Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿರಿಯ ಸಂತ್ರಸ್ತರಿಗೆ ನೆರವು:...

ಸಿರಿಯ ಸಂತ್ರಸ್ತರಿಗೆ ನೆರವು: ವಿಶ್ವಸಂಸ್ಥೆ ನಿರ್ಣಯದ ವಿರುದ್ಧ ರಶ್ಯ,ಚೀನಾ ವಿಟೋ

ಅಮೆರಿಕದ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ22 Dec 2019 11:49 PM IST
share
ಸಿರಿಯ ಸಂತ್ರಸ್ತರಿಗೆ ನೆರವು: ವಿಶ್ವಸಂಸ್ಥೆ ನಿರ್ಣಯದ ವಿರುದ್ಧ ರಶ್ಯ,ಚೀನಾ ವಿಟೋ

ವಾಶಿಂಗ್ಟನ್,ಡಿ.2: ಸಿರಿಯದಲ್ಲಿ ಅಂತರ್ಯುದ್ಧದಿಂದ ತತ್ತರಿಸುತ್ತಿರುವ ನಲ್ವತ್ತು ಲಕ್ಷಕ್ಕೂ ಅಧಿಕ ಮಂದಿ ಗಡಿಯಾಚೆಯಿಂದ ಮಾನವೀಯ ನೆರವನ್ನು ಒಂದು ವರ್ಷದವರೆಗೆ ವಿಸ್ತರಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ರಶ್ಯ ಹಾಗೂ ಚೀನಾವು ವಿಟೋ ಪ್ರಯೋಗಿಸಿ ತಡೆ ಒಡ್ಡಿರುವುದು ‘ನಾಚಿಕೆಗೇಡು’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  ಪಾಂಪಿಯೊ ಅವರು ವಾಶಿಂಗ್ಟನ್‌ನಲ್ಲಿ ಹೇಳಿಕೆಯೊಂದನ್ನು ನೀಡಿ,‘‘ ಸಿರಿಯದ ಸಂತ್ರಸ್ತರಿಗೆ ಮಾನವೀಯ ನೆರವನ್ನು ಒದಗಿಸುವುದಕ್ಕೆ ಅವಕಾಶ ನೀಡುವ ನಿರ್ಣಯವನ್ನು ವಿರೋಧಿಸುವ ಮೂಲಕ ರಶ್ಯ ಹಾಗೂ ಚೀನಾವು ರಾಜಕೀಯ ದಲ್ಲಿ ತೊಡಗಿದೆ. ನಿಮ್ಮ ಕೈಗಳು ರಕ್ತಸಿಕ್ತವಾಗಿದೆ’’ ಎಂದು ಅವರು ರಶ್ಯ, ಚೀನಾವನ್ನು ತರಾಟೆಗೆ ತೆಗೆದುಕೊಂಡಿದ್ದಾರೆೆ.

 ಪ್ರಸಕ್ತ ಸಿರಿಯ ಸರಕಾರದ ಔಪಚಾರಿಕ ಅನುಮತಿಯಿಲ್ಲದೆ, ಟರ್ಕಿ ಹಾಗೂ ಇರಾಕ್‌ನಲ್ಲಿರುವ ವಿಶ್ವಸಂಸ್ಥೆಯ ತಪಾಸಣಾ ಠಾಣೆಗಳಲ್ಲಿ ಮೂಲಕ ಸಿರಿಯಾಗೆ ಮಾನವೀಯ ನೆರವು ಹರಿದುಬರುತ್ತಿದೆ. ಆದರೆ ಈ ಅವಕಾಶವು ಜನವರಿ 10ರಂದು ಕೊನೆಗೊಳ್ಳುತ್ತದೆ.

