Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಟ್ರೋ ಸೇವೆ ವಿಸ್ತರಿಸಿದ ಬೆನ್ನಲ್ಲೇ...

ಮೆಟ್ರೋ ಸೇವೆ ವಿಸ್ತರಿಸಿದ ಬೆನ್ನಲ್ಲೇ ಮಧ್ಯರಾತ್ರಿವರೆಗೂ ಬಸ್ ಸೇವೆ ವಿಸ್ತರಣೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Dec 2019 11:09 PM IST
share
ಮೆಟ್ರೋ ಸೇವೆ ವಿಸ್ತರಿಸಿದ ಬೆನ್ನಲ್ಲೇ ಮಧ್ಯರಾತ್ರಿವರೆಗೂ ಬಸ್ ಸೇವೆ ವಿಸ್ತರಣೆಗೆ ಆಗ್ರಹ

ಬೆಂಗಳೂರು, ಡಿ.16: ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಿದ ಬೆನ್ನಲ್ಲೇ ಮಧ್ಯರಾತ್ರಿವರೆಗೂ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಕೇಳಿಬಂದಿದೆ.

ರಾತ್ರಿ ಮೆಟ್ರೊ ಬಳಸುವವರು ಸುರಕ್ಷಿತವಾಗಿ ಮನೆ ತಲುಪಲು ಬಸ್ ಸೇವೆಯೂ ಅಗತ್ಯವಾಗಿದೆ. ಬಿಎಂಟಿಸಿಯಿಂದ ಪ್ರತಿ ಮೆಟ್ರೊ ನಿಲ್ದಾಣಗಳ ಬಳಿ ಫೀಡರ್ ಸೇವೆ ಒದಗಿಸುವುದು ಅಗತ್ಯ. ಕೇವಲ ಮೆಟ್ರೊ ರೈಲು ವಿಸ್ತರಣೆ ಮಾಡಿದರೆ ಸಾಲದು ನಗರದ ಎಲ್ಲ ಭಾಗಕ್ಕೂ ಮೆಟ್ರೊ ಇಲ್ಲ. ಹೀಗಾಗಿ ಮೆಜೆಸ್ಟಿಕ್ ಹಾಗೂ ನಗರದ ಪ್ರಮುಖ ಭಾಗಗಳಿಂದ ಮಧ್ಯರಾತ್ರಿ 1 ಗಂಟೆವರೆಗೂ ಬಿಎಂಟಿಸಿ ಬಸ್ ಸೇವೆ ನೀಡಬೇಕು ಎಂದು ಸಂಘ ಸಂಸ್ಥೆಗಳು ಒತ್ತಾಯಸಿವೆ.

ರಾತ್ರಿ ವೇಳೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಮಿನಿ ಬಸ್‌ಗಳನ್ನು ಕಾರ್ಯಾಚರಣೆ ಮಾಡುವುದು ಉತ್ತಮ ಎಂಬುದು ಪ್ರಯಾಣಿಕರ ಬೇಡಿಕೆಯೂ ಆಗಿದೆ. ರಾತ್ರಿ ಮೀಟರ್‌ಗಿಂತ ಒಂದೂವರೆ ಪಟ್ಟು ಹೆಚ್ಚು ಹಣ ಕೇಳಲು ಅವಕಾಶವಿದ್ದರೂ ಅದ್ಕಕಿಂತ ಹೆಚ್ಚು ಹಣಕ್ಕೆ ಚಾಲಕರು ಬೇಡಿಕೆ ಇಡುತ್ತಾರೆ. ಮೆಟ್ರೊದ ರಾತ್ರಿ ಸೇವೆಯಿಂದ ಪ್ರಯಾಣಿಕರ ಪರದಾಟ ಕಡಿಮೆಯಾಗುವ ಸಾಧ್ಯತೆ ಇದೆ. ರಾತ್ರಿ ಪ್ರಯಾಣ ಮಾಡುವವರಿಗೆ ಅದರಲ್ಲೂ ಮಹಿಳೆಯರಿಗೆ ಮೆಟ್ರೊ ಸಿಬ್ಬಂದಿಯೇ ರಕ್ಷಣೆ ನೀಡಲಿದ್ದಾರೆ. ರಾತ್ರಿ 10 ಗಂಟೆ ಬಳಿಕ ರೈಲಿನೊಳಗೆ ಪ್ರಯಾಣಿಕರ ಜತೆಗೆ ಭದ್ರತಾ ಸಿಬ್ಬಂದಿ ಪ್ರಯಾಣಿಸುವ ವ್ಯವಸ್ಥೆಯನ್ನು ಈಗಾಗಲೇ ಜಾರಿ ಮಾಡಲಾಗಿದೆ. ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನಹಳ್ಳಿ ಮಾರ್ಗಕ್ಕೆ 358 ಸಿಬ್ಬಂದಿ ನಿಯೋಜನೆಗೆ ಟೆಂಡರ್ ಆಹ್ವಾನಿಸಲಾಗಿದೆ. ಇದರಲ್ಲಿ ನಿಲ್ದಾಣ, ಪ್ಲಾಟ್ ಫಾರ್ಮ್ ಜತೆಗೆ ರೈಲಿನೊಳಗೂ ಭದ್ರತೆ ನೀಡುವ ಕೆಲಸದ ಬಗ್ಗೆ ಪ್ರಸ್ತಾಪಿಸಲಾಗಿದೆ. 

ಸಂಘ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ಪ್ರಯಾಣಿಕರ ವೇದಿಕೆಯ ಒತ್ತಾಯ ರಾತ್ರಿ ಪಾಳಿಯಲ್ಲಿ ದುಡಿಯುವ ಕಾರ್ಮಿಕರಿಗಾಗಿ ಮಧ್ಯರಾತ್ರಿವರೆಗೆ ಸೇವೆ ನೀಡಬೇಕೆಂಬ ಬೇಡಿಕೆ ಹಿಂದಿನಿಂದಲೂ ಇತ್ತು. ಇದಕ್ಕೆ ಬಿಎಂಆರ್‌ಸಿಎಲ್ ಮನ್ನಣೆ ನೀಡಿರುವುದು ಸರಿ. ಅದೇ ರೀತಿ ಬಿಎಂಟಿಸಿಯೂ ಬಸ್ ಸೇವೆ ನೀಡುವ ಅಗತ್ಯವಿದೆ.

-ಸಿ.ಆರ್.ಜನಾರ್ದನ, ಎಫ್‌ಕೆಸಿಸಿಐ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X