನು ಆದಾಯ ತೆರಿಗೆ ಇಲಾಖೆ ಭೇದಿಸಿತ್ತು.

ಬ್ಯಾಂಕ್‌ಗಳು ಮೊದಲಾದ ವಿವಿಧ ಹಣಕಾಸು ಸಂಸ್ಥೆಗಳು ಒದಗಿಸಿದ ಹಣಕಾಸು ವಹಿವಾಟುಗಳ ವಿವರಣೆಗಳ ಮೂಲಕ ಲಭ್ಯವಾದ ಮಾಹಿತಿಯನ್ನು ಆಧರಿಸಿ ಈ ಅಕ್ರಮ ವಹಿವಾಟುಗಳನ್ನು ಪತ್ತೆಹಚ್ಚಿರುವುದಾಗಿ ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಹಾಲಿ ವರ್ಷದಲ್ಲಿ ಈ ತನಕ 6692 ಕೋಟಿ ರೂ. ವಹಿವಾಟುಗಳನ್ನು ಒಳಗೊಂಡ  6692 ಪ್ರಕರಣಗಳನ್ನು ತಾನು ಪತ್ತೆಹಚ್ಚಿರುವುದಾಗಿ ಆದಾಯ ತೆರಿಗೆ ಇಲಾಖೆ ಡಿ.10ರಂದು ರಾಜ್ಯಸಭೆಗೆ ತಿಳಿಸಿತ್ತು. 20 ಸಾವಿರ ರೂ.ಗೂ ಅಧಿಕ ಮೊತ್ತದ ಸಾಲ ಹಾಗೂ ಠೇವಣಿ ಪಾವತಿಗಳನ್ನು ನಗದು ರೂಪದಲ್ಲೇ ಮಾಡಲಾಗಿದ್ದು, ಇದು ಆದಾಯತೆರಿಗೆ ಕಾಯ್ದೆಯ 269ಎಸ್‌ಎಸ್ ಸೆಕ್ಷನ್‌ನ ಉಲ್ಲಂಘನೆಯಾಗಿದೆಯೆಂದು ಅದು ಹೇಳಿದೆ.

2018-19ನೇ ಸಾಲಿನಲ್ಲಿ ಒಟ್ಟು 8102 ಕೋಟಿ ರೂ. ಹಣವನ್ನು ಒಳಗೊಂಡ 40,039 ಪ್ರಕರಣಗಳಲ್ಲಿ ಆದಾಯ ತೆರಿಗೆ ಕಾಯ್ದೆಯ ನಿಯಮಾವಳಿಗಳ ಉಲ್ಲಂಘನೆಗಳು ನಡೆದಿವೆ.

ಕಪ್ಪು ಹಣವನ್ನು ಒಳಗೊಂಡ ಬಹುತೇಕ ನಗದು ವಹಿವಾಟುಗಳು ಈಗಲೂ ಪತ್ತೆಯಾಗದೆ ಉಳಿದಿವೆ. ಆದರೆ ಬ್ಯಾಂಕುಗಳು ನೀಡಿರುವ ದತ್ತಾಂಶಗಳ ಮೂಲಕ ಇಂತಹ ವಹಿವಾಟುಗಳನ್ನು ಪತ್ತೆಹಚ್ಚಲು ಆದಾಯ ತೆರಿಗೆ ಇಲಾಖೆಗೆ ಸಾಧ್ಯವಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X