Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಸವಣ್ಣ ಪ್ರತಿಮೆಯ ಕಾಮಗಾರಿ ಪರಿಶೀಲಿಸಿದ...

ಬಸವಣ್ಣ ಪ್ರತಿಮೆಯ ಕಾಮಗಾರಿ ಪರಿಶೀಲಿಸಿದ ಮೇಯರ್: ಮಾರ್ಚ್ ಅಂತ್ಯಕ್ಕೆ ಕಾಮಗಾರಿ ಪೂರ್ಣ- ಭರವಸೆ

ವಾರ್ತಾಭಾರತಿವಾರ್ತಾಭಾರತಿ16 Dec 2019 11:21 PM IST
share
ಬಸವಣ್ಣ ಪ್ರತಿಮೆಯ ಕಾಮಗಾರಿ ಪರಿಶೀಲಿಸಿದ ಮೇಯರ್: ಮಾರ್ಚ್ ಅಂತ್ಯಕ್ಕೆ ಕಾಮಗಾರಿ ಪೂರ್ಣ- ಭರವಸೆ

ಬೆಂಗಳೂರು, ಡಿ.15: ನಗರದ ಚಾಲುಕ್ಯ ವೃತ್ತದಲ್ಲಿರುವ ಅಶ್ವಾರೂಢ ಬಸವಣ್ಣನವರ ಪ್ರತಿಮೆಯ ಸುತ್ತಲು ಅನುಭವ ಮಂಟಪ ಪರಿಕಲ್ಪನೆಯಡಿ ಮರು ವಿನ್ಯಾಸಗೊಳಿಸಲಾಗುತ್ತಿರುವ ಕಾಮಗಾರಿಯನ್ನು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಸೋಮವಾರ ಪರಿಶೀಲನೆ ನಡೆಸಿದರು.

ಈ ಯೋಜನೆಗೆ ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರ ಅವಧಿಯಲ್ಲಿ ಅನುಮೋದನೆ ನೀಡಲಾಗಿತ್ತು. ಯೋಜನೆಯನ್ನು ಉದ್ದೇಶಪೂರ್ವಕವಾಗಿ ಮೇಯರ್ ಗೌತಮ್‌ ಕುಮಾರ್ ಮುಂದೂಡುತ್ತಿದ್ದಾರೆ. ಕಾಮಗಾರಿ ಬಹುತೇಕ ಪೂರ್ಣಗೊಂಡಿತ್ತು. ಆದರೆ, ಕಳೆದ ಮೂರು ತಿಂಗಳಿಂದ ಇದರಲ್ಲಿ ಯಾವುದೇ ಪ್ರಗತಿ ಸಾಧಿಸಿಲ್ಲ ಎಂದು ಆರೋಪಿಸಿದ್ದರು. ಇದು ವಿವಾದ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮೇಯರ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಕಾಮಗಾರಿ ಪ್ರಗತಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಿಕೆ ಮೇಯರ್ ಗೌತಮ್ ಕುಮಾರ್, ಮಾರ್ಚ್ ಅಂತ್ಯದೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.

ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಚಾಲುಕ್ಯ ವೃತ್ತದಲ್ಲಿರುವ ಅಶ್ವಾರೂಢ ಬಸವಣ್ಣನವರ ಪ್ರತಿಮೆಯ ಸುತ್ತಲು ಪಾಲಿಕೆ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ ಪರಿಕಲ್ಪನೆಯಡಿ ಮರು ವಿನ್ಯಾಸಗೊಳಿಸಲಾಗುತ್ತಿದೆ. ಬಸವಣ್ಣನವರ ಕಂಚಿನ ಪ್ರತಿಮೆಯ ಸುತ್ತ 12ನೇ ಶತಮಾನದ ವಚನ ಸಾಹಿತ್ಯ ಮತ್ತು ಅನುಭವ ಮಂಟಪ ಪರಿಕಲ್ಪನೆಯಡಿ ಮರುವಿನ್ಯಾಸ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಪ್ರತಿಮೆ ಹಿಂಭಾಗದಲ್ಲಿ ಅರ್ಧ ಚಂದ್ರಾಕೃತಿಯ ಬೃಹತ್ ಗೋಡೆ ನಿರ್ಮಾಣದ ಕಾಮಗಾರಿ ಪೂರ್ಣಗೊಂಡಿದ್ದು, ವಚನಗಳ ಕೆತ್ತನೆ, ಅಲಂಕಾರಿಕ ವಿದ್ಯುತ್ ದೀಪ, ಕಿರು ಉದ್ಯಾನದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.

ಚಾಲುಕ್ಯ ವೃತ್ತದಲ್ಲಿ ಚಾಲುಕ್ಯರ ಕಾಲದ ಇತಿಹಾಸವನ್ನು ಪರಿಚಯಿಸುವ ನಿಟ್ಟಿನಲ್ಲಿ ವಾಸ್ತುಶಿಲ್ಪಿಗಳಿಗೆ ವಾರದೊಳಗಾಗಿ ವೃತ್ತದ ವಿನ್ಯಾಸ ಸಿದ್ಧಪಡಿಸುವಂತೆ ತಿಳಿಸಲಾಗಿದೆ. ವಾಸ್ತು ಶಿಲ್ಪಿಗಳು ವಿನ್ಯಾಸ ನೀಡಿದ ಮೇಲೆ ಅದಕ್ಕೆ ಅನುಗುಣವಾಗಿ ಅನುದಾನ ಮೀಸಲಿಡಲಾಗುವುದು ಎಂದು ತಿಳಿಸಿದರು.

ಈ ವೇಳೆ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಪೂರ್ವ ವಲಯ ಜಂಟಿ ಆಯುಕ್ತರಾದ ಪಲ್ಲವಿ, ಅಧೀಕ್ಷಕ ಮುಖ್ಯ ಇಂಜಿನಿಯರ್ ಬಸವರಾಜ್ ಕಬಾಡೆ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X