Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಗೋಲಿಬಾರ್: ಹಲವು ಪ್ರಶ್ನೆಗಳಿಗೆ...

ಮಂಗಳೂರು ಗೋಲಿಬಾರ್: ಹಲವು ಪ್ರಶ್ನೆಗಳಿಗೆ ಪೊಲೀಸರಲ್ಲಿ ಉತ್ತರವೇ ಇಲ್ಲ: New Indian Express ವರದಿ

ವಾರ್ತಾಭಾರತಿವಾರ್ತಾಭಾರತಿ21 Dec 2019 1:05 PM IST
share
ಮಂಗಳೂರು ಗೋಲಿಬಾರ್: ಹಲವು ಪ್ರಶ್ನೆಗಳಿಗೆ ಪೊಲೀಸರಲ್ಲಿ ಉತ್ತರವೇ ಇಲ್ಲ: New Indian Express ವರದಿ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಕಾರರ ಮೇಲೆ ಗುರುವಾರ ನಗರದಲ್ಲಿ ನಡೆದ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮಂಗಳೂರಿನಲ್ಲಿ ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಕೈಗೆತ್ತಿಕೊಂಡ ಕ್ರಮಗಳ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದ್ದು, ಪೊಲೀಸರು ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಲು ಸಂಪೂರ್ಣ ವಿಫಲರಾಗಿದ್ದಾರೆಂಬ ಆರೋಪಗಳೂ ಕೇಳಿ ಬಂದಿವೆ ಎಂದು newindianexpress.com ವರದಿ ಮಾಡಿದೆ.

ಪ್ರತಿಭಟನಕಾರರ ಮೇಲಿನ 'ವಿಪರೀತ' ಪೊಲೀಸ್ ಕಾರ್ಯಾಚರಣೆಯನ್ನು ಹತ್ತಿಕ್ಕುವಲ್ಲಿ ಪ್ರಯತ್ನಿಸದ ನಗರ ಪೊಲೀಸ್ ಆಯುಕ್ತ  ಪಿ.ಎಸ್. ಹರ್ಷ  ಹಿರಿಯಾಧಿಕಾರಿಗಳಿಂದ ತರಾಟೆಗೊಳಗಾಗಿದ್ದಾರಲ್ಲದ,  ಅವರ ವಿರುದ್ಧ ಕ್ರಮಕ್ಕೂ ಹಿರಿಯ ಅಧಿಕಾರಿಗಳು ಶಿಫಾರಸು ಮಾಡಿದ್ದಾರೆಂದು ಮೂಲಗಳು ತಿಳಿಸಿರುವುದಾಗಿ newindianexpress.com ವರದಿ ತಿಳಿಸಿದೆ.

ಪೊಲೀಸ್ ನಿಯಮಗಳ ಪ್ರಕಾರ ಇಂತಹ ಸಂದರ್ಭಗಳಲ್ಲಿ ಪ್ರತಿಭಟನಾಕಾರರ ಮೊಣಕಾಲಿನ ಕೆಳಗೆ ಗುಂಡು ಹಾರಿಸಬೇಕಾಗಿದೆಯಾದರೂ ಪೊಲೀಸರು ಹಾರಿಸಿದ ಎಂಟು ಗುಂಡುಗಳ ಪೈಕಿ ಏಳು ಸಂತ್ರಸ್ತರ ಸೊಂಟದ ಮೇಲಿನ ಭಾಗಗಳಿಗೆ ತಾಗಿತ್ತು. ಒಂದು ಬುಲೆಟ್ ಅಂತೂ ಮಾಜಿ ಮೇಯರ್ ಕೆ. ಅಶ್ರಫ್ ಅವರ ತಲೆಗೆ ಉಜ್ಜಿ ಹೋಗಿದ್ದರೆ, ಇನ್ನೊಂದು ವಿದ್ಯಾರ್ಥಿಯೊಬ್ಬನ ಎದೆಗೆ ತಾಗಿದೆ. ಘಟನೆಯ ಕುರಿತಾದ ಹಲವು ವೀಡಿಯೋಗಳಲ್ಲಿ ಪೊಲೀಸರು ಎದೆಯ ಮಟ್ಟದಲ್ಲಿ ಗುಂಡು ಹಾರಿಸುತ್ತಿರುವುದು ಕಾಣಿಸುತ್ತದೆ.

