ಪ್ರಜ್ಞಾ ಸಿಂಗ್ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ನಲ್ಲಿ ವಜಾ
ಭೋಪಾಲ,ಡಿ.13: ಲೋಕಸಭೆಗೆ ತನ್ನ ಆಯ್ಕೆಯ ವಿರುದ್ಧ ಸಲ್ಲಿಸಲಾಗಿರುವ ತಕರಾರು ಅರ್ಜಿಯ ಸಮರ್ಥನೀಯತೆ ಯನ್ನು ಪ್ರಶ್ನಿಸಿದ್ದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅರ್ಜಿಯನ್ನು ಮಧ್ಯಪ್ರದೇಶ ಉಚ್ಚ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ.
ಚುನಾವಣೆ ಸಂದರ್ಭ ಠಾಕೂರ್ ಮಾಡಿದ್ದ ಪ್ರಚೋದನಾಕಾರಿ ಭಾಷಣಗಳು ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧವಾಗಿದ್ದವು ಎಂದು ಅವರ ಆಯ್ಕೆಯನ್ನು ಪ್ರಶ್ನಿಸಿರುವ ಅರ್ಜಿಯಲ್ಲಿ ಆರೋಪಿಸಲಾಗಿದೆ. ಠಾಕೂರ್ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು ಜ.6ರಂದು ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
Next Story