Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಸ್ಲಿಮರ ಮೇಲೆ ಕಲ್ಪಿತ ಸುಳ್ಳುಗಳನ್ನು...

ಮುಸ್ಲಿಮರ ಮೇಲೆ ಕಲ್ಪಿತ ಸುಳ್ಳುಗಳನ್ನು ಸೃಷ್ಟಿಸಿ ದೇಶವನ್ನು ಒಡೆಯಲಾಗುತ್ತಿದೆ: ಪ್ರೊ.ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ15 Dec 2019 6:09 PM IST
share
ಮುಸ್ಲಿಮರ ಮೇಲೆ ಕಲ್ಪಿತ ಸುಳ್ಳುಗಳನ್ನು ಸೃಷ್ಟಿಸಿ ದೇಶವನ್ನು ಒಡೆಯಲಾಗುತ್ತಿದೆ: ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು, ಡಿ.15: ಮುಸ್ಲಿಮ್ ಸಮುದಾಯದ ಮೇಲೆ ಕಲ್ಪಿತ ಸುಳ್ಳುಗಳನ್ನು ಸೃಷ್ಟಿಸುವ ಮೂಲಕ ದೇಶವನ್ನು ಒಡೆಯಲಾಗುತ್ತಿದೆ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ರವಿವಾರ ಅಭಿವ್ಯಕ್ತಿ ದಾವಣಗೆರೆ ಪ್ರಕಾಶನ ನಗರದ ಕಸಾಪ ಸಭಾಂಗಣದಲ್ಲಿ ಆಯೋಜಿಸಿದ್ದ ಲೇಖಕ ಮಲ್ಲಿಕಾರ್ಜುನ ಕಡಕೋಳರ ‘ಯಡ್ರಾಮಿ ಸೀಮೆ ಕಥನಗಳು’ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಮುಸ್ಲಿಮ್ ದೊರೆಗಳು ಕನ್ನಡ ವಿರೋಧಿಗಳು, ಸಂಸ್ಕೃತಿ ವಿರೋಧಿಗಳು ಎಂಬ ರೀತಿಯಲ್ಲಿ ಸುಳ್ಳುಗಳನ್ನು ಹರಡುತ್ತಾ ಬರಲಾಗಿದೆ. ಆದರೆ, ವಾಸ್ತವವಾಗಿ ಕನ್ನಡದ ಸಾಹಿತ್ಯದ ಸೃಜನಶೀಲತೆಗೆ ಮುಸ್ಲಿಮ್ ದೊರೆಗಳ ಕೊಡುಗೆ ಅಪಾರ. ಮುಖ್ಯವಾಗಿ ಸೂಫಿ, ತತ್ವಪದ, ಜನಪದ ಸಾಹಿತ್ಯ ಮುಸ್ಲಿಮ್ ದೊರೆಗಳ ಆಳ್ವಿಕೆಯಲ್ಲಿಯೇ ಹೆಚ್ಚು ಮುನ್ನೆಲೆಗೆ ಬಂದಿದ್ದು ಎಂಬುದನ್ನು ತಿಳಿಯಬೇಕಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಇನ್ನು ಮುನ್ನೆಲೆಗೆ ಬಾರದ ಅನೇಕ ಅಸ್ಪೃ ಶ್ಯ, ತಳ ಸಮುದಾಯಗಳ ಸಂಸ್ಕೃತಿಗಳಿವೆ. ಇವೆಲ್ಲವೂ ಪ್ರಧಾನ ಸಂಸ್ಕೃತಿಯ ದಬ್ಬಾಳಿಕೆಯಲ್ಲಿ ಮುಚ್ಚಿಹೋಗಿವೆ. ಇವುಗಳನ್ನು ಹೊರತೆಗೆದು ಮುನ್ನೆಲೆಗೆ ತಂದು ಮುಖಾಮುಖಿಗೊಳಿಸಿದಾಗ ಮಾತ್ರ ನಿಜವಾದ ಭಾರತದ ರಾಷ್ಟ್ರೀಯತೆ, ಬಹುಸಂಸ್ಕೃತಿಯನ್ನು ಕಟ್ಟಲು ಸಾಧ್ಯವೆಂದು ಅವರು ಅಭಿಪ್ರಾಯಿಸಿದರು.

