Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದ.ಕ.ಜಿಲ್ಲೆ ಪ್ರವೇಶಿಸಲು ಕಾಂಗ್ರೆಸ್...

ದ.ಕ.ಜಿಲ್ಲೆ ಪ್ರವೇಶಿಸಲು ಕಾಂಗ್ರೆಸ್ ನಿಯೋಗಕ್ಕೆ ಅವಕಾಶ ಕೊಡಬಾರದು: ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ20 Dec 2019 11:56 PM IST
share
ದ.ಕ.ಜಿಲ್ಲೆ ಪ್ರವೇಶಿಸಲು ಕಾಂಗ್ರೆಸ್ ನಿಯೋಗಕ್ಕೆ ಅವಕಾಶ ಕೊಡಬಾರದು: ಡಿ.ವಿ.ಸದಾನಂದಗೌಡ

ಬೆಂಗಳೂರು, ಡಿ.20: ಹಿಂಸಾಚಾರಕ್ಕೆ ತುತ್ತಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಒಂದೆರೆಡು ದಿನ ಹೊರಗಿನ ನಾಯಕರು ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಆಗ್ರಹಿಸಿದರು.

ಶುಕ್ರವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಸ್ಸಾಂ ಮತ್ತು ಇತರೆಡೆ ಪ್ರತಿಭಟನೆಗಳು ನಡೆದು ಎರಡು, ಮೂರು ದಿನಗಳ ನಂತರ ಮಂಗಳೂರಿನಲ್ಲಿ ಯೋಜಿತ ರೀತಿಯಲ್ಲಿ ಪ್ರತಿಭಟನೆ ನಡೆದಿದೆ ಎಂದರು.

ಪ್ರತಿಭಟನೆಗೆ ಕೇರಳದಿಂದ ಯುವಕರನ್ನು ಕರೆಸಿಕೊಳ್ಳಲಾಗಿದೆ. ಕಾಂಗ್ರೆಸ್ ಇದಕ್ಕೆ ಸಹಾಯ ಮಾಡಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಶಾಸಕ ಯು.ಟಿ.ಖಾದರ್ ಬೆಂಕಿಗೆ ತುಪ್ಪ ಸುರಿದಂತೆ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ. ಇದನ್ನೆ ಸಮಾಜದ್ರೋಹಿಗಳು ಲಾಭ ಪಡೆದಿದ್ದಾರೆ. ಖಾದರ್ ತಮ್ಮ ರಾಜಕೀಯ ಅಸ್ತಿತ್ವಕ್ಕೋಸ್ಕರ ಇಂತಹ ಪ್ರಚೋದನೆಯನ್ನು ಮಾಡಿದ್ದಾರೆ ಎಂದು ಅವರು ದೂರಿದರು.

ಸದ್ಯ ಮಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಇದೀಗ, ಸಿದ್ದರಾಮಯ್ಯ, ಝಮೀರ್ ಅಹ್ಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಪರಿಸ್ಥಿತಿ ಅವಲೋಕನಕ್ಕೆ ಮಂಗಳೂರಿಗೆ ತೆರಳುವುದಾಗಿ ಗೊತ್ತಾಗಿದೆ. ಆದರೆ, ಈ ಮುಖಂಡರಿಗೆ ಯಾವುದೇ ಕಾರಣಕ್ಕೂ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಸದಾನಂದಗೌಡ ಒತ್ತಾಯಿಸಿದರು.

ಈ ನಾಯಕರ ಪ್ರವೇಶದಿಂದ ಯುವಕರು ಮತ್ತಷ್ಟು ಪ್ರಚೋದಿಸಲ್ಪಟ್ಟು, ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಅಪಾಯವಿದೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದಲ್ಲಿರುವ ಮುಸ್ಲಿಮರು ಸೇರಿದಂತೆ ಯಾವುದೇ ಜನರಿಗೆ ತೊಂದರೆಯಿಲ್ಲ. ಇಷ್ಟಕ್ಕೂ ಕಾಯ್ದೆ, ದೇಶದಲ್ಲಿನ ನಾಗರಿಕರಿಗೆ ಸಂಬಂಧಿಸಿದ್ದಲ್ಲ, ನೆರೆ ದೇಶಗಳಲ್ಲಿ ಕಿರುಕುಳ ದೌರ್ಜನ್ಯಕ್ಕೆ ಒಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ತಂದಿರುವ ಕಾಯ್ದೆಯಾಗಿದೆ ಎಂದು ಅವರು ಹೇಳಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾರೂಪ ತಳೆದಿದ್ದು, ಸಾರ್ವಜನಿಕರ ಆಸ್ತಿಪಾಸ್ತಿಗೆ ಅಪಾರ ನಷ್ಟವಾಗುತ್ತಿದ್ದು, ಶಾಂತಿಯುತ ಪ್ರತಿಭಟನೆ ಮೂಲಕ ಸಾರ್ವಜನಿಕ ಆಸ್ತಿ ಪಾಸ್ತಿಗೆ ಯಾವುದೇ ಹಾನಿ ಮಾಡದಂತೆ ಮನವಿ ಮಾಡಿದರು.

ರಾಷ್ಟ್ರದಲ್ಲಿ ಭದ್ರತೆ ಮತ್ತು ಏಕತೆಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ. ಆದರೆ, ಕಾಯ್ದೆ ಕುರಿತು ಕೆಲವರು ತಪ್ಪು ಮಾಹಿತಿ ನೀಡಿ ಜನರನು ದಾರಿ ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಹಿಂಸೆಗೆ ಪ್ರಚೋದನೆ ನೀಡಿ, ಹಿಂಸಾಚಾರ ತೀವ್ರ ರೂಪ ಪಡೆಯಲು ಕಾರಣವಾಗಿದ್ದಾರೆ ಎಂದು ಅವರು ದೂರಿದರು.

ಯಾವುದೇ ಪ್ರತಿಭಟನೆ ನಡೆಸಲು ಜನರಿಗೆ ಹಕ್ಕಿದೆ. ಆದರೆ, ಶಾಂತಿಯುತ ಪ್ರತಿಭಟನೆ ಮೂಲಕ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಸಲ್ಲಿಸಬೇಕು. ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟವಾದರೆ, ಸರಕಾರದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ಅಂತಿಮವಾಗಿ ಇದು ಸಾರ್ವಜನಿಕರ ಮೇಲೆ ಹೊರೆ ಬೀಳುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರದ ಹಿತದೃಷ್ಟಿಯಿಂದ ನಾವೆಲ್ಲರೂ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೈ ಜೋಡಿಸಬೇಕು ಎಂದು ಅವರು ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X