Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಗತಿಪರರ ಧ್ರುವೀಕರಣ ಅನಿವಾರ್ಯ:...

ಪ್ರಗತಿಪರರ ಧ್ರುವೀಕರಣ ಅನಿವಾರ್ಯ: ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ14 Dec 2019 11:20 PM IST
share
ಪ್ರಗತಿಪರರ ಧ್ರುವೀಕರಣ ಅನಿವಾರ್ಯ: ಬರಗೂರು ರಾಮಚಂದ್ರಪ್ಪ

ಬೆಂಗಳೂರು, ಡಿ.14: ಪ್ರಗತಿಪರರು ಮೂಲ ಅಸ್ತಿತ್ವವನ್ನು ಬಿಟ್ಟು ಕೊಡದೆಯೂ ಸಹ ಈ ದೇಶದಲ್ಲಿ ಒಂದು ಧ್ರುವೀಕರಣದ ಅನಿವಾರ್ಯತೆ ಇದೆ. ಪ್ರಗತಿಪರರು ಧ್ರುವೀಕರಣದ ಅರ್ಥವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೇ ಹೋದರೆ ಇವತ್ತು ಎದುರಾಗುತ್ತಿರುವ ಸಮಸ್ಯೆಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. 

ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಚಿಂತನ ಚಿಲುಮೆ ಸಂಘಟನೆ, ಸಮಕಾಲೀನ ವೇದಿಕೆ, ಮಾಲೆ ಪ್ರಕಾಶನ, ಜನಚಿಂತನ ಕೇಂದ್ರ, ದಲಿತ ಹಕ್ಕುಗಳ ಸಮಿತಿ ಹಾಗೂ ಅಖಿಲ ಕರ್ನಾಟಕ ವಿಚಾರವಾದಿಗಳ ಸಂಘಟನೆ ಸಹಯೋಗದೊಂದಿಗೆ ನಡೆದ 1962ರ ಭಾರತ-ಚೈನಾ ಯುದ್ಧಕ್ಕೆ ಸಂಬಂಧಿಸಿದ ಯಡೂರ ಮಹಾಬಲ ಬರೆದ ಪುಸ್ತಕಗಳ ಬಿಡುಗಡೆ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಬೃಹತ್ ರಾಷ್ಟ್ರಗಳಿಗೆ ಯುದ್ಧವೆಂಬುದು ಒಂದು ಉದ್ಯಮ. ಇತರ ದೇಶಗಳ ನಡುವೆ ಕಿಚ್ಚು ಹಚ್ಚಿ ತಮ್ಮ ವ್ಯಾಪಾರ ವೃದ್ಧಿಸಿಕೊಳ್ಳುವ ಕೆಲಸವನ್ನು ಬೃಹತ್ ರಾಷ್ಟ್ರಗಳು ಮಾಡುತ್ತಿವೆ. ಶಾಂತಿಯ ಮಾತುಗಳನ್ನು ಹೇಳುತ್ತಾ ಯುದ್ಧವನ್ನು ಬೆಂಬಲಿಸುತ್ತವೆ. ಮೊದಲೆಲ್ಲ ರಾಜಪ್ರಭುತ್ವದಲ್ಲಿ ಮತ್ತು ಪ್ರಜಾಪ್ರಭುತ್ವದಲ್ಲಿ ಯುದ್ಧಗಳು ಗಡಿ ಭಾಗಕ್ಕಾಗಿ ನಡೆಯುತ್ತಿದ್ದವು. ಆದರೆ, ಈಗ ಮತದಾನಕ್ಕಾಗಿ ಹಾಗೂ ಪಕ್ಷದ ಅಸ್ತಿತ್ವಕ್ಕಾಗಿ ಯುದ್ಧದ ಮಾತುಗಳು ಕೇಳಿ ಬರುತ್ತಿವೆ. ಯುದ್ಧ ಭೂಮಿಯಲ್ಲಿ ಹೋರಾಡುವ ಸೈನಿಕನ ಬಲಿದಾನಕ್ಕೆ ಬೆಲೆಯೆ ಇಲ್ಲದಂತಾಗಿದೆ ಎಂದು ವಿಷಾದಿಸಿದರು.

