Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಅಪಾಯಕಾರಿ ಮೂತ್ರನಾಳದ ಸೋಂಕಿನ...

ಅಪಾಯಕಾರಿ ಮೂತ್ರನಾಳದ ಸೋಂಕಿನ ಲಕ್ಷಣಗಳನ್ನು ತಿಳಿದುಕೊಳ್ಳಿ

ವಾರ್ತಾಭಾರತಿವಾರ್ತಾಭಾರತಿ19 Dec 2019 11:58 PM IST
share

ಮೂತ್ರನಾಳ ಸೋಂಕು ಅಥವಾ ಯುಟಿಐ ಸಾಮಾನ್ಯವಾಗಿ ಮಹಿಳೆಯರನ್ನು ಕಾಡುವ ಗಂಭೀರ ಆರೋಗ್ಯ ಸಮಸ್ಯೆಯಾಗಿದೆ. ಈ ಸಮಸ್ಯೆಯ ಕುರಿತು ಜನರ ಮನಸ್ಸಿನಲ್ಲಿ ಹಲವಾರು ಪ್ರಶ್ನೆಗಳಿವೆ. ಈ ಸಮಸ್ಯೆ ಕೇವಲ ಮಹಿಳೆಯರಿಗೆ ಸೀಮಿತ ಎಂಬ ನಂಬಿಕೆ ಜನರಲ್ಲಿದೆ,ಆದರೆ ಇದು ನಿಜವಲ್ಲ. ಪುರುಷರು ಮತ್ತು ಮಕ್ಕಳಲ್ಲಿಯೂ ಯುಟಿಐ ಉಂಟಾಗಬಹುದು. ಆದರೆ ದೈಹಿಕ ಸ್ವರೂಪದಿಂದಾಗಿ ಯುಟಿಐ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ ಎನ್ನುವುದು ನಿಜ. ಗುದದ್ವಾರ ಮತ್ತು ಮೂತ್ರ ವಿಸರ್ಜನಾ ನಾಳದ ಸಾಮೀಪ್ಯದಿಂದಾಗಿ ಮಲದಂತಹ ಹೊಲಸಿನ ಕೆಲಭಾಗ ಮೂತ್ರವ್ಯವಸ್ಥೆಯನ್ನು ಸೇರಿಕೊಳ್ಳುತ್ತದೆ ಮತ್ತು ಅದರಲ್ಲಿರುವ ಬ್ಯಾಕ್ಟೀರಿಯಾಗಳು ಸೋಂಕನ್ನುಂಟು ಮಾಡುತ್ತವೆ.

ಪುರುಷರು ಮತ್ತು ಮಕ್ಕಳಲ್ಲಿ ಯುಟಿಐಗೆ ಕಾರಣಗಳು

  ಸ್ವಚ್ಛತೆಯ ಕೊರತೆ ಮತ್ತು ಮೂತ್ರಪಿಂಡ ಕಲ್ಲುಗಳು ಪುರುಷರು ಮತ್ತು ಮಕ್ಕಳು ಯುಟಿಐಗೆ ತುತ್ತಾಗುವ ಅಪಾಯವನ್ನು ಹೆಚ್ಚಿಸುತ್ತವೆ. ಇದಲ್ಲದೆ ದೀರ್ಘಕಾಲಿಕ ಮಧುಮೇಹವೂ ಯುಟಿಐಗೆ ಕಾರಣವಾಗುತ್ತದೆ. ಯುಟಿಐನ ಆರಂಭಿಕ ಲಕ್ಷಣಗಳು ಕಂಡು ಬಂದರೆ ಅಂತಹ ವ್ಯಕ್ತಿಗಳು ಹೆಚ್ಚೆಚ್ಚು ನೀರನ್ನು ಸೇವಿಸಲು ಆರಂಭಿಸಬೇಕು. ಮುಖ್ಯವಾದದ್ದೆಂದರೆ ಸ್ವಯಂ ವೈದ್ಯರಾಗದೆ ಒಳ್ಳೆಯ ವೈದ್ಯರನ್ನು ಕಂಡು ಸಲಹೆ ಪಡೆದುಕೊಳ್ಳಬೇಕು.