ದೇಶಿ ಸಂಸ್ಕೃತಿಯೆಲ್ಲವೂ ಶ್ರೇಷ್ಟವೆಂದು ತಿಳಿಯಬಾರದು. ಹಾಗೆ ಒಪ್ಪಿಕೊಂಡುಬಿಟ್ಟರೆ ಜಾತಿಯಾಧಾರಿತ ಕುಲಕಸುಬುಗಳ ಉತ್ಪಾದನಾ ಪದ್ಧತಿಯನ್ನು ಸಮ್ಮತಿಸಿದಂತೆ ಆಗುತ್ತದೆ. ಈ ನಿಟ್ಟಿನಲ್ಲಿ ನೋಡುವುದಾದರೆ ಕೈಗಾರೀಕರಣವು ಜಾತಿಚೌಕಟ್ಟನ್ನು ಮೀರಿ ಉತ್ಪಾದನೆಯಲ್ಲಿ ತೊಡಗುವಂತೆ ಮಾಡುವಲ್ಲಿ ಸ್ವಲ್ಪಮಟ್ಟಿಗಾದರು ಯಶಸ್ವಿಯಾಗಿದೆ. ಹೀಗಾಗಿ ಯಾವುದನ್ನು ನಾವು ಸರಾಸಗಟಾಗಿ ಒಪ್ಪಿಕೊಳ್ಳದೆ, ತಿರಸ್ಕರಿಸದೆ ಜನರ ಆಶಯಗಳಿಗೆ ಪೂರಕವಾಗಿರುವ ಅಂಶಗಳನ್ನು ಪ್ರತಿಯೊಂದರಿಂದಲೂ ಪಡೆದುಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಬಂಡಾಯ ಸಾಹಿತಿ ಬಸವರಾಜ ಸಬರದ ಮಾತನಾಡಿ, ಹೈ.ಕ. ಇತಿಹಾಸದ ಹಾಗು-ಹೋಗುಗಳ ಕುರಿತು ರಾಜ್ಯದ ಎಲ್ಲ ಭಾಗಗಳ ಜನತೆಗೆ ಗೊತ್ತಿಲ್ಲ. ಇದನ್ನು ತಿಳಿಯುವ ಆಸಕ್ತಿಯಿದ್ದರೆ ಹಿರಿಯ ಲೇಖಕ ಮಲ್ಲಿಕಾರ್ಜುನ ಕಡಕೋಳರವರು ಐದು ದಶಕಗಳ ಹೈ-ಕ ಭಾಗದ ಸಾಂಸ್ಕೃತಿಕ, ಸಾಹಿತ್ಯ, ಸಾಮಾಜಿಕ ಹಾಗೂ ರಾಜಕೀಯ ಬದುಕನ್ನು ‘ಯಡ್ರಾಮಿ ಸೀಮೆ ಕಥನಗಳು’ ಕೃತಿಯಲ್ಲಿ ದಾಖಲಿಸಿದ್ದಾರೆ. ಇದನ್ನು ಓದುವ ಮೂಲಕ ಹೈ.ಕ. ಸಂಸ್ಕೃತಿಯನ್ನು ಅರಿಯಬಹುದು ಎಂದು ತಿಳಿಸಿದರು.

ಹೈ.ಕ ಭಾಗದ ಸಾಂಸ್ಕೃತಿಕ ಲೋಕವೇ ವೈಶಿಷ್ಟತೆಯಿಂದ ಕೂಡಿದ್ದಾಗಿದೆ. ಇಲ್ಲಿನ ಸಾಹಿತ್ಯ ಪಾಶ್ಚಾತ್ಯದಿಂದ ಪ್ರಭಾವಿತವಾಗಿಲ್ಲ. ಬದಲಿಗೆ, ಸೂಫಿ, ತತ್ವಪದಕಾರರು, ವಚನಕಾರರ ಪ್ರಭಾವಕ್ಕೆ ಒಳಗಾಗಿ ಬಂಡಾಯ, ಪ್ರಗತಿಪರ ಚಿಂತನೆಗಳ ಆಶಯಗಳನ್ನು ಒಳಗೊಂಡಿದೆ ಎಂದರು. ಕವಯಿತ್ರಿ ಎಚ್.ಎಲ್.ಪುಷ್ಪಾ, ಲೇಖಕ ಮಲ್ಲಿಕಾರ್ಜುನ ಕಡಕೋಳ ಹಾಜರಿದ್ದರು.

‘ಭಾರತದಲ್ಲೇ ಮಾತ್ರ ಜಾಗತೀಕರಣ ಏಕಮುಖವಾಗಿ ಚಲನೆಯಿಂದ ಕೂಡಿದ್ದು, ಕೇವಲ ಜಾತಿಗಳು ಮಾತ್ರ ಜಾಗತೀಕರಣಗೊಂಡಿವೆ. ವಿದೇಶದಲ್ಲಿ ಜಾತಿ ಸಂಘಗಳು, ಮಠಗಳನ್ನು ಸ್ಥಾಪಿಸಿರುವುದೇ ಭಾರತದ ಜಾಗತೀಕರಣವಾಗಿದೆ. ಅಮೆರಿಕಾ ತನ್ನ ದೇಶದ ರೈತರಿಗೆ ಶೇ.25ಕ್ಕೂ ಹೆಚ್ಚು ಸಬ್ಸಿಡಿ ನೀಡುತ್ತದೆ. ಆದರೆ, ಭಾರತ ರೈತರಿಗೆ ಕೇವಲ ಶೇ.3ರಷ್ಟು ಸಬ್ಸಿಡಿ ನೀಡುತ್ತಿದೆ. ಹೀಗಾಗಿ ನಮಗೆ ಬೇಕಿರುವುದು ಜಾತಿಯ ಜಾಗತೀಕರಣವಲ್ಲ. ವಿವೇಕದ ಜಾಗತೀಕರಣಬೇಕಾಗಿದೆ’

-ಪ್ರೊ.ಬರಗೂರು ರಾಮಚಂದ್ರಪ್ಪ, ಹಿರಿಯ ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X