Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹದಿ ಹರೆಯದ ಹುಡುಗಿ ಕೋಪ...

ಹದಿ ಹರೆಯದ ಹುಡುಗಿ ಕೋಪ ನಿಭಾಯಿಸುವುದನ್ನು ಕಲಿಯುತ್ತಿದ್ದಾಳೆ...

ಟ್ರಂಪ್ ಹೇಳಿಕೆಗೆ ತಣ್ಣಗೆ ಪ್ರತಿಕ್ರಿಯಿಸಿದ ಗ್ರೆಟಾ ತನ್‌ಬರ್ಗ್

ವಾರ್ತಾಭಾರತಿವಾರ್ತಾಭಾರತಿ13 Dec 2019 10:03 PM IST
share
ಹದಿ ಹರೆಯದ ಹುಡುಗಿ ಕೋಪ ನಿಭಾಯಿಸುವುದನ್ನು ಕಲಿಯುತ್ತಿದ್ದಾಳೆ...

ವಾಶಿಂಗ್ಟನ್, ಡಿ. 13: ಹದಿಹರಯದ ಪರಿಸರ ಹೋರಾಟಗಾರ್ತಿ ಗ್ರೆಟಾ ತನ್‌ಬರ್ಗ್ ‘ಆರಾಮವಾಗಿ ಕಾಲ ಕಳೆಯಬೇಕು, ಗೆಳೆಯರ ಜೊತೆಗೆ ಸಿನೆಮಾ ನೋಡಲು ಹೋಗಬೇಕು’ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಸಲಹೆಗೆ ಗ್ರೆಟಾ ಅಷ್ಟೇ ವಿಧೇಯತೆಯಿಂದ ಪ್ರತಿಕ್ರಿಯಿಸಿದ್ದಾರೆ.

ಗ್ರೆಟಾ ತನ್‌ಬರ್ಗ್‌ರನ್ನು ‘ಟೈಮ್’ ಮ್ಯಾಗಝಿನ್ ‘ವರ್ಷದ ವ್ಯಕ್ತಿ’ ಎಂಬುದಾಗಿ ಘೋಷಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಟ್ರಂಪ್, ಇದು ಗ್ರೆಟಾ ತನ್‌ಬರ್ಗ್ ‘ಸ್ವಚ್ಛಂದವಾಗಿ ಕಾಲ ಕಳೆಯುವ ಹಾಗೂ ಗೆಳೆಯರ ಜೊತೆಗೆ ಸಿನೆಮಾಗೆ ಹೋಗುವ ಸಮಯ’ ಎಂದು ಹೇಳಿದ್ದರು.

‘‘ಇದು ಅತ್ಯಂತ ಹಾಸ್ಯಾಸ್ಪದ. ಗ್ರೆಟಾ ತನ್ನ ಮುಂಗೋಪವನ್ನು ನಿಭಾಯಿಸುವುದನ್ನು ಕಲಿಯಬೇಕು. ಬಳಿಕ ಗೆಳೆಯರ ಜೊತೆಗೆ ಉತ್ತಮ ಹಳೆಯ ಸಿನೆಮಾವೊಂದನ್ನು ನೋಡಲು ಹೋಗಬೇಕು! ಆರಾಮದಿಂದಿರು ಗ್ರೆಟಾ! ಆರಾಮದಿಂದಿರು!’’ ಎಂದು 73 ವರ್ಷದ ಟ್ರಂಪ್ ಟ್ವೀಟ್ ಮಾಡಿದ್ದರು.

‘ಭವಿಷ್ಯಕ್ಕಾಗಿ ಶುಕ್ರವಾರಗಳು’ ಎಂಬ ಪರಿಸರ ಸಂಬಂಧಿ ಪ್ರತಿಭಟನೆಗಳಿಂದ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿಗೆ ಬಂದ ಸ್ವೀಡನ್‌ನ 16 ವರ್ಷದ ಗ್ರೆಟಾ, ಟ್ರಂಪ್ ಟ್ವೀಟ್‌ಗೆ ತಕ್ಷಣ ವಿನಮ್ರವಾಗಿ ಪ್ರತಿಕ್ರಿಯಿಸಿದ್ದಾರೆ.

‘‘ಹದಿ ಹರಯದ ಹುಡುಗಿಯೊಬ್ಬಳು ಕೋಪವನ್ನು ನಿಭಾಯಿಸುವುದನ್ನು ಕಲಿಯುತ್ತಿದ್ದಾಳೆ. ಈಗ ಅವಳು ಸ್ವಚ್ಛಂದವಾಗಿದ್ದಾಳೆ ಮತ್ತು ಸ್ನೇಹಿತನೊಂದಿಗೆ ಒಳ್ಳೆಯ ಹಳೆಯ ಮಾದರಿಯ ಚಿತ್ರವೊಂದನ್ನು ನೋಡುತ್ತಿದ್ದಾಳೆ’’ ಎಂದು ಗ್ರೆಟಾ ತನ್ನ ಟ್ವಿಟರ್ ವಿವರದಲ್ಲಿ ಬರೆದಿದ್ದಾರೆ.

ಜಾಗತಿಕ ನಾಯಕರ ವ್ಯಂಗ್ಯವನ್ನು ನಿಭಾಯಿಸಲು ಕಲಿತಿರುವ ತರುಣಿ!

ಸ್ನೇಹಪರರಲ್ಲದ ಜಾಗತಿಕ ನಾಯಕರ ವ್ಯಂಗ್ಯದ ಮಾತುಗಳನ್ನು ಹೇಗೆ ನಿಭಾಯಿಸುವುದು ಎನ್ನುವುದನ್ನು ಗ್ರೆಟಾ ಅನುಭವದಿಂದ ಕಲಿಯುತ್ತಿದ್ದಾರೆ.

ಸೆಪ್ಟಂಬರ್‌ನಲ್ಲಿ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಗ್ರೆಟಾರನ್ನು ‘‘ಕರುಣಾಳು, ಆದರೆ ಆಧುನಿಕ ಜಗತ್ತು ಸಂಕೀರ್ಣವಾಗಿದೆ ಎನ್ನುವುದನ್ನು ಆಕೆಗೆ ಯಾರೂ ವಿವರಿಸಿಲ್ಲ’’ ಎಂದು ಹೇಳಿದ್ದರು.

ಅದಕ್ಕೆ ಪ್ರತಿಕ್ರಿಯಿಸಿದ ತನ್‌ಬರ್ಗ್, ತನ್ನ ಟ್ವಿಟರ್ ವಿವರವನ್ನು ‘‘ಓರ್ವ ಕರುಣಾಳು ಆದರೆ ಮಾಹಿತಿಯ ಕೊರತೆಯಿರುವ ಬಾಲಕಿ’’ ಎಂಬುದಾಗಿ ಬದಲಾಯಿಸಿದ್ದರು.

 ಇತ್ತೀಚೆಗೆ ಬ್ರೆಝಿಲ್ ಅಧ್ಯಕ್ಷ ಝೈರ್ ಬೊಲ್ಸೊನಾರೊ, ಗ್ರೆಟಾ ತನ್‌ಬರ್ಗ್‌ರನ್ನು ‘ಪಿರಾಳ’ (ಕೆಟ್ಟು ಹೋದ ಹುಡುಗಿ) ಎಂಬುದಾಗಿ ಬಣ್ಣಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಗ್ರೆಟಾ ತನ್ನ ಟ್ವಿಟರ್ ವಿವರದಲ್ಲಿ ‘ಪಿರಾಳ’ ಎಂಬುದಾಗಿ ಬರೆದುಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X