 ಯುಟಿಐ ಅನ್ನು ಗುರುತಿಸುವುದು ಹೇಗೆ?

 ಮೂತ್ರ ವಿಸರ್ಜನೆ ಸಂದರ್ಭದಲ್ಲಿ ಉರಿ,ನೋವು ಮತ್ತು ತುರಿಕೆ,ಪದೇ ಪದೇ ಟಾಯ್ಲೆಟ್‌ಗೆ ಹೋಗಬೇಕೆಂಬ ತುಡಿತ, ಮೂತ್ರಕ್ಕೆ ಅತಿಯಾದ ವಾಸನೆ,ಪೇಲವ ಹಳದಿ ಬಣ್ಣದ ಮೂತ್ರ,ನಡುಕದೊಂದಿಗೆ ಜ್ವರ,ಹಸಿವು ಕಡಿಮೆಯಾಗುವುದು, ನಿಶ್ಶಕ್ತಿ ಮತ್ತು ಸ್ಥಿತಿ ತೀವ್ರ ಹದಗೆಟ್ಟಿದ್ದರೆ ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಇವು ಯುಟಿಐನ ಪ್ರಮುಖ ಲಕ್ಷಣಗಳಾಗಿವೆ. ಈ ಪೈಕಿ ಯಾವುದೇ ಒಂದು ಲಕ್ಷಣ ಗೋಚರವಾದರೂ ವಿಳಂಬಿಸದೆ ವೈದ್ಯರನ್ನು ಸಂಪರ್ಕಿಸಬೇಕು. ಸೋಂಕಿನ ನಿಜವಾದ ಕಾರಣವನ್ನು ತಿಳಿದುಕೊಳ್ಳಲು ಮೂತ್ರ ಪರೀಕ್ಷೆಯ ಬಳಿಕವೇ ವೈದ್ಯರು ಚಿಕಿತ್ಸೆಯನ್ನು ಆರಂಭಿಸುತ್ತಾರೆ.

ಗರ್ಭಾವಸ್ಥೆಯಲ್ಲಿ ಯುಟಿಐ ಅಪಾಯವು ಹೆಚ್ಚುತ್ತದೆಯೇ?

ಮಹಿಳೆಯರು ಗರ್ಭ ಧರಿಸಿದ ಅವಧಿಯಲ್ಲಿ ಶರೀರದಲ್ಲಿ ಪ್ರೊಜೆಸ್ಟಿರಾನ್ ಹಾರ್ಮೋನ್ ಮಟ್ಟವು ಗಣನೀಯವಾಗಿ ಹೆಚ್ಚುತ್ತದೆ ಮತ್ತು ಇದು ಯುಟಿಐಗೆ ತುತ್ತಾಗುವ ಅಪಾಯವನ್ನು ಹೆಚ್ಚಿಸುತ್ತದೆ. ವಾಸ್ತವದಲ್ಲಿ ಈ ಹಾರ್ಮೋನ್ ಗಭಾಶಯವನ್ನು ಗರ್ಭಾವಸ್ಥೆಗೆ ಸಜ್ಜುಗೊಳಿಸುತ್ತದೆ ಮತ್ತು ಗರ್ಭಾಶಯ ಹಾಗೂ ಮೂತ್ರಕೋಶದ ಸ್ನಾಯುಗಳನ್ನು ಸಡಿಲಿಸುತ್ತದೆ. ಇದರ ಪರಿಣಾಮವಾಗಿ ಮೂತ್ರದ ಹರಿವು ನಿಧಾನಗೊಳ್ಳುತ್ತದೆ. ಈ ಕಾರಣದಿಂದಾಗಿ ಗರ್ಭಾವಸ್ಥೆಯಲ್ಲಿ ಯುಟಿಐ ಜೊತೆ ಮೂತ್ರಪಿಂಡ ಸೋಂಕಿನ ಅಪಾಯವೂ ಹೆಚ್ಚುತ್ತದೆ. ಆದ್ದರಿಂದ ಗರ್ಭಿಣಿಯರು ವೈಯಕ್ತಿಕ ನೈಮರ್ಲ್ಯದ ಬಗ್ಗೆ ವಿಶೇಷ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ.

