Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾಡ್ರಿಡ್ ಪರಿಸರ ಸಮ್ಮೇಳನದ...

ಮ್ಯಾಡ್ರಿಡ್ ಪರಿಸರ ಸಮ್ಮೇಳನದ ವೈಫಲ್ಯಕ್ಕೆ ಗುಟೆರಸ್ ವಿಷಾದ

ನಿರ್ಣಾಯಕ ಕ್ರಮಕ್ಕಾಗಿ ನಮಗಿದ್ದ ಅವಕಾಶ ವ್ಯರ್ಥವಾಯಿತು ಎಂದು ವಿಶ್ವಸಂಸ್ಥೆ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ16 Dec 2019 11:12 PM IST
share
ಮ್ಯಾಡ್ರಿಡ್ ಪರಿಸರ ಸಮ್ಮೇಳನದ ವೈಫಲ್ಯಕ್ಕೆ ಗುಟೆರಸ್ ವಿಷಾದ

ಮ್ಯಾಡ್ರಿಡ್ (ಸ್ಪೇನ್), ಡಿ. 16: ಜಾಗತಿಕ ತಾಪಮಾನದ ವಿರುದ್ಧ ವ್ಯವಹರಿಸಲು ಸ್ಪೇನ್ ರಾಜಧಾನಿ ಮ್ಯಾಡ್ರಿಡ್‌ ನಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಸಮ್ಮೇಳನ ‘ಸಿಒಪಿ25’ ಯಾವುದೇ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಲು ವಿಫಲವಾಗಿರುವುದಕ್ಕೆ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ವಿಷಾದ ವ್ಯಕ್ತಪಡಿಸಿದ್ದಾರೆ. ‘‘ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ನಮಗಿದ್ದ ಅವಕಾಶವೊಂದು ವ್ಯರ್ಥವಾಯಿತು’’ ಎಂದು ಅವರು ಹೇಳಿದ್ದಾರೆ.

ಸುಮಾರು 15 ದಿನಗಳ ಕಾಲ ನಡೆದ ವಿಶ್ವಸಂಸ್ಥೆಯ ಪರಿಸರ ಸಮ್ಮೇಳನವು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದೆ, ಜಾಗತಿಕ ತಾಪಮಾನವನ್ನು ಕಡಿಮೆಗೊಳಿಸುವಲ್ಲಿ ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳುವಂತೆ ದೇಶಗಳಿಗೆ ಕರೆ ನೀಡುವುದರೊಂದಿಗೆ ರವಿವಾರ ಸಂಪನ್ನಗೊಂಡಿದೆ.

 ‘‘ಸಿಒಪಿ25ರ ಫಲಿತಾಂದಿಂದ ನನಗೆ ನಿರಾಶೆಯಾಗಿದೆ’’ ಎಂದು ಗುಟೆರಸ್ ಹೇಳಿದರು. ‘‘ಪರಿಸರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಹೆಚ್ಚಿನ ಬದ್ಧತೆ, ಹೊಂದಾಣಿಕೆ ಮತ್ತು ಹಣಕಾಸು ಪೂರೈಕೆಯನ್ನು ಖಾತರಿಪಡಿಸಲು ಲಭ್ಯವಿದ್ಧ ಉತ್ತಮ ಅವಕಾಶವೊಂದನ್ನು ಅಂತರ್‌ರಾಷ್ಟ್ರೀಯ ಸಮುದಾಯವು ಕೈಚೆಲ್ಲಿತು’’ ಎಂದು ಅವರು ಹೇಳಿದರು.

