Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಮಾನಸಿಕ ಅಸ್ವಸ್ಥ’ ನ್ಯಾಯಾಧೀಶರನ್ನು...

‘ಮಾನಸಿಕ ಅಸ್ವಸ್ಥ’ ನ್ಯಾಯಾಧೀಶರನ್ನು ವಜಾಗೊಳಿಸಲು ಮುಂದಾದ ಪಾಕ್

‘‘ಮುಷರ್ರಫ್‌ರನ್ನು ಸಾಯುವವರೆಗೆ ಕುತ್ತಿಗೆಯ ಮೂಲಕ ನೇತು ಹಾಕಬೇಕು’’ ಎಂಬ ತೀರ್ಪಿಗೆ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ20 Dec 2019 9:44 PM IST
share
‘ಮಾನಸಿಕ ಅಸ್ವಸ್ಥ’ ನ್ಯಾಯಾಧೀಶರನ್ನು ವಜಾಗೊಳಿಸಲು ಮುಂದಾದ ಪಾಕ್

ಇಸ್ಲಾಮಾಬಾದ್, ಡಿ. 20: ಮಾಜಿ ಅಧ್ಯಕ್ಷ ಜನರಲ್ (ನಿವೃತ್ತ) ಪರ್ವೇಝ್ ಮುಷರ್ರಫ್‌ರ ಶವವನ್ನು ದರದರನೆ ಎಳೆದುಕೊಂಡು ಬಂದು ಸಂಸತ್ತಿನಲ್ಲಿ ಮೂರು ದಿನ ನೇತಾಡಿಸಿ ಎಂಬ ವಿಶೇಷ ನ್ಯಾಯಾಲಯವೊಂದರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪಾಕಿಸ್ತಾನ ಸರಕಾರವು, ನ್ಯಾಯಾಲಯದ ‘ಮಾನಸಿಕ ಅಸ್ವಸ್ಥ’ ನ್ಯಾಯಾಧೀಶರನ್ನು ಹುದ್ದೆಯಿಂದ ತೆರವುಗೊಳಿಸುವಂತೆ ಕೋರಿ ಸುಪ್ರೀಂ ನ್ಯಾಯಾಂಗ ಮಂಡಳಿಗೆ ಮನವಿ ಸಲ್ಲಿಸುವುದಾಗಿ ಗುರುವಾರ ಹೇಳಿದೆ.

‘‘ಆರೋಪಿಯನ್ನು ಸಾಯುವವರೆಗೆ ಕುತ್ತಿಗೆಯ ಮೂಲಕ ನೇತು ಹಾಕಬೇಕು’’ ಎಂದು ವಿಶೇಷ ನ್ಯಾಯಾಲಯವು ಗುರುವಾರ ನೀಡಿದ ತೀರ್ಪಿನಲ್ಲಿ ಹೇಳಿತ್ತು. ಮೂವರು ಸದಸ್ಯರ ನ್ಯಾಯಪೀಠದ ನೇತೃತ್ವ ವಹಿಸಿರುವ ಪೇಶಾವರ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ವಕಾರ್ ಅಹ್ಮದ್ ಸೇಠ್ ನ್ಯಾಯಪೀಠದ ಪರವಾಗಿ ತೀರ್ಪನ್ನು ಬರೆದಿದ್ದರು.

‘‘ದೇಶಭ್ರಷ್ಟ/ಆರೋಪಿಯನ್ನು ಬಂಧಿಸಲು ಹಾಗೂ ಕಾನೂನು ಪ್ರಕಾರ ಶಿಕ್ಷೆ ಜಾರಿಯಾಗುವಂತೆ ನೋಡಿಕೊಳ್ಳಲು ನಿಮ್ಮಿಂದಾಗುವ ಎಲ್ಲ ಪ್ರಯತ್ನಗಳನ್ನು ಮಾಡಬೇಕೆಂದು ಕಾನೂನು ಅನುಷ್ಠಾನ ಸಂಸ್ಥೆಗಳಿಗೆ ನಾವು ನಿರ್ದೇಶನ ನೀಡುತ್ತೇವೆ. ಒಂದು ವೇಳೆ ಸತ್ತ ಸ್ಥಿತಿಯಲ್ಲಿ ಆರೋಪಿ ಪತ್ತೆಯಾದರೆ ಶವವನ್ನು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಡಿ-ಚೌಕ್‌ಗೆ ದರದರನೆ ಎಳೆದುಕೊಂಡು ಬರಬೇಕು ಹಾಗೂ ಅಲ್ಲಿ ಮೂರು ದಿನಗಳ ಕಾಲ ನೇತಾಡಿಸಬೇಕು’’ ಎಂದು ತೀರ್ಪಿನಲ್ಲಿ ಬರೆಯಲಾಗಿದೆ.

ಅಧ್ಯಕ್ಷರ ಕಚೇರಿ, ಪ್ರಧಾನಿ ಕಚೇರಿ, ಸಂಸತ್ತು ಮತ್ತು ಸುಪ್ರೀಂ ಕೋರ್ಟ್ ಮುಂತಾದ ಹಲವಾರು ಮಹತ್ವದ ಸರಕಾರಿ ಕಟ್ಟಡಗಳಿಗೆ ಡಿ-ಚೌಕ್ ಅಥವಾ ಡೆಮಾಕ್ರಸಿ ಚೌಕ್ ಸಮೀಪದಲ್ಲಿದೆ.

ತೀರ್ಪು ಪ್ರಕಟಗೊಂಡ ಬಳಿಕ, ಪ್ರಧಾನಿ ಇಮ್ರಾನ್ ಖಾನ್ ತನ್ನ ವಕೀಲರ ತಂಡದೊಂದಿಗೆ ಸಮಾಲೋಚಿಸಿದರು. ಈ ಸಮಾಲೋಚನೆಯಲ್ಲಿ ಮೂಡಿಬಂದ ನಿರ್ಧಾರವನ್ನು ಇಮ್ರಾನ್‌ರ ಸಹಾಯಕರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ನ್ಯಾಯಮೂರ್ತಿ ಸೇಠ್ ‘ಮಾನಸಿಕವಾಗಿ ಅಸ್ವಸ್ಥರು’ ಎನ್ನುವುದನ್ನು ಈ ತೀರ್ಪು ತೋರಿಸಿದೆ ಎಂದು ಕಾನೂನು ಸಚಿವ ಫಾರೂಖ್ ನಸೀಮ್ ಹೇಳಿದರು.

ಇಂಥ ಶಿಕ್ಷೆ ಪಾಕಿಸ್ತಾನದ ಯಾವುದೇ ಕಾನೂನಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X