Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿತೀಯ ಟೆಸ್ಟ್: ಶ್ರೀಲಂಕಾಕ್ಕೆ ಮೊದಲ...

ದ್ವಿತೀಯ ಟೆಸ್ಟ್: ಶ್ರೀಲಂಕಾಕ್ಕೆ ಮೊದಲ ಇನಿಂಗ್ಸ್ ಮುನ್ನಡೆ

► ಚಾಂಡಿಮಾಲ್ ಅರ್ಧಶತಕ, ಶಾಹೀನ್ ಅಫ್ರಿದಿಗೆ ಐದು ವಿಕೆಟ್

ವಾರ್ತಾಭಾರತಿವಾರ್ತಾಭಾರತಿ21 Dec 2019 12:09 AM IST
share
ದ್ವಿತೀಯ ಟೆಸ್ಟ್: ಶ್ರೀಲಂಕಾಕ್ಕೆ ಮೊದಲ ಇನಿಂಗ್ಸ್  ಮುನ್ನಡೆ

ಕರಾಚಿ, ಡಿ.20: ದಿನೇಶ್ ಚಾಂಡಿಮಾಲ್ ಸಿಡಿಸಿದ ಅರ್ಧಶತಕದ ಕೊಡುಗೆ ನೆರವಿನಿಂದ ಶ್ರೀಲಂಕಾ ತಂಡ ಆತಿಥೇಯ ಪಾಕಿಸ್ತಾನ ತಂಡದ ವಿರುದ್ಧದ ದ್ವಿತೀಯ ಟೆಸ್ಟ್‌ನ ಮೊದಲ ಇನಿಂಗ್ಸ್ ನಲ್ಲಿ ಉತ್ತಮ ಮುನ್ನಡೆ ಸಾಧಿಸಿದೆ.

ಕರಾಚಿಯ ನ್ಯಾಶನಲ್ ಸ್ಟೇಡಿಯಂನಲ್ಲಿ ಎರಡನೇ ದಿನದಾಟವಾದ ಶುಕ್ರವಾರ 74 ರನ್ ಗಳಿಸಿದ ಚಾಂಡಿಮಾಲ್ ಅವರು ಧನಂಜಯ ಡಿ’ಸಿಲ್ವಾ ಹಾಗೂ ದಿಲ್ರುವಾನ್ ಪೆರೇರ ಜೊತೆ ಅರ್ಧಶತಕಗಳ ಜೊತೆಯಾಟದಲ್ಲಿ ಭಾಗಿಯಾಗಿ ಶ್ರೀಲಂಕಾ ತಂಡ ಮೊದಲ ಇನಿಂಗ್ಸ್‌ನಲ್ಲಿ 271 ರನ್ ಗಳಿಸಲು ನೆರವಾದರು. ಈ ಮೂಲಕ ತಂಡಕ್ಕೆ ಮೊದಲ ಇನಿಂಗ್ಸ್‌ನಲ್ಲಿ 80 ರನ್ ಮುನ್ನಡೆ ಒದಗಿಸಿಕೊಟ್ಟರು.

 ಮೊದಲ ಇನಿಂಗ್ಸ್‌ನಲ್ಲಿ ಕೇವಲ 191 ರನ್‌ಗೆ ಆಲೌಟಾಗಿರುವ ಪಾಕ್ ತಂಡ ದಿನದಾಟದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 57 ರನ್ ಗಳಿಸಿದ್ದು, ಆರಂಭಿಕ ಆಟಗಾರರಾದ ಅಬಿದ್ ಅಲಿ(32) ಹಾಗೂ ಶಾನ್ ಮಸೂದ್(21)ಶ್ರೀಲಂಕಾ ದಾಳಿಯನ್ನು ಸಮರ್ಥವಾಗಿ ಎದುರಿಸಿದರು.

ಇದಕ್ಕೂ ಮೊದಲು ಮೊದಲ ಬಾರಿ ಐದು ವಿಕೆಟ್ ಗೊಂಚಲು ಪಡೆದ ಶಾಹೀನ್ ಅಫ್ರಿದಿ(5-77) ಹಾಗೂ ಮುಹಮ್ಮದ್ ಅಬ್ಬಾಸ್(4-55)ಶ್ರೀಲಂಕಾವನ್ನು 300 ರನ್ ಒಳಗೆ ನಿಯಂತ್ರಿಸಿದರು.

3 ವಿಕೆಟ್‌ಗಳ ನಷ್ಟಕ್ಕೆ 64 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಶ್ರೀಲಂಕಾ ತಂಡ ನೈಟ್ ವಾಚ್‌ಮ್ಯಾನ್ ಲಸಿತ್ ಎಂಬುಲ್ಡೆನಿಯಾ(13) ಹಾಗೂ ಆ್ಯಂಜೆಲೊ ಮ್ಯಾಥ್ಯೂಸ್(13) ವಿಕೆಟ್‌ಗಳನ್ನು ಅಲ್ಪ ಮೊತ್ತಕ್ಕೆ ಕಳೆದುಕೊಂಡಿತು.

ಆಗ ಧನಂಜಯ ಡಿ’ಸಿಲ್ವಾ (32)ಜೊತೆ ಕೈಜೋಡಿಸಿದ ಚಾಂಡಿಮಾಲ್ ಆರನೇ ವಿಕೆಟ್‌ಗೆ 67 ರನ್ ಸೇರಿಸಿದರು. ಅಬ್ಬಾಸ್ ಎಸೆತದಲ್ಲಿ ಬೌಂಡರಿ ಗಳಿಸಿದ ಚಾಂಡಿಮಾಲ್ 18ನೇ ಅರ್ಧಶತಕ ಪೂರೈಸಿದರು. ಈ ಮೂಲಕ ಶ್ರೀಲಂಕಾವನ್ನು ಆಧರಿಸಿದರು.

ಬಲಗೈ ಬ್ಯಾಟ್ಸ್‌ಮನ್ ಚಾಂಡಿಮಾಲ್ 143 ಎಸೆತಗಳ ಇನಿಂಗ್ಸ್‌ನಲ್ಲಿ 10 ಬೌಂಡರಿಗಳನ್ನು ಗಳಿಸಿದರು. ಚಾಂಡಿಮಾಲ್ 48 ರನ್(84 ಎಸೆತ, 6 ಬೌಂಡರಿ,1 ಸಿಕ್ಸರ್) ಗಳಿಸಿದ ಪೆರೇರ ಅವರೊಂದಿಗೆ 7ನೇ ವಿಕೆಟ್ ಜೊತೆಯಾಟದಲ್ಲಿ 51 ರನ್ ಸೇರಿಸಿದರು. ಅಫ್ರಿದಿ ಮೂರು ಎಸೆತಗಳಲ್ಲಿ ಲಂಕಾದ ಕೊನೆಯ 2 ವಿಕೆಟ್‌ಗಳನ್ನು ಪಡೆದು ಲಂಕಾವನ್ನು 55.5 ಓವರ್‌ಗಳಲ್ಲಿ 271 ರನ್‌ಗೆ ಕಟ್ಟಿಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X