ಹಲವಾರು ಸುತ್ತು ಗುಂಡು ಹಾರಿಸಿದ ಹೊರತಾಗಿಯೂ ಯಾರೂ ಸಾಯಲಿಲ್ಲವೇಕೆ ಎಂದು ಒಬ್ಬರು ಪೊಲೀಸ್ ಇನ್‍ಸ್ಪೆಕ್ಟರ್ ಸಹೋದ್ಯೋಗಿಯನ್ನು ಕೇಳುತ್ತಿರುವ ವೀಡಿಯೋ ಕೂಡ ಹರಿದಾಡುತ್ತಿದ್ದು ಪ್ರತಿಭಟನೆಯನ್ನು ಹತ್ತಿಕ್ಕುವುದಕ್ಕಿಂತ ಹೆಚ್ಚಾಗಿ ಬೇರೆ ಉದ್ದೇಶ  ಅವರದ್ದಾಗಿತ್ತೆಂಬುದು ಸ್ಪಷ್ಟ ಎಂದು ಹೇಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ವೀಡಿಯೋವನ್ನು ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಕ್ಕೆ ಬಿಡುಗಡೆಗೊಳಿಸಿದ್ದಾರೆ.

ಈ ವೀಡಿಯೋ ಕುರಿತು ತನಗೆ ತಿಳಿದಿಲ್ಲ ಎಂದು ಹೇಳಿದ ಪೊಲೀಸ್ ಆಯುಕ್ತರು ಅದೇ ಸಮಯ ಅದರ ಕುರಿತು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಆಸ್ಪತ್ರೆಯೊಂದರ ಕೊಠಡಿಯ ಬಾಗಿಲನ್ನು ಪೊಲೀಸರು ತುಳಿಯುತ್ತಿರುವ ವೀಡಿಯೋ ಕುರಿತೂ ಅವರು ಪ್ರತಿಕ್ರಿಯಿಸಿಲ್ಲ.

ಪ್ರತಿಭಟನಾಕಾರರ ಸಂಖ್ಯೆ 6,000ದಿಂದ 7,000 ತನಕ ಇತ್ತು ಎಂದು ಆಯುಕ್ತರು ಹೇಳಿರುವುದೂ ಉತ್ಪ್ರೇಕ್ಷೆಯಾಗಿದೆಯಲ್ಲಿದೆ, 33 ಪೊಲೀಸರಿಗೆ ಘಟನೆಯಲ್ಲಿ ಗಾಯಗಳುಂಟಾಗಿದೆ ಎಂದು ಅವರು ನೀಡಿರುವ ಸಂಖ್ಯೆ ಹಾಗೂ  ಡಿಸಿಪಿ ಅರುಣಾಂಶುಗಿರಿ ಅವರ ಕೈಯ್ಯನ್ನು ಪ್ರತಿಭಟನಾಕಾರರು ಬಹುತೇಕ ತುಂಡರಿಸಿ ಬಿಟ್ಟಿದ್ದರು ಎಂದು ಹೇಳಿಕೆಯೂ ತಪ್ಪು ಎಂದು ಮೂಲಗಳು ಹೇಳಿವೆ ಎಂದು newindianexpress.com ವರದಿ ತಿಳಿಸಿದೆ.

ಗೋಲಿಬಾರಿನಲ್ಲಿ ಮೃತರಾದ ಇಬ್ಬರ ಮೃತದೇಹ ಇರಿಸಲಾಗಿದ್ದ ವೆನ್ಲಾಕ್ ಆಸ್ಪತ್ರೆಯ ಹೊರಗೆ ಕೇರಳದಿಂದ 50 ಮಂದಿ ವರದಿ ಮಾಡಲೆಂದು  ಬಂದಿದ್ದರು. ಆದರೆ ಅವರು ನಗರಕ್ಕೆ ಅಪರಿಚಿತರಾಗಿದ್ದರಿಂದ ಅವರಿಗೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು ಬಂಧಿಸಲಾಗಿತ್ತು ಎಂದು ಆಯುಕ್ತ ಹೇಳಿದ್ದರು. ಆದರೆ ವಾಸ್ತವವಾಗಿ ಅವರ ಸಂಖ್ಯೆ 8 ಆಗಿತ್ತೇ ಹೊರತು 50 ಆಗಿರಲಿಲ್ಲ.

ಘಟನೆಯಲ್ಲಿ ಗಾಯಗೊಂಡ ನಾಗರಿಕರ ಸಂಖ್ಯೆ 5 ಎಂದು ಆಯುಕ್ತರು ಹೇಳಿದ್ದರೆ ಕನಿಷ್ಠ 25 ಮಂದಿ ಗಾಯಾಳುಗಳಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X