ಪ್ರಸಕ್ತ ಮಾಲಿನ್ಯ ಪ್ರಮಾಣ ಹಾಗೂ 2015ರ ಪ್ಯಾರಿಸ್ ಪರಿಸರ ಒಪ್ಪಂದದಲ್ಲಿ ನಿಗದಿಪಡಿಸಲಾಗಿರುವ ಹೊಗೆ ಹೊರಸೂಸುವಿಕೆ ಪ್ರಮಾಣದ ನಡುವಿನ ಬೃಹತ್ ಅಂತರವನ್ನು ಮುಚ್ಚಲು ನೂತನ ಬದ್ಧತೆಗಳನ್ನು ಅಳವಡಿಸಿಕೊಳ್ಳುವುದು ತುರ್ತು ಅಗತ್ಯವಾಗಿದೆ ಎಂದು ಶೃಂಗ ಸಮ್ಮೇಳನದ ಅಂತಿಮ ಘೋಷಣೆ ತಿಳಿಸಿದೆ.

ಪರಿಸರ ಹೋರಾಟಗಾರರಿಗೆ ಆಘಾತ

ಪರಿಸರ ಪರ ಚಳವಳಿಗಳು, ನಿರಾಕರಿಸಲಾಗದ ವೈಜ್ಞಾನಿಕ ಆಧಾರಗಳು ಹಾಗೂ ವಿನಾಶಕಾರಿ ಚಂಡಮಾರುತಗಳು ಮತ್ತು ಕಾಡ್ಗಿಚ್ಚುಗಳು ಜಾಗತಿಕ ತಾಪಮಾನವನ್ನು ತಗ್ಗಿಸಬೇಕಾದ ಅನಿವಾರ್ಯತೆಯನ್ನು ಸರಕಾರಗಳಿಗೆ ಉಂಟುಮಾಡುತ್ತದೆ ಎಂಬುದಾಗಿ ಪರಿಸರ ಹೋರಾಟಗಾರರು ಭಾವಿಸಿದ್ದರು.

ಹಾಗಾಗಿ, ಮ್ಯಾಡ್ರಿಡ್‌ನಲ್ಲಿ ನಡೆದ ಪರಿಸರ ಸಮ್ಮೇಳನದಲ್ಲಿ, ತಾಪಮಾನ ತಗ್ಗಿಸುವ ತಮ್ಮ ಪ್ರಯತ್ನಗಳನ್ನು ದ್ವಿಗುಣಗೊಳಿಸುವಂತೆ ಸರಕಾರಿ ನಾಯಕರನ್ನು ಈ ಅಂಶಗಳು ಪ್ರೇರೇಪಿಸುತ್ತವೆ ಎಂದು ಜನರು ನಿರೀಕ್ಷಿಸಿದ್ದರು.

ಆದರೆ, ಪರಿಸರ ಹೋರಾಟಗಾರರ ಈ ಎಲ್ಲ ನಿರೀಕ್ಷೆಗಳು ಹುಸಿಯಾಗಿವೆ. ಇದರಿಂದಾಗಿ ಹಲವು ಹಿರಿಯ ಪರಿಸರ ಹೋರಾಟಗಾರರು ಆಘಾತಗೊಂಡಿದ್ದಾರೆ.

‘‘ಜಗತ್ತಿನ ಅತಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪಾದಿಸುವ ದೇಶಗಳು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಹಾಗೂ ಇಂಗಾಲಾನಿಲ ಕಡಿತಕ್ಕಾಗಿನ ತಮ್ಮ ಬದ್ಧತೆಯನ್ನು ಹೆಚ್ಚಿಸುವಂತೆ ನೀಡಲಾಗುತ್ತಿರುವ ಕರೆಗಳನ್ನು ಅವುಗಳು ವಿರೋಧಿಸುತ್ತಿವೆ’’ ಎಂದು ಯೂನಿಯನ್ ಆಫ್ ಕನ್ಸರ್ನ್ಡ್ ಸಯಂಟಿಸ್ಟ್ಸ್‌ನಲ್ಲಿ ತಂತ್ರಗಾರಿಕೆ ಮತ್ತು ನೀತಿ ನಿರ್ದೇಶಕರಾಗಿರುವ ಆ್ಯಲ್ಡನ್ ಮಯರ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X