Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೌರತ್ವ ಕಾಯ್ದೆ ಜಾರಿಗೆ ಮುನ್ನ...

ಪೌರತ್ವ ಕಾಯ್ದೆ ಜಾರಿಗೆ ಮುನ್ನ ಭಾರತದಲ್ಲಿರುವ ತನ್ನ ಹಿಂದೂ, ಸಿಖ್ ನಾಗರಿಕರಿಗೆ ಪೌರತ್ವ ನೀಡಿದ್ದ ಅಫ್ಘಾನಿಸ್ತಾನ

ವಾರ್ತಾಭಾರತಿವಾರ್ತಾಭಾರತಿ16 Dec 2019 6:58 PM IST
share
ಪೌರತ್ವ ಕಾಯ್ದೆ ಜಾರಿಗೆ ಮುನ್ನ ಭಾರತದಲ್ಲಿರುವ ತನ್ನ ಹಿಂದೂ, ಸಿಖ್ ನಾಗರಿಕರಿಗೆ ಪೌರತ್ವ ನೀಡಿದ್ದ ಅಫ್ಘಾನಿಸ್ತಾನ

ಹೊಸದಿಲ್ಲಿ,ಡಿ.16: ಭಾರತದ ಸಂಸತ್ತು ಪೌರತ್ವ (ತಿದ್ದುಪಡಿ) ಮಸೂದೆ (ಸಿಎಬಿ)ಯನ್ನು ಅಂಗೀಕರಿಸುವ ಮೊದಲೇ ಅಫಘಾನಿಸ್ತಾನ ಸರಕಾರವು ಭಾರತದಲ್ಲಿ ವಾಸವಾಗಿರುವ ಹಿಂದು ಮತ್ತು ಸಿಖ್ ಸಮುದಾಯಗಳಿಗೆ ಸೇರಿದ ಅಫ್ಘಾನ್ ನಿರಾಶ್ರಿತರಿಗೆ ಪೌರತ್ವವನ್ನು ಮಂಜೂರು ಮಾಡಲು ಕ್ರಮಗಳನ್ನು ತೆಗೆದುಕೊಂಡಿತ್ತು. ನೂತನ ಕಾಯ್ದೆಯು ಧಾರ್ಮಿಕ ಕಿರುಕುಳದಿಂದಾಗಿ ಪಾಕಿಸ್ತಾನ,ಅಫಘಾನಿಸ್ತಾನ ಮತ್ತು ಬಾಂಗ್ಲಾದೇಶಗಳನ್ನು ತೊರೆದು ಬಂದಿರುವ ಅಲ್ಪಸಂಖ್ಯಾತ ನಿರಾಶ್ರಿತರಿಗೆ ಭಾರತದ ಪೌರತ್ವವನ್ನು ಒದಗಿಸುತ್ತದೆ.

ಹಿಂದು ಮತ್ತು ಸಿಖ್ ಸಮುದಾಯಗಳ ‘ವಿಶೇಷ ಸ್ಥಾನಮಾನ ’ವನ್ನು ಗುರುತಿಸುವ ತನ್ನ ಯೋಜನೆಯ ಅಂಗವಾಗಿ ಅಫಘಾನಿಸ್ತಾನ ಸರಕಾರವು ಭಾರತದಲ್ಲಿ ವಾಸವಾಗಿರುವ 3,500 ಅಫಘಾನ್ ಸಿಖ್ ಮತ್ತು ಹಿಂದು ನಿರಾಶ್ರಿತರಿಗೆ ‘ ರಾಷ್ಟ್ರೀಯ ಗುರುತು ಚೀಟಿ ’ಅಥವಾ ‘ತಝ್ಕೀರಾ’ಗಳನ್ನು ವಿತರಿಸಿದೆ ಎಂದು ಅಫಘಾನಿಸ್ತಾನದ ರಾಯಭಾರಿ ತಾಹಿರ್ ಖಾದಿರಿ ಅವರು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಕಳೆದ ತಿಂಗಳು ಭಾರತಕ್ಕೆ ಆಗಮಿಸಿದ್ದ ಅಫಘಾನಿಸ್ತಾನದ ವಿಶೇಷ ನಿಯೋಗವೊಂದು ನಿರಾಶ್ರಿತರಿಗೆ ಗುರುತು ಚೀಟಿಗಳನ್ನು ವಿತರಿಸಿತ್ತು.

‘ ಅಧ್ಯಕ್ಷ ಅಶ್ರಫ್ ಘನಿ ಅವರ ವಿಶೇಷ ಆದೇಶದ ಮೇರೆಗೆ ಈ ಪ್ರಕ್ರಿಯೆಯನ್ನು ನಡೆಸಲಾಗಿದೆ. ನಮ್ಮ ಹಲವಾರು ಹಿಂದು ಮತ್ತು ಸಿಖ್ ಸೋದರ-ಸೋದರಿಯರು ಹಲವಾರು ವರ್ಷಗಳಿಂದ ಭಾರತದಲ್ಲಿ ವಾಸವಿದ್ದಾರೆ ಮತ್ತು ಕೆಲವರಿಗೆ ಇಲ್ಲಿ ಮಕ್ಕಳೂ ಹುಟ್ಟಿದ್ದಾರೆ. ಅವರಿಗೆ ಪಾಸ್ ಪೋರ್ಟ್ ಮತ್ತು ಇತರ ಉದ್ದೇಶಗಳಿಗಾಗಿ ಈ ಗುರುತು ಚೀಟಿಗಳು ಅಗತ್ಯವಾಗಿವೆ ’ಎಂದು ಖಾದಿರಿ ತಿಳಿಸಿದರು.

ಅಫ್ಘಾನಿಸ್ತಾನದಲ್ಲಿ ಜನಿಸಿರುವ ಮತ್ತು ಭಾರತೀಯ ಪಾಸ್‌ ಪೋರ್ಟ್‌ಗಳನ್ನು ಹೊಂದಿರುವ ಅಫ್ಘಾನ್ ಪ್ರಜೆಗಳಿಗೆ ಟ್ರಾವೆಲ್ ಕಾರ್ಡ್‌ಗಳನ್ನೂ ವಿತರಿಸಲಾಗುವುದು. ಈ ಕಾರ್ಡ್‌ನ್ನು ಬಳಸಿ ವೀಸಾದ ಅಗತ್ಯವಿಲ್ಲದೆ ಅವರು ಭಾರತದಿಂದ ಅಫ್ಘಾನಿಸ್ತಾನಕ್ಕೆ ಎಷ್ಟು ಬಾರಿ ಬೇಕಾದರೂ ಭೇಟಿ ನಿಡಬಹುದು. ಭಾರತದಲ್ಲಿ ವಾಸವಿದ್ದು ಅಫಘಾನಿಸ್ತಾನದಲ್ಲ್ಲಿ ಆಸ್ತಿಗಳನ್ನು ಹೊಂದಿರುವ ನಿರಾಶ್ರಿತರಿಗೆ ಅವುಗಳನ್ನು ಮಾರಾಟ ಮಾಡಲು ಸಾಧ್ಯವಿರಲಿಲ್ಲ. ಇದೀಗ ಅದಕ್ಕೆ ಅನುಕೂಲ ಕಲ್ಪಿಸಲು ಅಫ್ಘಾನಿಸ್ಥಾನ ಸರಕಾರವು ನಿರ್ಧರಿಸಿದೆ ಎಂದೂ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X