Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಮೇಶ್ ಜಾರಕಿಹೊಳಿ ವಿರುದ್ಧ ಸತೀಶ್...

ರಮೇಶ್ ಜಾರಕಿಹೊಳಿ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ15 Dec 2019 7:16 PM IST
share
ರಮೇಶ್ ಜಾರಕಿಹೊಳಿ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ, ಡಿ. 15: ‘ಉಪಚುನಾವಣೆಯಲ್ಲಿ ಆಯ್ಕೆಯಾದ ‘ಅರ್ಹರು’ ಮತ್ತು ಬಿಜೆಪಿ ಅಸಮಾಧಾನಿತರು ಯಡಿಯೂರಪ್ಪ ಸರಕಾರವನ್ನು ಅಲ್ಲಾಡಿಸುವುದು ನಿಶ್ಚಿತ. ಈಗಾಗಲೇ ರಮೇಶ್ ಜಾರಕಿಹೊಳಿ ಬ್ಲ್ಯಾಕ್‌ ಮೇಲ್ ರಾಜಕಾರಣ ಆರಂಭವಾಗಿದೆ’ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ರವಿವಾರ ಗೋಕಾಕ್ ಕ್ಷೇತ್ರದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ಜಾರಕಿಹೊಳಿ ಸಹೋದರರು ಒಂದಲ್ಲ ಎಂಬುದು ಸಾಬೀತಾಗಿದೆ. ರಮೇಶ್ ಮತ್ತವರ ಅಳಿಯಂದಿರ ವಿರುದ್ಧ ಹೋರಾಟ ನಿಲ್ಲದು ಎಂದು ಎಚ್ಚರಿಸಿದರು.

ಬೆದರಿಸಲು ಸಿದ್ದು ಭೇಟಿ: ಅಧಿವೇಶನದಲ್ಲಿ ತನ್ನ ವಿರುದ್ಧ ಮಾತನಾಡಬಾರದು ಎಂದು ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ನಾನು ಹೇಳಿದಂತೆ ಕೇಳದಿದ್ದರೆ ಕಾಂಗ್ರೆಸ್‌ಗೆ ಹೋಗ್ತೀನಿ ಎಂಬ ಸಂದೇಶವನ್ನು ಬಿಜೆಪಿಗೆ ಸಿದ್ದರಾಮಯ್ಯ ಭೇಟಿ ಮೂಲಕ ರಮೇಶ್ ನೀಡಿದ್ದಾರೆಂದು ಸತೀಶ್ ಜಾರಕಿಹೊಳಿ ಟೀಕಿಸಿದರು.

ದುಡ್ಡು ಮಾಡಬೇಕು, ಅಧಿಕಾರ ಮಜಾ ಮಾಡಬೇಕೆಂಬುದಷ್ಟೇ ರಮೇಶ್ ಉದ್ದೇಶ. ತನಗೆ ನೀರಾವರಿ ಸಚಿವ ಸ್ಥಾನ ನೀಡಬೇಕು. ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಸಿದ್ದರಾಮಯ್ಯರ ಬಳಿ ಹೋಗಿದ್ದಾರೆ. ಆದರೆ, ಇವರ ಗೋಕಾಕ್‌ನಲ್ಲಿ ಒಂದು ಸರಕಾರಿ ಕಾಲೇಜು ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಮುಂದಿನ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ರಕ್ಷಣೆಗೆ ಯಾರೂ ಬರುವುದಿಲ್ಲ. ಆಗ ಯಡಿಯೂರಪ್ಪ, ಬಾಲಚಂದ್ರ ಪಡೆಯೂ ಬರುವುದಿಲ್ಲ. ಹೀಗಾಗಿ ಮುಂದಿನ ಚುನಾವಣೆಗೆ ನಾವು ಪಕ್ಷ ಬಲಪಡಿಸಬೇಕಾಗಿದೆ. ಇನ್ನೂ ಮೂರು ವರ್ಷ ಬಳಿಕವೇ ರಮೇಶ್ ಹಳ್ಳಿಗೆ ಬರುವುದು ಎಂದು ಟೀಕಿಸಿದರು. ಉಪಚುನಾವಣೆಯಲ್ಲಿ ಸೊಸೆಗೆ ಬಹಳ ಸಿಂಗಾರ ಮಾಡಿದರು. ಮುಂದಿನ ಚುನಾವಣೆಗೆ ಈ ಸೊಸೆ ಹಳೆದಾಗಿ ಹೋಗಿರುತ್ತಾಳೆ. ಇನ್ನು ಮೂರು ವರ್ಷಕ್ಕೆ ಹಳೆಯದಾಗಿ ಹೋಗಿರುತ್ತದೆ ಈ ಗಿರಾಕಿ ಎಂದು ಸತೀಶ್ ಜಾರಕಿಹೊಳಿ ಲೇವಡಿ ಮಾಡಿದರು.

ಗೋಕಾಕ್ ಕ್ಷೇತ್ರದ ಪ್ರಚಾರಕ್ಕೆ ಬಿಎಸ್‌ವೈ ಬರದಿದ್ದರೆ ರಮೇಶ್ ಜಾರಕಿಹೊಳಿ ಮೂರನೆ ಸ್ಥಾನಕ್ಕೆ ತಳ್ಳಲ್ಪಡುತ್ತಿದ್ದರು. ಯಡಿಯೂರಪ್ಪ, ಬಾಲಚಂದ್ರ ಬಂದಿದ್ದ ಕಾರಣ ರಮೇಶ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ, ಲಕ್ಷಾಂತರ ರೂ.ಖರ್ಚು ಮಾಡಿ ಗೆಲುವು ಸಾಧಿಸಿದ್ದಾರೆಂದು ಆರೋಪ ಮಾಡಿದರು.

ಕ್ಷೇತ್ರದ ಜನರ ಜತೆ ಲಖನ್ ಜಾರಕಿಹೊಳಿ ಇರಲಿದ್ದು, ಕೆಲಸ ಮಾಡುವವರ ಮನೆ ಬಾಗಿಲಿಗೆ ಟಿಕೆಟ್ ಬರುತ್ತದೆ. ಮೊದಲು ಸಂಘಟನೆ ಮಾಡಬೇಕು. ಏನೇ ಆದರೂ ಒಳ್ಳೆಯದಕ್ಕೆ ಆಗುತ್ತದೆ. ಹೀಗಾಗಿ ಲಖನ್ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

‘ರಮೇಶ್ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದರೆ ಬಿಜೆಪಿ ಜಲ(ನೀರು) ಪಾಲಾಗಲಿದ್ದು, ಸಂಪನ್ಮೂಲ ಸಂಪೂರ್ಣ ರಮೇಶ್ ಜಾರಕಿಹೊಳಿ ಜೇಬು ಸೇರಲಿದೆ. ಹೀಗಾಗಿ ಅವರಿಗೆ ಬಿಜೆಪಿ ಯಾವುದೇ ಸ್ಥಾನ ನೀಡಬಾರದು’

-ಲಖನ್ ಜಾರಕಿಹೊಳಿ, ಕಾಂಗ್ರೆಸ್ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X