Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂಸಾಚಾರದಲ್ಲಿ ಪಿತೂರಿ ಆರೋಪ ಹೊರಿಸಿ...

ಹಿಂಸಾಚಾರದಲ್ಲಿ ಪಿತೂರಿ ಆರೋಪ ಹೊರಿಸಿ ‘ದಿ ಹಿಂದೂ’ ಪತ್ರಕರ್ತನ ಬಂಧನ, ಬಿಡುಗಡೆ

"ನಿನ್ನ ಗಡ್ಡ ಬೋಳಿಸುತ್ತೇನೆ" ಎಂದ ಪೊಲೀಸ್

ವಾರ್ತಾಭಾರತಿವಾರ್ತಾಭಾರತಿ21 Dec 2019 1:00 PM IST
share
ಹಿಂಸಾಚಾರದಲ್ಲಿ ಪಿತೂರಿ ಆರೋಪ ಹೊರಿಸಿ ‘ದಿ ಹಿಂದೂ’ ಪತ್ರಕರ್ತನ ಬಂಧನ, ಬಿಡುಗಡೆ

ಲಕ್ನೋ, ಡಿ.21: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ಲಕ್ನೋದಲ್ಲಿ ನಡೆದ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ಓರ್ವ ಬಲಿಯಾಗಿದ್ದು, ಹಿಂಸಾಚಾರಕ್ಕೆ ಪಿತೂರಿ ನಡೆಸಿದ್ದಾರೆಂಬ ಆರೋಪ ಹೊರಿಸಿ ‘ದಿ ಹಿಂದೂ’ ದಿನಪತ್ರಿಕೆಯ ಲಕ್ನೋದ ವರದಿಗಾರನನ್ನು ಲಕ್ನೋ ಪೊಲೀಸರು ನಗರದ ರೆಸ್ಟೋರೆಂಟ್‌ನಲ್ಲಿ ಬಂಧಿಸಿ ಸುಮಾರು ಎರಡು ಗಂಟೆಗಳ ಕಾಲ ಬಂಧನದಲ್ಲಿಟ್ಟಿದ್ದರು. ಬಳಿಕ ಬಿಡುಗಡೆ ಮಾಡಿದ್ದಾರೆ.

‘ದಿ ಹಿಂದೂ’ ಆಂಗ್ಲ ದಿನಪತ್ರಿಕೆಯ ಉತ್ತರಪ್ರದೇಶದ ವರದಿಗಾರನಾಗಿರುವ ಉಮರ್ ರಶೀದ್ ಘಟನೆಯ ಬಗ್ಗೆ ವಿವರಿಸುತ್ತಾ,‘‘ನನ್ನ ಸ್ನೇಹಿತನ ಜೊತೆಗೆ ಸ್ಥಳೀಯ ರೆಸ್ಟೊರೆಂಟ್‌ನಲ್ಲಿ ಬೇರೊಬ್ಬರ ವೈಫೈ ಬಳಸಿಕೊಂಡು ವರದಿ ತಯಾರಿಕೆಯಲ್ಲಿ ವ್ಯಸ್ತನಾಗಿದ್ದೆ. ಸಾದಾ ಉಡುಪು ಧರಿಸಿ ನಮ್ಮ ಬಳಿ ಬಂದ ನಾಲ್ಕರಿಂದ ಐದು ಮಂದಿ ನನ್ನ ಸ್ನೇಹಿತನನ್ನು ವಿಚಾರಣೆ ನಡೆಸಲಾರಂಭಿಸಿದರು. ಪರಿಚಯ ಹೇಳುವಂತೆ ಒತ್ತಾಯಿಸಿದರು. ನನ್ನ ಪರಿಚಯವನ್ನು ಕೇಳಿದರು. ಬಳಿಕ ನನ್ನ ಸ್ನೇಹಿತನನ್ನು, ನನ್ನನ್ನು   ಅವರ ಜೀಪ್‌ನಲ್ಲಿ ಕರೆದುಕೊಂಡು ಹೋದರು. ನಾನು ಪತ್ರಕರ್ತ ಎಂದು ಪರಿಚಯಿಸಿಕೊಂಡೆ’’ ಎಂದರು.

 ‘‘ಪೊಲೀಸರು ನಮ್ಮನ್ನು ರೂಮ್‌ನಲ್ಲಿ ಬಂಧಿಸಿಟ್ಟರು.ನನ್ನ ಫೋನ್‌ನ್ನು ವಶಪಡಿಸಿಕೊಂಡರು. ನನ್ನ ಸ್ನೇಹಿತನನ್ನು ನಿರ್ದಯವಾಗಿ ಥಳಿಸಿದ್ದರು. ಪೊಲೀಸರು ನನ್ನನ್ನು ಹಿಂಸಾಚಾರಕ್ಕೆ ಸಂಬಂಧ ಕಲ್ಪಿಸಿ, ಪ್ರಮುಖ ಸಂಚುಕೋರ ಎಂದು ಹೇಳಿದರು. ಕಾಶ್ಮೀರಿಗಳ ಬಗ್ಗೆ ನನ್ನ ಬಳಿ ಪ್ರಶ್ನೆ ಕೇಳಲಾರಂಭಿಸಿದರು. ಮತ್ತೊಮ್ಮೆ ಪೊಲೀಸ್ ಜೀಪ್‌ನಲ್ಲಿ ನನ್ನನ್ನು ಔಟ್‌ಪೋಸ್ಟ್‌ಗೆ ಕರೆದೊಯ್ಯಲಾಯಿತು. ಇನ್ನೊಬ್ಬ ಪೊಲೀಸ್ ನನಗೆ ಕೋಮು ನಿಂದನೆ ಮಾಡಿದ್ದ. ನನ್ನ ಗಡ್ಡವನ್ನು ಬೋಳಿಸುವುದಾಗಿಯೂ ಹೇಳಿದ್ದ''ಎಂದು ಉಮರ್ ಹೇಳಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಕಚೇರಿ ಹಾಗೂ ಉತ್ತರಪ್ರದೇಶದ ಪೊಲೀಸ್ ಮಹಾ ನಿರ್ದೇಶಕ ಒ.ಪಿ. ಸಿಂಗ್‌ಗೆ ಕರೆ ಮಾಡಿದ ಬಳಿಕ ಉಮರ್ ರಶೀದ್‌ರನ್ನು ಬಿಡುಗಡೆಗೊಳಿಸಲಾಯಿತು. ಪತ್ರಕರ್ತನ ಬಂಧನ ಬಗ್ಗೆ ಎನ್‌ಡಿಟಿವಿ, ಉತ್ತರಪ್ರದೇಶ ಪೊಲೀಸ್ ಮಹಾ ನಿರ್ದೇಶಕರ ಗಮನ ಸೆಳೆದಾಗ, ಈ ವಿಚಾರದ ಕಡೆಗೆ ನಾನು ಗಮನ ಹರಿಸುವೆ ಎಂದಿದ್ದರು. ರಶೀದ್‌ರನ್ನು ಬಿಡುಗಡೆಗೊಳಿಸುವಂತೆ ಸೂಚಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X