Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಅತ್ಯಾಚಾರ, ನಿರುದ್ಯೋಗ, ಬೆಲೆ ಏರಿಕೆ'...

'ಅತ್ಯಾಚಾರ, ನಿರುದ್ಯೋಗ, ಬೆಲೆ ಏರಿಕೆ' ಉಲ್ಲೇಖಿಸಿ ಕೇಂದ್ರ ಸರಕಾರವನ್ನು ಕುಟುಕಿದ ರಾಜ್ಯ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ14 Dec 2019 9:00 PM IST
share
ಅತ್ಯಾಚಾರ, ನಿರುದ್ಯೋಗ, ಬೆಲೆ ಏರಿಕೆ ಉಲ್ಲೇಖಿಸಿ ಕೇಂದ್ರ ಸರಕಾರವನ್ನು ಕುಟುಕಿದ ರಾಜ್ಯ ಕಾಂಗ್ರೆಸ್

ಬೆಂಗಳೂರು, ಡಿ.14: ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ, ಅಗತ್ಯ ವಸ್ತುಗಳು ಹಾಗೂ ತೈಲೋತ್ಪನ್ನಗಳ ಬೆಲೆ ಏರಿಕೆ, ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿಸಿ ರಾಜ್ಯ ಕಾಂಗ್ರೆಸ್ ಸರಣಿ ಟ್ವೀಟ್‌ಗಳನ್ನು ಮಾಡಿದೆ. 

ದೇಶದ ಜನರನ್ನು ಹೆದರಿಸಲಾಗುತ್ತಿದೆ. ದೇಶದ ಹೆಣ್ಣುಮಕ್ಕಳು ಸುರಕ್ಷಿತರಾಗಿಲ್ಲ. ಇನ್ನು ಸಹಿಸಲು ಸಾಧ್ಯವಿಲ್ಲ. ‘ಭಾರತ ಉಳಿಸಿ ಅಭಿಯಾನ’ಕ್ಕೆ ಜೊತೆಯಾಗುತ್ತೇವೆ. ಭ್ರಷ್ಟಾಚಾರದಿಂದ ಭಾರತ ಉಳಿಸಿ. ನಾವು ಈ ದೇಶದ ಬಡ ಮತ್ತು ಮಧ್ಯಮ ವರ್ಗದ ಜನ. ಪೆಟ್ರೋಲ್ ಬೆಲೆ 80 ರೂ., ಈರುಳ್ಳಿ ಬೆಲೆ 120 ರೂ.ಇನ್ನು ಸಹಿಸಲು ಸಾಧ್ಯವಿಲ್ಲ. ‘ಭಾರತ ಉಳಿಸಿ ಅಭಿಯಾನ’ಕ್ಕೆ ಜೊತೆಯಾಗುತ್ತೇವೆ ಎಂದು ಅವರು ದೂರಿದರು.

ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ’ರೈತರ ಆತ್ಮಹತ್ಯೆ’ಯಿಂದ, ಭಾರತ ಉಳಿಸಿ. ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಗೊಳಿಸಿದರು, ಮರೆಯ ಬೇಡಿ. ಜಿಎಸ್‌ಟಿ, ನೋಟ್ ಬ್ಯಾನ್‌ನಂತಹ ಆಘಾತಗಳಿಂದ, ಭಾರತ ಉಳಿಸಿ. ದೇಶದ ಶ್ರೀಮಂತ ಉದ್ಯಮಪತಿಗಳ ಲಕ್ಷಾಂತರ ಕೋಟಿ ಸಾಲ ಮನ್ನಾ ಆಗುತ್ತಿದೆ. ಬಡವರ, ಮಧ್ಯಮವರ್ಗದವರ ಹಣವನ್ನು ಬ್ಯಾಂಕುಗಳು ನುಂಗಿ ಹಾಕುತ್ತಿವೆ. ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ನಿರಂತರ ‘ಬೆಲೆ ಏರಿಕೆ’ಯಿಂದ, ಭಾರತ ಉಳಿಸಿ. ದೇಶದ ಅರ್ಥ ವ್ಯವಸ್ಥೆಯನ್ನು ನಾಶಗೊಳಿಸಿದರು, ಮರೆಯಬೇಡಿ. ರಿಸರ್ವ್ ಬ್ಯಾಂಕ್ ಲೂಟಿ ಮಾಡಿದವರಿಂದ, ಭಾರತ ಉಳಿಸಿ. ನಾವು ದೇಶದ ಯುವ ಪೀಳಿಗೆ. ನಿರುದ್ಯೋಗದಿಂದ ಸಂಕಷ್ಟ ಅನುಭವಿಸುತ್ತಿದ್ದೇವೆ. ಇನ್ನು ಮುಂದೆ ಸಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಜನ ವಿರೋಧಿ ಸಂಚಾರ ನಿಯಮಗಳಿಂದ ಆಗುತ್ತಿರುವ ಹಗಲು ದರೋಡೆಯಿಂದ, ಭಾರತ ಉಳಿಸಿ. ‘ಭೇಟಿ ಬಚಾವೋ’ ಘೋಷಣೆ ಕೂಗಿ ಅಧಿಕಾರಕ್ಕೆ ಬಂದರು, ಈಗ ಹೆಣ್ಣು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯ, ಅತ್ಯಾಚಾರಗಳನ್ನು, ಮರೆತರು. ತಮ್ಮದೇ ಪಕ್ಷದ ನಾಯಕರಿಂದ ಅತ್ಯಾಚಾರಗಳು ಆಗುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದರು. ಇಂತಹ ದೇಶ ವಿರೋಧಿ ಶಕ್ತಿಗಳಿಂದ ಭಾರತವನ್ನು ಒಟ್ಟಾಗಿ ರಕ್ಷಿಸೋಣ ‘ಭಾರತ ಉಳಿಸಿ ಅಭಿಯಾನ’ ಎಂದು ಕಾಂಗ್ರೆಸ್ ಕರೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X