ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ : ಡಾ.ಪಿ.ಎಸ್. ಹರ್ಷ
ಸಿಎಎಗೆ ಸಂಬಂಧಿಸಿದಂತೆ ಪ್ರತಿಭಟನೆ
![ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ : ಡಾ.ಪಿ.ಎಸ್. ಹರ್ಷ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ : ಡಾ.ಪಿ.ಎಸ್. ಹರ್ಷ](https://www.varthabharati.in/sites/default/files/images/articles/2019/12/18/224160-1576652085.jpg)
ಮಂಗಳೂರು : ಸಿಎಎಗೆ ಸಂಬಂಧಿಸಿದಂತೆ ಪ್ರತಿಭಟನೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಡಿ.20 ಮತ್ತು ಡಿ. 23ರಂದು ವಿವಿಧ ಸಂಘಸಂಸ್ಥೆಗಳು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಕೈಬಿಡಲು ನಿರ್ಧರಿಸಿದ್ದಾರೆ. ಹಾಗಾಗಿ ಅದಕ್ಕೆ ವಿರುದ್ಧವಾಗಿ ಇತರ ಸಂಘಟನೆಗಳು, ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಹೇಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು, ಸುಮಾರು 7 ಸಂಘಟನೆಗಳಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ ಎಂದರು.
Next Story