Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ...

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕ ಪ್ರತಿಭಟನೆ: 5 ರೈಲುಗಳಿಗೆ ಬೆಂಕಿ

ವಾರ್ತಾಭಾರತಿವಾರ್ತಾಭಾರತಿ14 Dec 2019 10:28 PM IST
share
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕ ಪ್ರತಿಭಟನೆ: 5 ರೈಲುಗಳಿಗೆ ಬೆಂಕಿ

ಕೋಲ್ಕತಾ, ಡಿ.14: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರುದ್ಧ ಪಶ್ಚಿಮ ಬಂಗಾಳ ದಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗಳು ಶನಿವಾರವೂ ಮುಂದುವರಿದಿದ್ದು,ವಿವಿಧೆಡೆ ಉದ್ರಿಕ್ತ ಜನರ ಗುಂಪುಗಳು ಹಲವಾರು ಬಸ್ಸುಗಳು,ಅಂಗಡಿಗಳಿಗೆ ಹಾನಿಯುಂಟು ಮಾಡಿದ್ದಾರೆ. ಹೌರಾ ಜಿಲ್ಲೆಯಲ್ಲಿ ರೈಲು ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ.

ಮುರ್ಶಿದಾಬಾದ್‌ನ ಲಾಗೊಲಾ ರೈಲು ನಿಲ್ದಾಣದಲ್ಲಿ ಪ್ರತಿಭಟನಕಾರರು ಪ್ರಯಾಣಿಕರಿಲ್ಲದ ಐದು ರೈಲುಗಳಿಗೆ ಬೆಂಕಿ ಹಚ್ಚಿದ್ದಾರೆ. ಮುರ್ಶಿದಾಬಾದ್ ಹಾಗೂ ಉತ್ತರ 24 ಪರಗಣ ಹಾಗೂ ಹೌರಾ ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಭಾರೀ ಹಿಂಸಾಚಾರದ ಘಟನೆಗಳು ವರದಿಯಾಗಿವೆ.

ರಾಷ್ಟ್ರೀಯ ಹೆದ್ದಾರಿ ಎನ್‌ಎಚ್6 (ಮುಂಬೈ ರಸ್ತೆ) ಹಾಗೂ ಎನ್‌ಎಚ್2 (ದಿಲ್ಲಿ ರಸ್ತೆ)ಗಳನ್ನು ಕೋಲ್ಕತಾ ನಗರಕ್ಕೆ ಸಂಪರ್ಕಿಸುವ ಹೌರಾದ ಕೊನಾ ಎಕ್ಸ್‌ಪ್ರೆಸ್‌ ವೇ ಹೆದ್ದಾರಿಯಲ್ಲಿ ಪ್ರತಿಭಟನಕಾರರು ಸುಮಾರು 15 ಸರಕಾರಿ ಹಾಗೂ ಖಾಸಗಿ ಬಸ್ಸುಗಳಿಗೆ ಬೆಂಕಿಹಚ್ಚಿದ್ದಾರೆ.

ಉತ್ತರ ಹಾಗೂ ದಕ್ಷಿಣ ಬಂಗಾಳವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳ ಲ್ಲೊಂದಾದ ರಾಷ್ಟ್ರೀಯ ಹೆದ್ದಾರಿ 34ರಲ್ಲಿ ಪ್ರತಿಭಟನಾಕಾರರು ಮುರ್ಷಿದಾಬಾದ್‌ನಲ್ಲಿ ರಸ್ತೆ ತಡೆ ನಿರ್ಮಿಸಿದ್ದಾರೆ ಹಾಗೂ ಹಲವಾರು ಬಸ್‌ಗಳಿಗೆ ಬೆಂಕಿ ಹಚ್ಚಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಹೌರಾ ಜಿಲ್ಲೆಯ ಡೊಮ್‌ಜುರ್‌ನಲ್ಲಿ ಪ್ರತಿಭಟನಾನಿರತರು ರಸ್ತೆಗಳಲ್ಲಿ ಟಯರ್‌ಗಳಿಗೆ ಸುಟ್ಟು ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಹಾಗೂ ಹಲವಾರು ವಾಹನಗಳನ್ನು ಜಖಂಗೊಳಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಲ್ಲಿಗೆ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ರವಾನಿಸಲಾಗಿದೆ. ಹೌರಾ ಗ್ರಾಮಾಂತರ ಜಿಲ್ಲೆಯ ಬಗ್ನಾನ್ ಪ್ರದೇಶದಲ್ಲಿ ಸುಮಾರು 20 ಅಂಗಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದವರು ಹೇಳಿದ್ದಾರೆ.

