Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಕ್ರೋ ಫೈನಾನ್ಸ್ ಗಳ ಕಿರುಕುಳದಿಂದ ಕೂಲಿ...

ಮೈಕ್ರೋ ಫೈನಾನ್ಸ್ ಗಳ ಕಿರುಕುಳದಿಂದ ಕೂಲಿ ಕಾರ್ಮಿಕರನ್ನು ರಕ್ಷಿಸಿ: ಸಿಪಿಐ ನಾಯಕಿ ಜ್ಯೋತಿ ಸುಂದರೇಶ್

ವಾರ್ತಾಭಾರತಿವಾರ್ತಾಭಾರತಿ16 Dec 2019 11:33 PM IST
share
ಮೈಕ್ರೋ ಫೈನಾನ್ಸ್ ಗಳ ಕಿರುಕುಳದಿಂದ ಕೂಲಿ ಕಾರ್ಮಿಕರನ್ನು ರಕ್ಷಿಸಿ: ಸಿಪಿಐ ನಾಯಕಿ ಜ್ಯೋತಿ ಸುಂದರೇಶ್

ಕಳಸ, ಡಿ.16: ಬಡತನದಲ್ಲಿರುವ ಹೆಣ್ಮಕ್ಕಳ ಅಜ್ಞಾನವನ್ನು ದುರ್ಬಳಕೆ ಮಾಡಿಕೊಂಡ ಮೈಕ್ರೋ ಫೈನಾನ್ಸ್ ಗಳು ಅಧಿಕ ಬಡ್ಡಿಯನ್ನು ನಿಗದಿ ಮಾಡಿ ಮೋಸ ಕೂಲಿ ಕಾರ್ಮಿಕರನ್ನು ಶೋಷಣೆ ಮಾಡುತ್ತಿವೆ. ಇದರಿಂದಾಗಿ ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಜನರ ಬದುಕು ಮುಳುಗಿ ಹೋಗುತ್ತಿದೆ. ಆದ್ದರಿಂದ ಸರಕಾರವೇ ಮುಂದೆ ನಿಂತು ಇಂತಹ ಮೈಕ್ರೋ ಫೈನಾನ್ಸ್‍ಗಳ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಬೇಕು ಎಂದು ಭಾರತೀಯ ಕಮ್ಯೂನಿಷ್ಟ್ ಪಕ್ಷದ ರಾಜ್ಯ ಮಂಡಳಿ ಸದಸ್ಯೆ ಜ್ಯೋತಿ ಹೇಳಿದರು.

ಸೋಮವಾರ ಪಟ್ಟಣದ ಗಿರಿಜಾಂಬ ದೇವಸ್ಥಾನದ ಮುಂಬಾಗದ ಸಭಾಂಗಣದಲ್ಲಿ ಮಹಿಳಾ ದೌರ್ಜನ್ಯ ವಿರೋಧಿ ಹೋರಾಟ ಸಮಿತಿಯಿಂದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ನಡೆದ ಪ್ರತಿಭಟನೆ ಮತ್ತು ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹೆಣ್ಮಕ್ಕಳನ್ನು ಅತ್ಯಾಚಾರ, ಭೋಗದ ಸರಕುಗಳನ್ನಾಗಿ ಮಾಡಲಾಗುತ್ತಿದೆ. ಅತ್ಯಾಚಾರ ಮಾಡಿದವರನ್ನು ಗುಂಡಿಕ್ಕಿ ಕೊಂದರೆ ಅತ್ಯಾಚಾರ ನಿಲ್ಲುವುದಿಲ್ಲ. ಇದಕ್ಕೂ ಮೊದಲು ರಾಜಕಾರಣಿಗಳು ಮಾಡುತ್ತಿರುವ ನೀಚ ಕೃತ್ಯಗಳು ನಿಲ್ಲಬೇಕು. ಮಹಿಳೆಯರಿಗೆ ಉದ್ಯೋಗ, ಸ್ವಾತಂತ್ರ್ಯ ,ಸುರಕ್ಷತೆ, ಸ್ವಾವಲಂಬನೆ ನೀಡಿ ಎಂದು ಅವರು ಆಗ್ರಹಿಸಿದರು.

