Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಗಾಲ ಅನಿಲ ಉತ್ಪಾದನೆ ಕಡಿತ: ಹೆಚ್ಚು...

ಇಂಗಾಲ ಅನಿಲ ಉತ್ಪಾದನೆ ಕಡಿತ: ಹೆಚ್ಚು ಮಹತ್ವಾಕಾಂಕ್ಷಿ ಕ್ರಮಗಳಿಗೆ ದೇಶಗಳಿಗೆ ಕರೆ

ವಿಶ್ವಸಂಸ್ಥೆಯ ಪರಿಸರ ಶೃಂಗ ಸಮ್ಮೇಳನಕ್ಕೆ ತೆರೆ

ವಾರ್ತಾಭಾರತಿವಾರ್ತಾಭಾರತಿ15 Dec 2019 11:18 PM IST
share

ಮ್ಯಾಡ್ರಿಡ್ (ಸ್ಪೇನ್), ಡಿ. 15: 2015ರ ಪ್ಯಾರಿಸ್ ಪರಿಸರ ಒಪ್ಪಂದದ ಗುರಿಗಳನ್ನು ಈಡೇರಿಸಲು ಸಾಧ್ಯವಾಗುವಂತೆ, ಜಾಗತಿಕ ತಾಪಮಾನಕ್ಕೆ ಕಾರಣವಾಗುವ ಅನಿಲಗಳ ಹೊರಸೂಸುವಿಕೆಯ ಪ್ರಮಾಣವನ್ನು ಕಡಿತಗೊಳಿಸುವಲ್ಲಿ ಹೆಚ್ಚು ಮಹತ್ವಾಕಾಂಕ್ಷೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ದೇಶಗಳನ್ನು ಒತ್ತಾಯಿಸುವ ಆಂಶಿಕ ಒಪ್ಪಂದದೊಂದಿಗೆ ವಿಶ್ವಸಂಸ್ಥೆಯ ಪರಿಸರ ಸಮ್ಮೇಳನ ರವಿವಾರ ಕೊನೆಗೊಂಡಿದೆ.

ಸ್ಪೇನ್ ರಾಜಧಾನಿ ಮ್ಯಾಡ್ರಿಡ್‌ನಲ್ಲಿ ನಡೆದ ಸಿಒಪಿ25 ಪರಿಸರ ಸಮ್ಮೇಳನದಲ್ಲಿ ಮಾತುಕತೆ ಕೊನೆಗೊಳ್ಳಲು ವಿಧಿಸಲಾಗಿದ್ದ ಗಡುವು ಮುಗಿದು 40 ಗಂಟೆಗಳಿಗೂ ಹೆಚ್ಚಿನ ಅವಧಿ ಕಳೆದರೂ, ರವಿವಾರ ಮಧ್ಯಾಹ್ನದ ಹೊತ್ತಿಗೂ ಒಪ್ಪಂದವೊಂದಕ್ಕೆ ಬರಲು ದೇಶಗಳಿಗೆ ಸಾಧ್ಯವಾಗಲಿಲ್ಲ. ಹಾಗಾಗಿ, ಮುಂದಿನ ವರ್ಷದ ಸಮ್ಮೇಳನದಲ್ಲಿ ವಿವಾದವನ್ನು ಬಗೆಹರಿಸಲು ತೀರ್ಮಾನಿಸಲಾಯಿತು.

ಪ್ಯಾರಿಸ್ ಒಪ್ಪಂದದ ಗುರಿಗಳನ್ನು ತಲುಪುವುದಕ್ಕಾಗಿ ಸುಧಾರಿತ ಯೋಜನೆಗಳೊಂದಿಗೆ ಯಾವುದೇ ದೇಶವು ಈ ವರ್ಷದ ಪರಿಸರ ಸಮ್ಮೇಳನಕ್ಕೆ ಬಂದಿರಲಿಲ್ಲ. ಆದರೆ 2050ರ ವೇಳೆಗೆ ಶೂನ್ಯ ಮಾಲಿನ್ಯ ಹೊರಸೂಸುವಿಕೆಯನ್ನು ಸಾಧಿಸುವ ದೀರ್ಘಾವಧಿ ಗುರಿಗೆ ಐರೋಪ್ಯ ಒಕ್ಕೂಟವು ಅಂತಿಮವಾಗಿ ಒಪ್ಪಿಗೆ ನೀಡಿದೆ.

ಜಾಗತಿಕ ತಾಪಮಾನವು ಕೈಗಾರಿಕಾ ಪೂರ್ವ ಕಾಲಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಾಗುವುದನ್ನು ತಡೆಯಬೇಕು ಎಂದು 2015ರ ಪ್ಯಾರಿಸ ಪರಿಸರ ಒಪ್ಪಂದವು ಹೇಳುತ್ತದೆ.

ಭವಿಷ್ಯದ ಮಾಲಿನ್ಯ ಹೊರಸೂಸುವಿಕೆ ಪ್ರಮಾಣವನ್ನು ಕಡಿತಗೊಳಿಸುವ ಕಾರ್ಯಸೂಚಿಯೂ ಚರ್ಚೆಗೆ ಬರದಿರುವ ಭೀತಿಯೂ ಪರಿಸರವಾದಿಗಳನ್ನು ಒಂದು ಹಂತದಲ್ಲಿ ಕಾಡಿತು. ಆದರೆ, ಐರೋಪ್ಯ ಒಕ್ಕೂಟ ಮತ್ತು ಹಲವಾರು ಸಣ್ಣ ಅಭಿವೃದ್ಧಿಶೀಲ ದೇಶಗಳ ಒಕ್ಕೂಟವಾದ ‘ಅತಿ ಮಹತ್ವಾಕಾಂಕ್ಷೆಯ ಮೈತ್ರಿಕೂಟ’ವು, ಇಂಗಾಲ ಡೈ ಆಕ್ಸೈಡನ್ನು ಕಡಿತಗೊಳಿಸುವ ಪ್ರಬಲ ರಾಷ್ಟ್ರೀಯ ಯೋಜನೆಗಳನ್ನು ರೂಪಿಸುವಂತೆ ಎಲ್ಲ ಸರಕಾರಗಳಿಗೆ ಸೂಚಿಸುವ ನಿರ್ಣಯವೊಂದನ್ನು ಅಂಗೀಕರಿಸುವಂತೆ ಒತ್ತಾಯಿಸಿತು.

ಮೈತ್ರಿಕೂಟವು ಇದರಲ್ಲಿ ಭಾಗಶಃ ಯಶಸ್ವಿಯಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X