ಕನ್ನಡಕ್ಕೆ ಯುದ್ಧಗಳ ಕುರಿತಾದ ಕೃತಿಗಳ ಅಗತ್ಯತೆ ಇದೆ. ಯುದ್ಧದ ಬಗ್ಗೆ ಬರೆಯುವ ಕೃತಿಕಾರ ಘಟನೆಯ ಭೂತ ಕಾಲವನ್ನು ಪ್ರಧಾನವಾಗಿಟ್ಟುಕೊಂಡು ವರ್ತಮಾನಕ್ಕೆ ಅನುಗುಣವಾಗುವಂತೆ ಕೃತಿಯನ್ನು ರಚಿಸಬೇಕು. ಯುದ್ಧದ ಘಟನಾವಳಿಗಳನ್ನು, ಅಲ್ಲಿನ ನಿಜವಾದ ವಿದ್ಯಾಮಾನಗಳನ್ನು (ಯುದ್ಧ ಸಂದರ್ಭದ ಸತ್ಯಗಳು) ಯುದ್ಧದ ಬಗ್ಗೆ ಆಧಾರಗಳ ಸಂಗ್ರಹವನ್ನು ಬದ್ಧತೆಯಿಂದ ಮಾಡಿ, ಆ ಸಂದರ್ಭದ ಆಂತರಿಕ ವಿಷಯಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಾಗ ಇತಿಹಾಸ ರಚಿಸಲು ಸಾಧ್ಯ ಎಂದರು.

ರೈತ ಮುಖಂಡ ಜೆ.ಎಂ. ವೀರಸಂಗಯ್ಯ ಮಾತನಾಡಿ, ಯುದ್ಧದ ಉನ್ಮಾದ ಬೇಡ. ಭಾರತದಂತಹ ಶಾಂತಿಯುತ ರಾಷ್ಟ್ರಕ್ಕೆ ಯುದ್ಧದ ಅಗತ್ಯ ಇಲ್ಲ. ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಯುದ್ಧದ ಮಾತುಗಳನ್ನು ಆಡುವುದು ತಪ್ಪು ಎಂದು ಹೇಳಿದ ಅವರು, ಯುದ್ಧ ಬೇಡ ಎಂಬುವವರನ್ನು ದೇಶದ್ರೋಹಿಗಳು ಎಂಬ ಪಟ್ಟಿಗೆ ಸೇರಿಸುವ ಕಾಲ ಇದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯಡೂರು ಮಹಾಬಲ ಬರೆದಿರುವ ಯುದ್ಧ ಪೂರ್ವ ಕಾಂಡ(1962ರ ಭಾರತ- ಚೀನಾ ಯುದ್ಧದ ಹಿಂದಿನ ಬೆಳವಣಿಗೆಗಳು), ಯುದ್ಧ ಕಾಂಡ (1962ರ ಭಾರತ-ಚೀನಾ ಯುದ್ಧದ ವಿವರಗಳು) ಪುಸ್ತಕ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ವಿಮರ್ಶಕ ರಾಜೇಂದ್ರ ಚೆನ್ನಿ, ಕೆ.ಎನ್ ಉಮೇಶ್, ಡಾ. ಪ್ರಕಾಶ್ ಕೃಷ್ಣಪ್ಪ, ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಮಾವಳ್ಳಿ ಶಂಕರ್, ಪತ್ರಕರ್ತ ಸಿದ್ಧನಗೌಡ ಪಾಟೀಲ್, ಚಿಂತನ ಚಿಲುಮೆಯ ಸಂಚಾಲಕ ಟಿ.ಎಸ್ ಅನಂತರಾಮ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X