ಪೊಲೀಸರಿಂದ ತಪ್ಪಿಸಿಕೊಂಡಿದ್ದ ಭೀಮ್ ಆರ್ಮಿ ನಾಯಕ ಆಝಾದ್ ಬಂಧನ
ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ
ಹೊಸದಿಲ್ಲಿ: ಜಾಮಾ ಮಸೀದಿಯ ಬಳಿ ನಿನ್ನೆ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆದ ವೇಳೆ ಪೊಲೀಸ್ ವಶದಿಂದ ತಪ್ಪಿಸಿಕೊಂಡಿದ್ದ ಭೀಮ್ ಆರ್ಮಿ ನಾಯಕ ಚಂದ್ರಶೇಖರ್ ಆಝಾದ್ ರನ್ನು ಇಂದು ಪೊಲೀಸರು ಬಂಧಿಸಿದ್ದಾರೆ.
ಇದರೊಂದಿಗೆ ಪೊಲೀಸ್ ಬಂಧನಕ್ಕೊಳಗಾದವರ ಸಂಖ್ಯೆ 16ಕ್ಕೇರಿದೆ. ಗುಂಪು ಹಿಂಸಾಚಾರದಲ್ಲಿ ತೊಡಗಲು ಆಝಾದ್ ಪ್ರಚೋದಿಸಿದ್ದರು ಎಂದು ಪೊಲೀಸರು ಆಪಾದಿಸಿದ್ದರು. ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.
Next Story