Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎವರೆಸ್ಟ್‌ನಲ್ಲಿ ನೂಕುನುಗ್ಗಲು ತಪ್ಪಿಸಲು...

ಎವರೆಸ್ಟ್‌ನಲ್ಲಿ ನೂಕುನುಗ್ಗಲು ತಪ್ಪಿಸಲು ನೇಪಾಳದಿಂದ ಹೊಸ ಪ್ರಸ್ತಾವಗಳು

ವಾರ್ತಾಭಾರತಿವಾರ್ತಾಭಾರತಿ18 Dec 2019 8:39 PM IST
share
ಎವರೆಸ್ಟ್‌ನಲ್ಲಿ ನೂಕುನುಗ್ಗಲು ತಪ್ಪಿಸಲು ನೇಪಾಳದಿಂದ ಹೊಸ ಪ್ರಸ್ತಾವಗಳು

ಕಠ್ಮಂಡು (ನೇಪಾಳ), ಡಿ. 18: ಮೌಂಟ್ ಎವರೆಸ್ಟ್ ಆರೋಹಿಗಳಿಗೆ ನೀಡಲಾಗುವ ಪರವಾನಿಗೆಗಳಿಗೆ ಸಂಬಂಧಿಸಿದ ಪ್ರಕ್ರಿಯೆಗಳಿಗೆ ನೇಪಾಳ ಸರಕಾರ ಕೆಲವು ಬದಲಾವಣೆಗಳನ್ನು ಮಾಡಲು ಉದ್ದೇಶಿಸಿದೆ. ಈ ವರ್ಷದ ಎವರೆಸ್ಟ್ ಶಿಖರವೇರಲು ಬಂದಿದ್ದ ಆರೋಹಿಗಳ ಪೈಕಿ 11 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಅದು ಈ ಕ್ರಮವನ್ನು ತೆಗೆದುಕೊಂಡಿದೆ.

ನೂತನ ಪ್ರಸ್ತಾವಗಳ ಪ್ರಕಾರ, ನೇಪಾಳದಲ್ಲಿ ಕನಿಷ್ಠ 6,500 ಮೀಟರ್ ಎತ್ತರದ ಕನಿಷ್ಠ ಒಂದು ಪರ್ವತವನ್ನು ಹತ್ತಿರುವುದಕ್ಕೆ ಆಕಾಂಕ್ಷಿಗಳು ದಾಖಲೆಗಳನ್ನು ಸಲ್ಲಿಸಬೇಕು. ಆಕಾಂಕ್ಷಿ ಆರೋಹಿಗಳು ಉತ್ತಮ ಆರೋಗ್ಯವನ್ನು ಹೊಂದಿರುವ ಪ್ರಮಾಣಪತ್ರವನ್ನು ಸಲ್ಲಿಸಬೇಕು.

ಅತಿ ಎತ್ತರದ ಪರ್ವತಾರೋಹಣಗಳನ್ನು ಸಂಘಟಿಸುವ ಮಾರ್ಗದರ್ಶಿಗಳು ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು.

ಕಳೆದ ಆರೋಹಣ ಋತುವಿನಲ್ಲಿ ಮೌಂಟ್ ಎವರೆಸ್ಟ್‌ನಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಒಂಬತ್ತು ಮಂದಿ ನೇಪಾಳ ಭಾಗದಲ್ಲಿ ಸಾವಿಗೀಡಾದರೆ, ಇಬ್ಬರು ಟಿಬೆಟ್ ಭಾಗದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

