ಉಡುಪಿ ಪರ್ಯಾಯ ಉತ್ಸವ: ಮುಖ್ಯಮಂತ್ರಿ ಯಡಿಯೂರಪ್ಪಗೆ ಆಹ್ವಾನ
ಬೆಂಗಳೂರು, ಡಿ. 13: ಉಡುಪಿಯ ಶ್ರೀಕೃಷ್ಣ ಮಠದ ಪರ್ಯಾಯ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಶಾಸಕ ಎಂ. ರಘುಪತಿ ಭಟ್ ನೇತೃತ್ವದ ಪರ್ಯಾಯ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಭೇಟಿ ಮಾಡಿ ಆಹ್ವಾನಿಸಿದರು.
ಶುಕ್ರವಾರ ವಿಧಾನಸೌಧದ ಮೂರನೆ ಮಹಡಿಯಲ್ಲಿ ಸಿಎಂ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿದ ನಿಯೋಗ ಡಿ.18ರಿಂದ 5 ದಿನಗಳ ಉಡುಪಿಯಲ್ಲಿ ಪರ್ಯಾಯ ಉತ್ಸವ ನಡೆಯಲಿದ್ದು, ಮಹೋತ್ಸವದ ಉದ್ಘಾಟನೆಗೆ ಆಗಮಿಸಬೇಕೆಂದು ಕೋರಿದೆ.
ಇದೇ ವೇಳೆ ಉಡುಪಿಯಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಡಿಯೂರಪ್ಪ ಬಿಡುಗಡೆ ಮಾಡಿದರು. ಈ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಘುಪತಿ ಭಟ್, ಜಿ.ಪಂ.ಅಧ್ಯಕ್ಷ ದಿನಕರ್ ಬಾಬು, ಮೀನುಗಾರರ ಫೆಡರೇಷನ್ ಮುಖಂಡ ಯಶ್ಪಾಲ್ ಸುವರ್ಣ ಹಾಗೂ ಪರ್ಯಾಯ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.
Next Story