ನವಜಾತ ಶಿಶುಗಳೂ ಇಂತಹುದೇ ಸಮಸ್ಯೆಗಳನ್ನು ಹೊಂದಿರಬಹುದು, ಆದ್ದರಿಂದ ಅವುಗಳಿಗೆ ಸ್ನಾನ ಮಾಡಿಸುವಾಗ ವೈಯಕ್ತಿಕ ನೈರ್ಮಲ್ಯದ ಬಗ್ಗೆ ವಿಶೇಷ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗುತ್ತದೆ. ಗಂಡುಮಕ್ಕಳ ಮೂತ್ರ ವ್ಯವಸ್ಥೆಯಲ್ಲಿ ಜನ್ಮಜಾತ ದೋಷಗಳಿದ್ದರೂ ಯುಟಿಐ ಸಮಸ್ಯೆಗೆ ಗುರಿಯಾಗಬಹುದು.

ಸಾರ್ವಜನಿಕ ಶೌಚಾಲಯ ಬಳಕೆಯಿಂದ ಯುಟಿಐ ಉಂಟಾಗುತ್ತದೆಯೇ?

ಸ್ವಚ್ಛತೆಯಿಲ್ಲದ ಸಾರ್ವಜನಿಕ ಅಥವಾ ಖಾಸಗಿ ಶೌಚಾಲಯಗಳು ಯುಟಿಐಗೆ ಕಾರಣವಾಗಬಲ್ಲವು. ಆದ್ದರಿಂದ ಸಾರ್ವಜನಿಕ ಶೌಚಾಲಯ ಮೇಲ್ನೋಟಕ್ಕೆ ಸ್ವಚ್ಛವಾಗಿರುವಂತೆ ಕಂಡುಬಂದರೂ ಬಳಕೆಗೆ ಮೊದಲು ಅದನ್ನು ಚೆನ್ನಾಗಿ ಫ್ಲಷ್ ಮಾಡುವುದು ಅಗತ್ಯ. ಬಳಕೆಗೆ ಮುನ್ನ ಟಾಯ್ಲೆಟ್ ಸ್ಯಾನಿಟೈಜರ್ ಬಳಸಿದರೆ ಒಳ್ಳೆಯದು.

ಯುಟಿಐ ತಡೆಯಲು ಕೆಲವು ಟಿಪ್ಸ್

ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಕಾಳಜಿಯಿರಲಿ. ಮನೆಯಲ್ಲಿಯ ಟಾಯ್ಲೆಟ್‌ಗಳ ಸ್ವಚ್ಛತೆ ಕಾಯ್ದುಕೊಳ್ಳುವುದು ಮುಖ್ಯವಾಗುತ್ತದೆ. ಯಾವಾಗಲೂ ಹತ್ತಿಯ ಒಳಉಡುಪುಗಳನ್ನು ಧರಿಸಬೇಕು. ದಂಪತಿಗಳ ಪೈಕಿ ಯಾರಿಗಾದರೂ ಒಬ್ಬರಿಗೆ ಯುಟಿಐ ಸೋಂಕು ಇದ್ದರೆ ದೈಹಿಕ ಸಂಬಂಧ ಬೇಡವೇ ಬೇಡ. ಸದಾ ಹೆಚ್ಚೆಚ್ಚು ನೀರು ಸೇವಿಸುತ್ತಿರಬೇಕು. ಏನಾದರೂ ಸಮಸ್ಯೆ ಕಂಡುಬಂದರೆ ವಿಳಂಬಿಸದೆ ವೈದ್ಯರನ್ನು ಸಂಪರ್ಕಿಸಬೇಕು. ನೀರು,ಮಜ್ಜಿಗೆ,ಲಸ್ಸಿ ಮತ್ತು ಹಣ್ಣಿನ ರಸಗಳಂತಹ ದ್ರವಗಳನ್ನು ಯಥೇಚ್ಛವಾಗಿ ಸೇವಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X