Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಖಿಲ ಭಾರತ ಅಂತರ ವಿವಿ ಕಬಡ್ಡಿ ಟೂರ್ನಿ :...

ಅಖಿಲ ಭಾರತ ಅಂತರ ವಿವಿ ಕಬಡ್ಡಿ ಟೂರ್ನಿ : ಗೊಂಡ್ವಾನಾ ವಿವಿಯನ್ನು ಸೋಲಿಸಿದ ಮಂಗಳೂರು ವಿವಿ

ವಾರ್ತಾಭಾರತಿವಾರ್ತಾಭಾರತಿ19 Dec 2019 10:07 PM IST
share

ಉಡುಪಿ, ಡಿ.19: ಭಾರತೀಯ ವಿವಿಗಳ ಸಂಘದ ಆಶ್ರಯದಲ್ಲಿ ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗ ಹಾಗೂ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರಗಳ ಸಹಯೋಗದೊಂದಿಗೆ ನಗರದ ಪೂರ್ಣಪ್ರಜ್ಞ ಕಾಲೇಜು ಮೈದಾನದಲ್ಲಿ ನಡೆದಿರುವ ಅಖಿಲ ಭಾರತ ಅಂತರ ವಿವಿ ಪುರುಷರ ಕಬಡ್ಡಿ ಚಾಂಪಿಯನ್‌ಷಿಪ್‌ನ ಎರಡನೇ ದಿನವಾದ ಬುಧವಾರ ಪಂದ್ಯವೊಂದರಲ್ಲಿ ಆತಿಥೇಯ ಮಂಗಳೂರು ವಿವಿ ತಂಡ,ಪಶ್ಚಿಮ ವಲಯದ ಗಡ್‌ಚಿರೋಲಿಯ ಗೊಂಡ್ವಾನಾ ವಿವಿಯನ್ನು 95-16 ಅಂಕಗಳ ಅಂತರದಿಂದ ಬಗ್ಗುಬಡಿದು ಪೂರ್ಣ ಎರಡು ಅಂಕಗಳನ್ನು ಸಂಪಾದಿಸಿತು.

ಮಂಗಳವಾರ ತನ್ನ ಆರಂಭಿಕ ಪಂದ್ಯದಲ್ಲಿ ವಾರಣಾಸಿಯ ಎ.ಜಿ.ಕೆ.ವಿ.ಪಿ. ವಿರುದ್ಧ ರೋಮಾಂಚಕಾರಿ (37-37) ಟೈ ಸಾಧಿಸಿದ್ದ ದಕ್ಷಿಣ ವಲಯ ಚಾಂಪಿಯನ್ ತಂಡವಾದ ಮಂಗಳೂರು ವಿವಿ, ಇಂದು ನಿಸ್ಸಹಾಯಕ ಗೊಂಡ್ವಾನಾ ವಿವಿಯನ್ನು 79 ಅಂಕಗಳ ಅಂತರದಿಂದ ಭರ್ಜರಿಯಾಗಿ ಹಿಮ್ಮೆಟ್ಟಿಸಿ ಒಟ್ಟು ಮೂರು ಅಂಕಗಳನ್ನು ಸಂಪಾದಿಸುವಲ್ಲಿ ಯಶಸ್ವಿಯಾಯಿತು.

ಬಿ ಗುಂಪಿನ ಅಗ್ರಸ್ಥಾನಕ್ಕಾಗಿ ಮಂಗಳೂರು ವಿವಿ ನಾಳೆ ಗುಂಪಿನ ಬಲಿಷ್ಠ ತಂಡವಾಗಿರುವ ಉತ್ತರ ವಲಯ ಕುರುಕ್ಷೇತ್ರದ ಕುರುಕ್ಷೇತ್ರ ವಿವಿಯನ್ನು ಎದುರಿಸಲಿದೆ. ಕುರುಕ್ಷೇತ್ರ ವಿವಿ, ತಾನಾಡಿರುವ ಎರಡೂ ಪಂದ್ಯಗಳನ್ನು ಜಯಿಸಿದ್ದು, ಒಟ್ಟು 4 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.
 ನಿನ್ನೆ ರಾತ್ರಿ ಪಶ್ಚಿಮ ವಲಯದ ನಾಲ್ಕನೇ ಸ್ಥಾನಿ ಗೊಂಡ್ವಾನಾ ವಿವಿಯನ್ನು 76-23 ಅಂಕಗಳಿಂದ ಪರಾಭವಗೊಳಿಸಿದ್ದ ಕುರುಕ್ಷೇತ್ರ ವಿವಿ, ಇಂದು ವಾರಣಾಸಿಯ ಎಂಜಿಕೆವಿಪಿ ತಂಡವನ್ನು 42-33 ಅಂಕಗಳ ಅಂತರದಿಂದ ಸೋಲಿಸಿ ಗುಂಪಿನಲ್ಲಿ ಅಜೇಯವಾಗುಳಿಯಿತು.