ರಾಷ್ಟ್ರೀಕೃತ  ಬ್ಯಾಂಕುಗಳು ಕಳ್ಳರಿಗೆ ಕೋಟ್ಯಂತರ ರೂ. ಸಾಲಗಳನ್ನು ನೀಡುತ್ತಾರೆ. ಆದರೆ ಬಡವ ತನ್ನ ಬದುಕನ್ನು ಕಟ್ಟಿಕೊಳ್ಳಲು ಸಾಲವನ್ನು ನೀಡಲು ಹಿಂದೇಟು ಹಾಕುತ್ತವೆ. ಇದನ್ನೆ ಬಂಡವಾಳವನ್ನಾಗಿಸಿಕೊಂಡು ಮೈಕ್ರೋ ಫೈನಾನ್ಸ್ ದಾಖಲಾತಿಗಳನ್ನು ಪಡೆಯದೆ ಸುಲಭವಾಗಿ ಅಧಿಕ ಬಡ್ಡಿ ದರ ವಿಧಿಸಿ ಸಾಲ ಕೊಡುತ್ತಿವೆ. ನಂತರ ಈ ಬಡವರ, ಕೂಲಿ ಕಾರ್ಮಿಕರ ಪ್ರಾಣವನ್ನು ಸಂಸ್ಥೆಗಳು ಹಿಂಡುತ್ತಿವೆ. ಗೂಂಡಾಗಳನ್ನು ಮಹಿಳೆಯರ ಮನೆ ಬಾಗಿಲಿಗೆ ಕಳುಹಿಸಿ ದೌರ್ಜನ್ಯ ಎಸಗುತ್ತಾರೆ. ರಾತ್ರಿ ವೇಳೆ ಮಹಿಳೆಯರ ಮನೆಗಳಿಗೆ ನುಗ್ಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಈ ಪೈನಾನ್ಸ್ ಗಳು ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‍ಗಳಿಂದ ಕಡಿಮೆ ಬಡ್ಡಿಗೆ ಸಾಲ ತಂದು ಬಡವರಿಗೆ ಹೆಚ್ಚಿನ ಬಡ್ಡಿದರದಲ್ಲಿ ಸಾಲ ನೀಡುತ್ತಿವೆ. ಅಲ್ಲದೇ ಯಾವುದೇ ಜಾಮೀನು ಇಲ್ಲದೆ ಸಾಲ ನೀಡುತ್ತಾ ಅಕ್ರಮವಾಗಿ ಬಡ್ಡಿ ದಂಧೆ ಮಾಡುತ್ತಿವೆ ಎಂದರು.