ಹೌರಾ ಜಿಲ್ಲೆಯ ಸಂಕ್ರೈಲ್‌ನಲ್ಲಿ ಶನಿವಾರ ದಾಂಧಲೆ ನಡೆಸಿದ ನೂರಾರು ಮಂದಿ ಪ್ರತಿಭಟನಕಾರರು ರೈಲುನಿಲ್ದಾಣದ ಕಟ್ಟಡದ ಒಂದು ಭಾಗಕ್ಕೆ ಬೆಂಕಿ ಹಚ್ಚಿದ್ದಾರೆ. ಅಲ್ಲಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿಯ ಮೇಲೂ ಅವರು ಹಲ್ಲೆ ನಡೆಸಿದ್ದಾರೆ.

ಪೂರ್ವ ರೈಲ್ವೆಯ ಸಿಲ್ಡಾ ಹಾಗೂ ಹಸ್ನಾಬಾದ್ ವಿಭಾಗದಲ್ಲಿ ರೈಲುಗಳ ಸಂಚಾರಕ್ಕೆ ತಡೆಯುಂಟು ಮಾಡಿರುವ ಬಗ್ಗೆಯೂ ವರದಿಗಳು ಬಂದಿವೆ.

ಆಗ್ನೇಯ ರೈಲು ವಲಯದ ಹೌರಾ-ಖರಗಪುರ ವಿಭಾಗದಲ್ಲಿ ಪ್ರತಿಭಟನಕಾರರು ರೈಲು ಹಳಿಗಳಲ್ಲಿ ಧರಣಿ ನಡೆಸಿದ್ದರಿಂದ ಇಂದು ಬೆಳಗ್ಗೆ 11:00 ಗಂಟೆಯಿಂದ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಪೌರತ್ವ ಕಾಯ್ದೆ ಪ.ಬಂಗಾಳದಲ್ಲಿ ಜಾರಿಗೆ ಅವಕಾಶ ನೀಡಲಾರೆ: ಮಮತಾ ಗುಡುಗು

ತನ್ನ ರಾಜ್ಯದಲ್ಲಿ ಯಾವುದೇ ಸನ್ನಿವೇಶದಲ್ಲಿಯೂ ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿಗೆ ಅವಕಾಶ ನೀಡುವುದಿಲ್ಲವೆಂದು ಈ ಮಧ್ಯೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಪುನರುಚ್ಚರಿಸಿದ್ದಾರೆ.

ರಸ್ತೆ ಹಾಗೂ ರೈಲು ತಡೆ ನಡೆಸದಂತೆ ಹಾಗೂ ಹಿಂಸಾಚಾರಕ್ಕಿಳಿಯದಂತೆ ಜನರಿಗೆ ಮನವಿ ಮಾಡಿದ್ದಾರೆ ಗಲಭೆಗಳನ್ನು ಸೃಷ್ಚಿಸುವವರು ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವವರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಸಾರ್ವಜನಿಕ ಸೊತ್ತುಗಳಿಗೆ ಹಾನಿಯೆಸಗುವವರು ಕಠಿಣ ಕ್ರಮವನ್ನು ಎದುರಿಸಬೇಕಾಗೀತೆಂದು ಅವರು ಎಚ್ಚರಿಕೆ ನೀಡಿದ್ದಾರೆ.ಮಮತಾ ಬ್ಯಾನರ್ಜಿ ಅವರು ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಬಲ ವಿರೋಧಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X