ನಿನ್ನೆ ರಾತ್ರಿ ಎ ಗುಂಪಿನಲ್ಲಿ ನಡೆದ ಪಂದ್ಯದಲ್ಲಿ ಪಶ್ಚಿಮ ವಲಯದ ಚೆನ್ನೈ ಎಸ್.ಆರ್.ಎಂ.ವಿವಿ, ಬಿಹಾರ ದರ್ಬಾಂಗದ ಎಲ್.ಎನ್.ಮಿಥಿಲಾ ವಿವಿಯನ್ನು 44-24ರ ಅಂತರದಿಂದ ಹಿಮ್ಮೆಟ್ಟಿಸಿದರೆ, ಸಿ ಗುಂಪಿನಲ್ಲಿ ತಮಿಳು ನಾಡು ತಿರುನಲ್ವೇಲಿಯ ಎಂ.ಎಸ್. ವಿವಿ, ಛತ್ತೀಸ್‌ಗಢ ರಾಯ್‌ಪುರದ ರವಿಶಂಕರ್ ವಿವಿಯನ್ನು 49-21 ಅಂಕಗಳಿಂದ ಹಾಗೂ ಡಿ ಗುಂಪಿನಲ್ಲಿ ಉತ್ತರ ವಲಯ ಭಿವಾನಿಯ ಸಿ.ಬಿ.ಎಲ್. ವಿವಿ ತಂಡ, ಮುಂಬೈಯ ಯುನಿವರ್ಸಿಟಿ ಆಫ್ ಮುಂಬಯಿ ವಿರುದ್ಧ 39-26 ಅಂಕಗಳ ಜಯಗಳಿಸಿತ್ತು.

ಬುಧವಾರ ಬೆಳಗ್ಗೆ 9ನೇ ಪಂದ್ಯದಲ್ಲಿ ರೋಹ್ಟಕ್‌ನ ಎಂ.ಡಿ.ವಿವಿ ಎ ಗುಂಪಿನ ಪಂದ್ಯದಲ್ಲಿ ಚೆನ್ನೈನ ಎಸ್.ಆರ್.ಎಂ.ವಿವಿಯನ್ನು 68-17 ಅಂಕಗಳ ಅಂತರದಿಂದ ಸುಲಭವಾಗಿ ಸೋಲಿಸಿ ಸತತ ಎರಡನೇ ಜಯ ದಾಖಲಿಸಿತು. ಈ ಮೂಲಕ ಅದು ನಾಲ್ಕು ಅಂಕಗಳೊಂದಿಗೆ ಅಜೇಯವಾಗುಳಿದು ಗುಂಪಿನಲ್ಲಿ ಅಗ್ರಸ್ಥಾನಿಯಾಗಿದೆ.

ಸಿ ಗುಂಪಿನಲ್ಲಿ ರಾಜಸ್ಥಾನ ಕೋಟದ ಯುನಿವರ್ಸಿಟಿ ಆಫ್ ಕೋಟಾ, ಛತ್ತೀಸ್‌ಗಢ ರಾಯಪುರದ ರವಿಶಂಕರ್ ವಿವಿಯನ್ನು 47-35ರ ಅಂತರದಿಂದ, ಡಿ ಗುಂಪಿನಲ್ಲಿ ಉತ್ತರ ಪ್ರದೇಶ ಜಾನುಪುರದ ವಿ.ಬಿ.ಎಸ್.ವಿವಿ, ಭಿವಾನಿಯ ಸಿ.ಬಿ.ಎಲ್. ವಿವಿಯನ್ನು 42-32ರ ಅಂತರದಿಂದ ಸೋಲಿಸಿದವು.

ಎ ಗುಂಪಿನ ಟೂರ್ನಿಯ 13ನೇ ಪಂದ್ಯದಲ್ಲಿ ಕೊಲ್ಹಾಪುರದ ಶಿವಾಜಿ ವಿವಿ ತಂಡ, ಬಿಹಾರ ದರ್ಭಾಂಗಾದ ಎಲ್.ಎನ್.ಮಿಥಿಲಾ ವಿವಿಯನ್ನು 60-26, ಸಿ ಗುಂಪಿನಲ್ಲಿ ಅಮೃತಸರದ ಜಿ.ಎನ್.ಡಿ.ವಿವಿ, ತಿರುನಲ್ವೇಲಿಯ ಎಂ.ಎಸ್. ವಿವಿಯನ್ನು 53-23 ಹಾಗೂ ಡಿ ಗುಂಪಿನಲ್ಲಿ ಚೆನ್ನೈನ ವೆಲ್ಸ್ ಇನ್‌ಸ್ಟಿಟ್ಯೂಟ್ ಆಫ್ ಸಾಯನ್ಸ್, ಟೆಕ್ನಾಲಜಿ ಎಂಡ್ ಅಡ್ವಾನ್ಸ್‌ಡ್ ಸ್ಟಡೀಸ್ ತಂಡ, ಮುಂಬಯಿ ಯುನಿವರ್ಸಿಟಿ ಆಫ್ ಮುಂಬಯಿಯನ್ನು 44-23 ಅಂಕಗಳ ಅಂತರದಿಂದ ಹಿಮ್ಮೆಟ್ಟಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X