ಜಲೀಲ್ ನಿವಾಸಕ್ಕೆ ಕುಮಾರಸ್ವಾಮಿ ಭೇಟಿ, 5 ಲಕ್ಷ ರೂ.ನ ಚೆಕ್ ವಿತರಣೆ
ಮಂಗಳೂರು ಗೋಲಿಬಾರ್ ಪ್ರಕರಣ
![ಜಲೀಲ್ ನಿವಾಸಕ್ಕೆ ಕುಮಾರಸ್ವಾಮಿ ಭೇಟಿ, 5 ಲಕ್ಷ ರೂ.ನ ಚೆಕ್ ವಿತರಣೆ ಜಲೀಲ್ ನಿವಾಸಕ್ಕೆ ಕುಮಾರಸ್ವಾಮಿ ಭೇಟಿ, 5 ಲಕ್ಷ ರೂ.ನ ಚೆಕ್ ವಿತರಣೆ](https://www.varthabharati.in/sites/default/files/images/articles/2019/12/22/224649-1577003903.gif)
ಮಂಗಳೂರು, ಡಿ.22: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಗರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಗುರುವಾರ ನಡೆದ ಹಿಂಸಾಚಾರದ ಸಂದರ್ಭ ಗೋಲಿಬಾರ್ಗೆ ಬಲಿಯಾದ ಬಂದರ್ ಕಂದುಕ ನಿವಾಸಿ ಅಬ್ದುಲ್ ಜಲೀಲ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಳಗ್ಗೆ ಭೇಟಿ ನೀಡಿದರು.
ಈ ಸಂದರ್ಭ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಮುಖ್ಯಮಂತ್ರಿ, ಐದು ಲಕ್ಷ ರೂ.ನ ಚೆಕ್ ವಿತರಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಬಿ.ಎಂ.ಫಾರೂಕ್, ಜೆಡಿಎಸ್ ದ.ಕ. ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ವಿಟ್ಲ ಮತ್ತಿತತರು ಜೊತೆಗಿದ್ದರು.