Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಸ್ತಿ ಹಂಚಿಕೆಯಾದ ಮೇಲೆ ಬೀದಿಗೆ ತಳ್ಳಿದ...

ಆಸ್ತಿ ಹಂಚಿಕೆಯಾದ ಮೇಲೆ ಬೀದಿಗೆ ತಳ್ಳಿದ ಮಕ್ಕಳು: ಕೋರ್ಟ್ ಮೆಟ್ಟಿಲೇರಿ ಜಮೀನು ವಾಪಸ್ ಪಡೆದ ಪೋಷಕರು

ವಾರ್ತಾಭಾರತಿವಾರ್ತಾಭಾರತಿ15 Dec 2019 7:56 PM IST
share
ಆಸ್ತಿ ಹಂಚಿಕೆಯಾದ ಮೇಲೆ ಬೀದಿಗೆ ತಳ್ಳಿದ ಮಕ್ಕಳು: ಕೋರ್ಟ್ ಮೆಟ್ಟಿಲೇರಿ ಜಮೀನು ವಾಪಸ್ ಪಡೆದ ಪೋಷಕರು

ಕೊಪ್ಪಳ, ಡಿ.15: ಮಕ್ಕಳಿಗೆ ಆಸ್ತಿ ಮಾಡಬೇಡಿ. ಮಕ್ಕಳನ್ನೇ ಆಸ್ತಿ ಮಾಡಿ ಎನ್ನುವ ಮಾತಿದೆ. ಆದರೆ, ಕೊಪ್ಪಳದಲ್ಲಿ ಪೋಷಕರೊಬ್ಬರು ಮಕ್ಕಳಿಗಾಗಿ ಆಸ್ತಿ ಮಾಡಿ ಬೀದಿಗೆ ಬಂದಿರುವ ಘಟನೆ ನಡೆದಿದೆ.

ಜಿಲ್ಲೆಯ ಗಂಗಾವತಿ ನಗರದ ಸತ್ಯನಾರಾಯಣಪೇಟೆಯ ನಿವಾಸಿ ಮನೋಹರ್ ದೇಸಾಯಿ ಅವರಿಗೆ 6 ಮಕ್ಕಳು. ಅದರಲ್ಲಿ 3 ಗಂಡು ಹಾಗೂ 3 ಜನ ಹೆಣ್ಣು ಮಕ್ಕಳಿದ್ದಾರೆ. ಕೃಷಿಯನ್ನೇ ನಂಬಿಕೊಂಡು ಬಂದ ಇವರು ತಮ್ಮ ಮಕ್ಕಳಾದ ರಾಘವೇಂದ್ರ, ಯೋಗೇಶ್, ವಿನಯ್ ದೇಸಾಯಿ ಹೆಸರಿಗೆ ತಮ್ಮ 3 ಎಕರೆ ಜಮೀನನ್ನು ರಿಜಿಸ್ಟ್ರಾರ್ ಮಾಡಿಕೊಟ್ಟಿದ್ದರು.

ಆದರೆ ಮಕ್ಕಳು, ಮುಪ್ಪಿನಲ್ಲಿರುವ ತಂದೆಯ ಜೀವನೋಪಾಯಕ್ಕೆ ಮತ್ತು ಚಿಕಿತ್ಸೆಗೂ ಹಣ ಕೊಡದೇ ಬೀದಿಗೆ ತಳ್ಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮನೋಹರ್ ದೇಸಾಯಿ, ಹಿರಿಯ ನಾಗರಿಕ ರಕ್ಷಣೆ ಕಾಯ್ದೆ ಅಡಿಯಲ್ಲಿ ನನಗೆ ನ್ಯಾಯ ಕೊಡಿಸಿ ಎಂದು ಕೊಪ್ಪಳ ಎಸಿ ಕೋರ್ಟ್ ಮೊರೆ ಹೋಗಿದ್ದರು. ಇದರಂತೆ, ಎಸಿ ಗೀತಾ ಅವರು ಮನೋಹರ್ ದೇಸಾಯಿ ಅವರ ಮಕ್ಕಳಾದ ರಾಘವೇಂದ್ರ, ಯೋಗೇಶ್ ಹಾಗೂ ವಿನಯ್ ದೇಸಾಯಿ ಹೆಸರಿನಲ್ಲಿರುವ 3 ಎಕರೆ ಆಸ್ತಿಯನ್ನು ಮರಳಿ ಮನೋಹರ್ ದೇಸಾಯಿ ಹೆಸರಿಗೆ ನೋಂದಾಯಿಸಲು ಖಡಕ್ ಆದೇಶ ನೀಡಿದ್ದಾರೆ. 

ಇಷ್ಟೇ ಅಲ್ಲದೇ ಇನ್ನೂ ಸಾಕಷ್ಟು ಭೂಮಿ ಮಕ್ಕಳ ಹೆಸರಿನಲ್ಲಿ ಇದ್ದು, ಅದನ್ನು ಅವರೇ ಅನುಭವಿಸಲಿ ಅಂತ ದೇಸಾಯಿ ಹೇಳಿದ್ದಾರೆ. ಇದರ ಜೊತೆಗೆ ಮಕ್ಕಳು ಜನ್ಮ ನೀಡಿದ ತಂದೆ ತಾಯಿಯನ್ನು ಆಸ್ತಿಗಾಗಿ ದೂರ ಮಾಡಬೇಡಿ. ಅವರಿಗಾಗಿ ಒಂದಿಷ್ಟು ಕಾಳಜಿ, ಪ್ರೀತಿ ತೋರಿಸಿ ಎಂದು ಹೇಳಿದರು. ಕೊಪ್ಪಳದಲ್ಲಿ ಇಂಥ 12 ಪ್ರಕರಣಗಳು ಎಸಿ ಕೋರ್ಟ್‌ನಲ್ಲಿದ್ದು, ಈಗಾಗಲೇ 6 ಕೇಸ್‌ಗಳನ್ನು ಇತ್ಯರ್ಥಪಡಿಸಲಾಗಿದೆ. ಉಳಿದ ಕೇಸ್‌ಗಳ ವಿಚಾರಣೆ ನಡೆಯುತ್ತಿದೆ. ಮಕ್ಕಳಿಂದ ಹಿರಿಯ ನಾಗರಿಕರಿಗೆ ತೊಂದರೆಯಾದರೆ ವೃದ್ಧಾಶ್ರಮ ಸೇರುವ ಮುನ್ನ ಒಮ್ಮೆ ಎಸಿ ಕೋರ್ಟ್ ಮೆಟ್ಟಿಲು ಏರಿ ನ್ಯಾಯ ಪಡೆಯಬಹುದು. ಅಲ್ಲದೆ, ಅಧಿಕಾರಿಗಳು ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಸಹ ಮಾಡಬೇಕಾಗಿದೆ ಎಂದು ಕೊಪ್ಪಳ ಎಸಿ ಗೀತಾ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X