 ಮೇ ತಿಂಗಳ ಉತ್ತರಾರ್ಧದಲ್ಲಿ, ಎವರೆಸ್ಟ್ ಆರೋಹಣಕ್ಕೆ ಪ್ರಶಸ್ತವಾದ ವಾತಾವರಣ ಏರ್ಪಟ್ಟಾಗ, ಸೂಕ್ತ ಹವಾಮಾನಕ್ಕಾಗಿ ಸುದೀರ್ಘ ಅವಧಿಯಿಂದ ಕಾಯುತ್ತಿದ್ದ ಆರೋಹಿಗಳು ಧಾವಿಸಿಹೋಗಿದ್ದರು. ಇದರಿಂದಾಗಿ ‘ಟ್ರಾಫಿಕ್ ಜಾಮ್’ ಸಂಬಂಧಿಸಿದ್ದು ಹಲವು ಆರೋಹಿಗಳು ಬಳಲಿಕೆ ಮತ್ತು ನಿತ್ರಾಣದಿಂದ ಪ್ರಾಣ ಕಳೆದುಕೊಂಡಿದ್ದರು.

ಪ್ರಸ್ತಾವಗಳ ಪರಿಣಾಮದ ಬಗ್ಗೆ ಅನುಭವಿಗಳಿಂದ ಸಂದೇಹ

ಆರೋಹಣ ಪರವಾನಿಗೆ ನೀಡಲು ನೇಪಾಳ ಸರಕಾರ ಮಂಡಿಸಿರುವ ಪ್ರಸ್ತಾವಗಳು, ಈ ವರ್ಷ ಮೌಂಟ್ ಎವರೆಸ್ಟ್‌ನಲ್ಲಿ ಸಂಭವಿಸಿದ ಗರಿಷ್ಠ ಸಾವುಗಳಿಗೆ ಕಾರಣವಾದ ಅಂಶಗಳನ್ನು ನಿಭಾಯಿಸುವ ಬಗ್ಗೆ ಮೌಂಟ್ ಎವರೆಸ್ಟ್‌ನ ಹಿರಿಯ ಆರೋಹಿಗಳು ಸಂದೇಹ ವ್ಯಕ್ತಪಡಿಸಿದ್ದಾರೆ.

ಈ ಪ್ರಸ್ತಾವಗಳು 8,850 ಮೀಟರ್ ಎತ್ತರದ ಹಿಮಾಲಯ ಶೃಂಗವನ್ನು ಏರಲು ತಂಡಗಳಲ್ಲಿ ಧಾವಿಸಿಬರುತ್ತಿರುವ ಅನನುಭವಿ ಆರೋಹಿಗಳನ್ನು ತಡೆಯುವ ಸಾಧ್ಯತೆ ಕಡಿಮೆ ಎಂದು ಅಮೆರಿಕದ ಪರ್ವತಾರೋಹಿಗಳಾದ ಎಡ್ ವೀಸ್ಚರ್ಸ್ ಮತ್ತು ಅಲನ್ ಆ್ಯರ್ನೆಟ್ ಹೇಳಿದ್ದಾರೆ.

 ‘‘ಈ ನಾಟಕವನ್ನು ನಾನು ಹಲವು ಬಾರಿ ನೋಡಿದ್ದೇನೆ. ಈ ಬಾರಿಯೂ ಇದರ ಭವಿಷ್ಯವನ್ನು ಮುಂಚಿತವಾಗಿಯೇ ಊಹಿಸಬಹುದಾಗಿದೆ. 2013ರ ಬಳಿಕ ಪ್ರತಿ ವರ್ಷ ಏನಾದರೂ ಎಡವಟ್ಟುಗಳು ನಡೆಯುತ್ತಲೇ ಇವೆ ಹಾಗೂ ಅವರು (ನೇಪಾಳ ಸರಕಾರ) ಪ್ರತಿ ಬಾರಿಯೂ ಈ ಹೊಸ ನಿಯಮಗಳನ್ನು ಘೋಷಿಸುತ್ತಲೇ ಇದ್ದಾರೆ. ಆದರೆ, ಯಾವತ್ತೂ ಜಾರಿಗೊಳಿಸಿಲ್ಲ’’ ಎಂದು ಮಂಗಳವಾರ ‘ರಾಯ್ಟರ್ಸ್’ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಆ್ಯರ್ನೆಟ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X