ಶಾಂತಿ ಕಾಪಾಡಲು ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆ
ಮಂಗಳೂರು, ಡಿ.19: ನಗರದಲ್ಲಿ ನಡೆದ ಅಹಿತಕರ ಘಟನೆಯು ವಿಷಾದನೀಯ. ಇದಕ್ಕೆ ಸಂಬಂಧಪಟ್ಟಂತೆ ಹಬ್ಬುವ ಸಂದೇಶಗಳನ್ನು ಗಂಭೀರವಾಗಿ ಪರಿಗಣಿಸದೆ ಸಮಾಜದಲ್ಲಿ ಸೌಹಾರ್ದ ಮೂಡಿಸುವ ಸಲುವಾಗಿ ಶಾಂತಿಯನ್ನು ಕಾಪಾಡಬೇಕು ಎಂದು ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.
ಗುರುವಾರ ನಡೆದ ಘಟನೆಗೆ ಸಂಬಂಧಿಸಿ ಹೇಳಿಕೆ ನೀಡಿರುವ ಖಾಝಿ, ಯಾರೂ ಕೂಡ ಅಹಿತಕರ ಘಟನೆಗೆ ಆಸ್ಪದ ನೀಡಬೇಡಿ. ಎಲ್ಲರೂ ಶಾಂತಿ, ಸಮಾಧಾನದಿಂದ ಇರುವಂತೆ ಮನವಿ ಮಾಡಿದ್ದಾರೆ.
Next Story