ಮಹಿಳಾ ಮೀನುಗಾರರ ಸಾಲಮನ್ನಾ: ಸಿಎಂಗೆ ಮನವಿ
![ಮಹಿಳಾ ಮೀನುಗಾರರ ಸಾಲಮನ್ನಾ: ಸಿಎಂಗೆ ಮನವಿ ಮಹಿಳಾ ಮೀನುಗಾರರ ಸಾಲಮನ್ನಾ: ಸಿಎಂಗೆ ಮನವಿ](https://www.varthabharati.in/sites/default/files/images/articles/2019/12/13/223536-1576256011.jpg)
ಉಡುಪಿ, ಡಿ.13: ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಹಿಳಾ ಮೀನುಗಾರರ ಸಾಲಮನ್ನಾ ಯೋಜನೆಯಲ್ಲಿ ಘೋಷಿಸಿರುವ ಮೊತ್ತವನ್ನು ಶೀಘ್ರವಾಗಿ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಈ ಬಗ್ಗೆ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಒಂದು ವಾರದೊಳಗೆ ಮಹಿಳಾ ಮೀನುಗಾರರ ಖಾತೆಗಳಿಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.
Next Story