ಭಾರತೀಯ ಕಮ್ಯೂನಿಷ್ಟ್ ಪಕ್ಷದ ಮುಖಂಡ ಲಕ್ಷ್ಮಣಾಚಾರ್ ಮಾತನಾಡಿ, ಕಿರು ಹಣಕಾಸು ಸಂಸ್ಥೆಗಳು ಬಡ ಮಹಿಳೆಯರ ಆರ್ಥಿಕ ಸಂಕಷ್ಟಗಳನ್ನೇ ಬಂಡವಾಳ ಮಾಡಿಕೊಳ್ಳುತ್ತಿವೆ. ಭಾರೀ ಬಡ್ಡಿಯಿಂದಾಗಿ ಈ ಸಂಸ್ಥೆಗಳಿಗೆ ಭಾರೀ ಲಾಭವಾಗುತ್ತಿರುವುದರಿಂದ ಸರಕಾರದ ಕಾನೂನುಗಳನ್ನು ಗಾಳಿಗೆ ತೂರಿ ಇಂತಹ ಕಿರು ಹಣಕಾಸು ಸಂಸ್ಥೆಗಳು ರಾಜ್ಯದಲ್ಲಿ ನಾಯಿಕೊಡೆಗಳಂತೆ ಹುಟ್ಟಿಕೊಂಡಿವೆ. ಈ ಪೈಕಿ ನಕಲಿ ಸಂಸ್ಥೆಗಳು ಸಾಲ ನೀಡುತ್ತಾ ಬಡ್ಡಿ ದಂಧೆ ನಡೆಸುತ್ತಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಈ ಸಂಸ್ಥೆಗಳು ಬೇರೆ ಬೇರೆ ಹೆಸರುಗಳಲ್ಲಿ ಗ್ರಾಮೀಣ ಭಾಗದ ಬಡ ಮಹಿಳೆಯರನ್ನು ಸಂಘಟಿಸಿ ಸಾಲದ ಮೇಲೆ ಸಾಲ ನೀಡುತ್ತಾ ಹೆಚ್ಚು ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಮಹಿಳೆಯರು ಬಡ್ಡಿ ಕಟ್ಟಿ ಕಟ್ಟಿ ಸಾಲದ ಕೂಪದಿಂದ ಹೊರ ಬರಲಾಗದೇ ಪರಿತಪಿಸುತ್ತಿದ್ದಾರೆ. ಸಕಾಲದಲ್ಲಿ ಸಾಲ ಬಡ್ಡಿ ಕಟ್ಟದ ಮಹಿಳೆಯರ ಮನೆಗಳಿಗೆ ವಸೂಲಿಗೆ ಬರುವ ಸಂಸ್ಥೆಗಳ ಸಿಬ್ಬಂದಿ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಬೆದರಿಸುವುದು, ಬ್ಲಾಕ್‍ಮೇಲ್ ಮಾಡುವುದು, ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ಗಲಾಟೆ ಮಾಡಿ ದೌರ್ಜನ್ಯ ಎಸಗುತ್ತಿದ್ದಾರೆ. ಇವರ ದೌರ್ಜನ್ಯಗಳನ್ನು ಎದುರಿಸಲಾಗದೇ ಮಹಿಳೆಯರು ಮಾನಸಿಕವಾಗಿ ಕೊರಗುವಂತಾಗಿದೆ ಎಂದು ಅವರು ಸಭೆಯಲ್ಲಿ ಆರೋಪಿಸಿದರು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಈ ದೌರ್ಜನ್ಯಗಳ ವಿರುದ್ಧ ಮಹಿಳೆಯರು ಸಂಘಟಿತರಾಗುತ್ತಿರುವುದು ಉತ್ತಮ ಬೆಳವಣಿಗೆ. ಇಂತಹ ದೌರ್ಜನ್ಯ ಎಸಗುವ ಕಿರು ಹಣಕಾಸು ಸಂಸ್ಥೆಗಳನ್ನು ರಾಜ್ಯದಿಂದಲೇ ಓಡಿಸಬೇಕಿದ್ದು, ಸಂಘಟಿತ ಹೋರಾಟ ಮಾಡುವ ಮೂಲಕ ಸರಕಾರದ ಗಮನಸೆಳೆಯಬೇಕಿದೆ ಎಂದ ಅವರು, ಜಿಲ್ಲೆಯಲ್ಲಿ ಈ ಬಾರೀ ಅತಿವೃಷ್ಟಿಯಿಂದಾಗಿ ದುಡಿಯುವ ಕೂಲಿ ಕಾರ್ಮಿಕ ವರ್ಗದ ಮಹಿಳೆಯರಿಗೆ ಕೆಲಸ ಸಿಗುತ್ತಿಲ್ಲ. ಇದರಿಂದಾಗಿ ಸಾಲ ಮರುಪಾವತಿ ಮಾಡುತ್ತಿಲ್ಲ. ರಾಜ್ಯ ಸರಕಾರ ಇದನ್ನು ಪರಿಶೀಲಿಸಿ ಕಿರುಹಣ ಕಾಸು ಸಂಸ್ಥೆಗಳಿಂದ ಬಡ ಮಹಿಳೆಯರು ಪಡೆದಿರುವ ಸಾಲಮನ್ನಾ ಮಾಡಬೇಕು. ಮಹಿಳೆಯರ ಸ್ವಸಹಾಯ ಸಂಘಗಳಿಗೆ ಉತ್ತೇಜನ ನೀಡಿ ಬ್ಯಾಂಕ್‍ಗಳ ಮೂಲಕ ಸಾಲ ಸೌಲಭ್ಯಗಳನ್ನು ಒದಗಿಸಬೇಕೆಂದು ಅವರು ಇದೇ ವೇಳೆ ಆಗ್ರಹಿಸಿದರು.

ಬಹಿರಂಗ ಸಭೆಯ ಮುಂಚಿತವಾಗಿ ನೂರಾರು ನೊಂದ ಮಹಿಳೆಯರು ಪಟ್ಟಣದಲ್ಲಿ ಪ್ರತಿಭಟಣಾ ಮೆರವಣಿಗೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಅಧ್ಯಕ್ಷೆ ಕಮಲಾ, ಕಳಸ ತಾಲೂಕು ಕಾರ್ಯದರ್ಶಿ ಗೋಪಾಲ ಶೆಟ್ಟಿ, ಭಾರತೀಯ ಮಹಿಳಾ ರಾಜ್ಯ ಸಂಚಾಲಕಿ ಭಾರತಿ, ಮುಖಂಡರಾದ ಮೋನಪ್ಪ, ಸುಂಕಸಾಲೆ ರವಿ, ಸುಂದರ, ಶಾರದ ಶೆಟ್ಟಿ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X