ಮಾನವೀಯ ನೆರವನ್ನು ಸಿರಿಯಾದ ನಾಗರಿಕರಿಗೆ ವಿಶ್ವಸಂಸ್ಥೆಯ ಮೂಲಕ ಒದಗಿಸುವ ನಿರ್ಣಯವನ್ನು ಜರ್ಮನಿ, ಬೆಲ್ಜಿಯಂ ಹಾಗೂ ಕುವೈತ್ ದೇಶಗಳು ಮಂಡಿಸಿದ್ದವು. ಭದ್ರತಾ ಮಂಡಳಿಯ 13 ಸದಸ್ಯ ರಾಷ್ಟ್ರಗಳು ನಿರ್ಣಯವನ್ನು ಬೆಂಬಲಿಸಿದ್ದವು. ಆದರೆ ರಶ್ಯ ಹಾಗೂ ಚೀನಾಗಳು ನಿರ್ಣಯದ ವಿರುದ್ಧ ವಿಟೋ ಪ್ರಯೋಗಿಸಿದ್ದವು.

 ಸಿರಿಯದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಪರಮಮಿತ್ರನಾದ ರಶ್ಯವು , 2011ರಲ್ಲಿ ಸಿರಿಯದಲ್ಲಿ ಅಂತರ್ಯುದ್ಧ ಭುಗಿಲೆದ್ದಾಗಿನಿಂದ ಆ ದೇಶಕ್ಕೆ ಸಂಬಂಧಿಸಿದ ವಿವಿಧ ವಿವಾದಗಳಿಗೆ ಸಂಬಂಧಿಸಿ ವಿಶ್ವಸಂಸ್ಥೆಯಲ್ಲಿ 14 ಬಾರಿ ವಿಟೋ ಪ್ರಯೋಗಿಸಿತ್ತು.

 ಸಿರಿಯದ ಸಂತ್ರಸ್ತ ನಾಗರಿಕರಿಗೆ ಮಾನವೀಯ ನೆರವಿನ ಪೂರೈಕೆಯನ್ನು ಸ್ಥಗಿತಗೊಳಿಸುವ ವಿಶ್ವಸಂಸ್ಥೆಯ ನಿರ್ಣಯಕ್ಕೆ ವಿಟೋ ಪ್ರಯೋಗಿಸಿರುವುದನ್ನು ವಿಶ್ವಸಂಸ್ಥೆಯಲ್ಲಿನ ರಶ್ಯದ ರಾಯಭಾರಿ ವಾಸ್ಸಿಲಿ ನೆಬೆನ್‌ಝಿಯಾ ಸಮರ್ಥಿಸಿಕೊಂಡಿದ್ದಾರೆ. ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಸಿರಿಯದ ಬಹುತೇಕ ಪ್ರಾಂತಗಳ ಮೇಲಿನ ನಿಯಂತ್ರಣವನ್ನು ಮರಳಿಪಡೆದುಕೊಂಡಿರುವುದರಿಂದ ಈ ನಿರ್ಣಯವನ್ನು ನಿಷ್ಪ್ರಯೋಜಕವೆಂದು ಅವರು ಬಣ್ಣಿಸಿದ್ದಾರೆ.

ಆದರೆ ವಿಶ್ವಸಂಸ್ಥೆಯ ಮಾನವೀಯ ನೆರವಿನ ವಿಭಾಗವು ಈ ಬಗ್ಗೆ ಪ್ರತಿಕ್ರಿಯಿಸುತ್ತಾ, ಸಿರಿಯದಲ್ಲಿ ಚಳಿಗಾಲ ಆಗಮಿಸಿರುವುದರಿಂದ ಸಂತ್ರಸ್ತರ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು ಹೇಳಿದ್ದಾರೆ. ಗಡಿಯಾಚೆಯಿಂದ ನೆರವು ಪೂರೈಕೆಯಿಂದಾಗಿ ನಲ್ವತ್ತು ಲಕ್ಷಕ್ಕೂ ಅಧಿಕ ಸಿರಿಯ ನಾಗರಿಕರು ನೇರ ಪ್ರಯೋಜನ ಪಡೆದುಕೊಂಡಿದ್ದಾರೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X