Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೇಜಾವರ ಶ್ರೀ ಸ್ಥಿತಿ ಗಂಭೀರವಾಗಿದ್ದರೂ...

ಪೇಜಾವರ ಶ್ರೀ ಸ್ಥಿತಿ ಗಂಭೀರವಾಗಿದ್ದರೂ ಚಿಕಿತ್ಸೆಗೆ ಸ್ಪಂದನೆ: ಡಾ. ಸುಧಾ ವಿದ್ಯಾಸಾಗರ್

‘ಆರೋಗ್ಯದಲ್ಲಿ ಅಲ್ಪ ಸುಧಾರಣೆ, ವೆಂಟಿಲೇಟರ್ ಮುಂದುವರಿಕೆ’

ವಾರ್ತಾಭಾರತಿವಾರ್ತಾಭಾರತಿ20 Dec 2019 7:55 PM IST
share
ಪೇಜಾವರ ಶ್ರೀ ಸ್ಥಿತಿ ಗಂಭೀರವಾಗಿದ್ದರೂ ಚಿಕಿತ್ಸೆಗೆ ಸ್ಪಂದನೆ: ಡಾ. ಸುಧಾ ವಿದ್ಯಾಸಾಗರ್

ಉಡುಪಿ, ಡಿ. 20: ‘ಪೇಜಾವರ ಸ್ವಾಮೀಜಿಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿರುವುದರಿಂದ ಅವರ ಆರೋಗ್ಯದಲ್ಲಿ ನಿಧಾನವಾಗಿ ಸುಧಾರಣೆಗಳು ಕಾಣುತ್ತಿವೆ ಎಂದು ಸ್ವಾಮೀಜಿಗೆ ಚಿಕಿತ್ಸೆ ನೀಡುತ್ತಿರುವ ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರ ತಂಡದ ನೇತೃತ್ವ ವಹಿಸಿರುವ ತಜ್ಞೆ ಡಾ. ಸುಧಾ ವಿದ್ಯಾಸಾಗರ್ ತಿಳಿಸಿದ್ದಾರೆ.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಇಂದು ಸಂಜೆ ತಂಡದಲ್ಲಿರುವ ತಜ್ಞ ವೈದ್ಯರೊಂದಿಗೆ ಸೇರಿ ಕರೆಯಲಾದ ಪತ್ರಿಕಾಗೋಷ್ಠಿ ಯಲ್ಲಿ ಅವರು ಪೇಜಾವರ ಸ್ವಾಮೀಜಿ ಆರೋಗ್ಯದ ಕುರಿತ ಮಾಹಿತಿ ನೀಡಿದರು.

ಪೇಜಾವರ ಸ್ವಾಮೀಜಿ ಇಂದು ಬೆಳಗ್ಗೆ ಐದು ಗಂಟೆಗೆ ಉಸಿರಾಟದ ಸಮಸ್ಯೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ನ್ಯುಮೋನಿಯಾ ದಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸ್ವಾಮೀಜಿಗೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್) ಹಾಗೂ ಪ್ರತಿರೋಧಕ ಔಷಧಿಯನ್ನು ನೀಡಲಾಗಿತ್ತು ಎಂದು ಅವರು ಹೇಳಿದರು.

ಸ್ವಾಮೀಜಿಯ ಸ್ಥಿತಿ ಗಂಭೀರವಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸುತ್ತಿರುವುದರಿಂದ ಅವರ ಆರೋಗ್ಯದಲ್ಲಿ ಸುಧಾರಣೆಗಳು ಕಂಡು ಬರುತ್ತಿವೆ. ಅದಕ್ಕೆ ಬೇಕಾದ ಚಿಕಿತ್ಸೆಯನ್ನು ತಂಡ ನೀಡುತ್ತಿದೆ. ಅಲ್ಲದೆ ಅವರಿಗೆ ನೀಡಲಾದ ಕೃತಕ ಉಸಿರಾಟದ ವ್ಯವಸ್ಥೆಯನ್ನು ಈಗಲೂ ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದರು.

