Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಾಜವಾದ ನಂಬಿಕೆಯನ್ನು...

ಸಮಾಜವಾದ ನಂಬಿಕೆಯನ್ನು ಕಳೆದುಕೊಳ್ಳುತ್ತಿದೆ: ರೈತ ನಾಯಕ ಕೆ.ಟಿ.ಗಂಗಾಧರ್

ವಾರ್ತಾಭಾರತಿವಾರ್ತಾಭಾರತಿ14 Dec 2019 11:04 PM IST
share
ಸಮಾಜವಾದ ನಂಬಿಕೆಯನ್ನು ಕಳೆದುಕೊಳ್ಳುತ್ತಿದೆ: ರೈತ ನಾಯಕ ಕೆ.ಟಿ.ಗಂಗಾಧರ್

ಬೆಂಗಳೂರು, ಡಿ.14: ಇಂದಿನ ಸಮಾಜದಲ್ಲಿ ಸಮಾಜವಾದವು ನಂಬಿಕೆಯನ್ನೇ ಕಳೆದುಕೊಳ್ಳುತ್ತಿದೆ. ಅದನ್ನು ಮರು ಸೃಷ್ಟಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ರೈತ ನಾಯಕ ಕೆ.ಟಿ.ಗಂಗಾಧರ್ ಅಭಿಪ್ರಾಯಪಟ್ಟಿದ್ದಾರೆ. 

ಶನಿವಾರ ನಗರದ ಗಾಂಧಿ ಭವನದಲ್ಲಿ ಸಮಾಜವಾದಿ ಅಧ್ಯಯನ ಕೇಂದ್ರ, ರಾಷ್ಟ್ರ ಸೇವಾ ದಳ, ಹಿಂದ್ ಮಜ್ದೂರ್ ಸಭಾ, ಕರ್ನಾಟಕ ರಾಜ್ಯ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಜಂಟಿಯಾಗಿ ಮಹಾತ್ಮ ಗಾಂಧಿ-ಕಸ್ತೂರ ಬಾ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ‘ಪರ್ಯಾಯ ವ್ಯವಸ್ಥೆಗಾಗಿ ರಾಷ್ಟ್ರಮಟ್ಟದ ಸಮಾಜವಾದಿ ಸಮಾಗಮ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶೋಷಿತ ವರ್ಗಗಳ ಪರವಾಗಿ, ದುಡಿಯುವವರ ಧ್ವನಿಯಾಗಿ ನಿಂತಿದ್ದ ಸಮಾಜವಾದಿಗಳು ಎಲ್ಲರೂ ಬದಲಾಗುತ್ತಿದ್ದಾರೆ. ಸಮಾಜವಾದಿ ನಾಯಕರ ಮೇಲೆ ಇಂದಿನ ಯುವ ಸಮೂಹ ಸಂಪೂರ್ಣ ಅಪನಂಬಿಕೆಯನ್ನು ಬೆಳೆಸಿಕೊಂಡಿದೆ. ಇದನ್ನು ತೊಲಗಿಸಲು ಮತ್ತೊಮ್ಮೆ ಎಲ್ಲರೂ ಒಂದಾಗಬೇಕಿದೆ. ಪರ್ಯಾಯ ವ್ಯವಸ್ಥೆ ಕಟ್ಟಬೇಕಾಗಿದೆ ಎಂದು ನುಡಿದರು.

ಸ್ವಾತಂತ್ರ ಪೂರ್ವದಲ್ಲಿ, ಸ್ವಾತಂತ್ರ ನಂತರ ಹಾಗೂ ಇಂದಿಗೂ ಸಮಾಜವಾದಿಗಳ ಪಾತ್ರ ಅಪಾರವಾಗಿದೆ. ಅಂದಿನಿಂದ ಇಂದಿನವರೆಗೂ ನಿರಂತರವಾದ ಹೋರಾಟ ನಡೆಸಿಕೊಂಡು ಬಂದಿದ್ದೇವೆ. 200 ವರ್ಷಗಳು ಭಾರತವನ್ನಾಳಿದ ಬ್ರಿಟಿಷರು ಹಾಗೂ ಪರಕೀಯರು ಸೃಷ್ಟಿಸಿದ ಸಮಸ್ಯೆಗಳು ಇಂದಿಗೂ ಮುಂದುವರಿದಿದೆ ಎಂದು ಅವರು ಹೇಳಿದರು.

ದೇಶಕ್ಕೆ ಸ್ವತಂತ್ರ ಬಂದು 70 ವರ್ಷಗಳು ಕಳೆಯುತ್ತಿದ್ದರೂ, ಇನ್ನೂ ಯಾವುದೇ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. 70 ವರ್ಷಗಳಲ್ಲಿ ಅಧಿಕಾರ ನಡೆಸಿದ ಎಲ್ಲ ರಾಜಕೀಯ ಪಕ್ಷಗಳೂ ಇದಕ್ಕೆ ಹೊಣೆಗಾರರಾಗಿದ್ದಾರೆ. ನಮ್ಮನ್ನು ಕಾಡುತ್ತಿರುವ ಅನೇಕ ಸಮಸ್ಯೆಗಳ ವಿರುದ್ಧ ಸಮಾಜವಾದಿಗಳು ಚಿಂತನೆ ಮಾಡಬೇಕು ಹಾಗೂ ಹೋರಾಟ, ಚಳವಳಿ ರೂಪಿಸಬೇಕಿದೆ ಎಂದರು.

ಸಮಾಜವಾದಿಗಳ ಹೋರಾಟದ ಬಗ್ಗೆ ವಿದ್ಯಾರ್ಥಿ, ಯುವಜನರು, ಕೃಷಿ ಕೂಲಿ ಕಾರ್ಮಿಕರು, ರೈತರು ಸೇರಿದಂತೆ ಎಲ್ಲರಿಗೂ ಅರಿವು ಮೂಡಿಸಬೇಕಿದೆ. ವಿದ್ಯಾವಂತರು, ಉದ್ಯೋಗಸ್ಥ ಯುವಜನರು, ಚಳವಳಿಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಿದೆ ಎಂದು ಅವರು ಸಲಹೆ ನೀಡಿದರು.

ಕೇಂದ್ರ ಸರಕಾರ ಜಿಡಿಪಿಯಲ್ಲಿ ರೈತರ ಪಾಲು ಅತ್ಯಂತ ಕಡಿಮೆಯಿದೆ ಎನ್ನುತ್ತಿದೆ. ಆದರೆ, ಅಧಿಕ ಪ್ರಮಾಣದಲ್ಲಿ ಕೃಷಿ ಕ್ಷೇತ್ರದಿಂದಲೇ ಜಿಡಿಪಿಗೆ ಪಾಲು ಹೋಗುತ್ತಿದೆ ಎಂದ ಅವರು, ಬೀದಿಯಲ್ಲಿ ತರಕಾರಿ ಮಾರಾಟ ಮಾಡವವರಿಗೆ ಅರ್ಥವಾದಷ್ಟು ಪ್ರಧಾನಿಗೆ ನಮ್ಮ ದೇಶದ ಅರ್ಥ ವ್ಯವಸ್ಥೆ ಅರ್ಥವಾಗಿಲ್ಲ ಎಂದರು.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಮಾತನಾಡಿ, ಸಮಾಜವಾದಿ ಚಿಂತನೆಗಳು ಕಮ್ಯುನಿಸ್ಟ್ ಚಿಂತನೆಗಳ ಮತ್ತೊಂದು ಸ್ವರೂಪವಾಗಿದೆ. ಪಂಚಾಯತ್ ಮಟ್ಟದಿಂದ ಹಿಡಿದು ರಾಜ್ಯ, ದೇಶದಲ್ಲಿ ಎಲ್ಲರಿಗೂ ಅಧಿಕಾರ ಹಂಚಿಕೆಯಾಗಬೇಕು ಎಂಬುದೇ ಸಮಾಜವಾದದ ಆಶಯ. ಆದರೆ, ಇದು ಎಲ್ಲಿಯೂ ಚಾಲನೆಗೆ ಬಂದಿಲ್ಲ ಎಂದರು.

ಇಂದಿನ ನಮ್ಮ ಸಮಾಜವಾದ ಚಿಂತನೆಗಳು ನೆಲಕಚ್ಚುವ ಹಂತಕ್ಕೆ ತಲುಪಿದೆ. ಆದರೆ, ಸಮಾಜವಾದಿ ಚಿಂತನೆಗಳು ಎಂದಿಗೂ ಸಾಯುವುದಿಲ್ಲ ಎಂದ ಅವರು, ಮೋದಿ ಹಾಗೂ ಅಮಿತ್ ಶಾ ಸಮಾಜವಾದಿ ನಾಯಕರನ್ನೇ ಗುರಿಯಾಗಿಸಿದ್ದು, ಅವರನ್ನು ಅವರೆಡೆಗೆ ಸೆಳೆಯುತ್ತಿದ್ದಾರೆ. ಆದರೆ, ಅದು ಸಾಕಾರಗೊಳ್ಳುವುದಿಲ್ಲ ಎಂದರು.

ಕೇಂದ್ರ ಸರಕಾರ ಜಾರಿಗೆ ಮುಂದಾಗಿರುವ ಪೌರತ್ವ ತಿದ್ಧುಪಡಿ ಕಾಯ್ದೆ ಸಂವಿಧಾನ ವಿರೋಧಿಯಾಗಿದೆ. ಅಪಾಯಕಾರಿ ಕಾಯ್ದೆಯ ವಿರುದ್ಧ ಎಲ್ಲರೂ ಧ್ವನಿ ಎತ್ತಬೇಕಿದೆ. ಅಲ್ಲದೆ, ಮಹಿಳೆಯರ ಮೇಲಿನ ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆಗಳ ವಿರುದ್ಧ, ಸರಕಾರದ ಜನ ವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಬಿ.ಆರ್.ಪಾಟೀಲ್, ಮೈಕಲ್ ಬಿ. ಫನಾಂಡೀಸ್, ಪ್ರಾಧ್ಯಾಪಕ ಅಶೀಮ್ ರಾಯ್, ಪ್ರೊ.ವರ್ಗೀಸ್ ಜಾರ್ಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X