ಸ್ವಾಮೀಜಿಯ ಪ್ರಜ್ಞೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕೃತಕ ಉಸಿರಾಟದ ವ್ಯವಸ್ಥೆ ಜೊತೆ ಕೆಲವೊಂದು ಔಷಧಿಗಳನ್ನು ಕೂಡ ನೀಡುತ್ತಿರುವುರಿಂದ ಸ್ವಾಮೀಜಿ ಅಮಲಿನಲ್ಲಿ ಇದ್ದಾರೆ. ಪ್ರಜ್ಞೆಯ ಬಗ್ಗೆ ಈಗ ಏನು ಹೇಳಲು ಆಗುವುದಿಲ್ಲ. ಈ ಕುರಿತು ಒಂದೆರೆಡು ದಿನಗಳ ಕಾಲ ಕಾಯಬೇಕಾಗುತ್ತದೆ. ಅದೇ ರೀತಿ ಔಟ್ ಆಫ್ ಡೇಂಜರ್ ಬಗ್ಗೆ ಕೂಡ ಈಗ ಏನು ಹೇಳಲು ಆಗುವುದಿಲ್ಲ. ಆದರೆ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಸದ್ಯ ಐಯುಸಿಯುನಲ್ಲಿ ಇದ್ದಾರೆ. ಎಷ್ಟು ದಿನ ಚಿಕಿತ್ಸೆ ನೀಡಬೇಕಾಗುತ್ತದೆ ಎಂಬುದನ್ನು ಹೇಳಲು ಆಗುವುದಿಲ್ಲ. ಅದಕ್ಕೆ ಕಾಯಬೇಕಾಗುತ್ತದೆ. ಮುಂದೆ ಅವರ ಆರೋಗ್ಯದಲ್ಲಿ ಆಗುವ ಸುಧಾರಣೆಯನ್ನು ನೋಡಿ ಹೇಳಬೇಕಾಗುತ್ತದೆ. ಬೆಳಗ್ಗೆಗಿಂತ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ ಎಂದು ಡಾ. ಸುಧಾ ವಿದ್ಯಾಸಾಗರ್ ಹೇಳಿದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾತನಾಡಿ, ಪೇಜಾವರ ಸ್ವಾಮೀಜಿಗೆ ಡಾ. ಸುಧಾ ವಿದ್ಯಾಸಾಗರ್ ನೇತೃತ್ವದಲ್ಲಿ ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಹಾಗೂ ಪ್ರೊ. ಡಾ.ರವಿರಾಜ್ ವಿ. ಆಚಾರ್ಯ, ಪ್ರೊ. ಡಾ.ಮಂಜುನಾಥ್ ಹಂದೆ, ಕಾರ್ಡಿಯಲಜಿ ವಿಭಾಗದ ಪ್ರೊ. ಡಾ. ಪದ್ಮಕುಮಾರ್, ಕ್ರಿಟಿಕಲ್ ಕೇರ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಹಾಗೂ ಅಸೋಸಿಯೇಟ್ ಪ್ರೊ. ಡಾ. ಶ್ವೇತಾಪ್ರಿಯ, ಅಸೋಸಿಯೇಟ್ ಪ್ರೊ. ಡಾ.ವಿಶಾಲ್ ಶಾನುಭಾಗ್ ಅವರ ತಂಡ ಜವಾಬ್ದಾರಿ ವಹಿಸಿಕೊಂಡು ಚಿಕಿತ್ಸೆಯನ್ನು ನೀಡುತ್ತಿದೆ ಎಂದರು.

‘ಆಸ್ಪತ್ರೆಗೆ ಭೇಟಿ ಮಾಡಬೇಡಿ’

ಪೇಜಾವರ ಸ್ವಾಮೀಜಿಯನ್ನು ನೋಡಲು ಬಹಳಷ್ಟು ಸಂದರ್ಶಕರು ಹಾಗೂ ಗಣ್ಯ ವ್ಯಕ್ತಿಗಳು ಆಸ್ಪತ್ರೆ ಬರುತ್ತಿದ್ದಾರೆ. ದಯವಿಟ್ಟು ಆಸ್ಪತ್ರೆಯಲ್ಲಿ ಸಮಸ್ಯೆಯಾಗುವುದರಿಂದ ಯಾರು ಕೂಡ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ. ಅವರ ಆರೋಗ್ಯದ ಬಗ್ಗೆ ನಾವೇ ಪ್ರತಿ 12 ಗಂಟೆಗೊಮ್ಮೆ ಮಾಧ್ಯಮದ ಮೂಲಕ ಮಾಹಿತಿ ನೀಡುತ್ತೇವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X