Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಮೆನಡಿಗೆಗೆ ರೈಲ್ವೆ ಗುಡ್‌ಬೈ; ವೇಗ...

ಆಮೆನಡಿಗೆಗೆ ರೈಲ್ವೆ ಗುಡ್‌ಬೈ; ವೇಗ ಎಷ್ಟು ಹೆಚ್ಚಲಿದೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ23 Dec 2019 9:03 AM IST
share
ಆಮೆನಡಿಗೆಗೆ ರೈಲ್ವೆ ಗುಡ್‌ಬೈ; ವೇಗ ಎಷ್ಟು ಹೆಚ್ಚಲಿದೆ ಗೊತ್ತೇ?

ಹೊಸದಿಲ್ಲಿ, ಡಿ.23: ಆಮೆನಡಿಗೆಗೆ ಹೆಸರಾದ ಭಾರತದ ರೈಲುಗಳು ಶೀಘ್ರದಲ್ಲೇ ಈ ಹಣೆಪಟ್ಟಿ ಕಳಚಿಕೊಳ್ಳಲಿವೆ. ಪ್ರಯಾಣಿಕ ರೈಲುಗಳ ವೇಗವನ್ನು ಶೇಕಡ 30ರಷ್ಟು ಹೆಚ್ಚಿಸಿ ಗಂಟೆಗೆ 80 ಕಿಲೋಮೀಟರ್‌ಗೆ ಏರಿಸಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ಮುಂದಿನ ನಾಲ್ಕೂವರೆ ವರ್ಷಗಳಲ್ಲಿ ಸರಕು ಸಾಗಣೆ ರೈಲುಗಳ ವೇಗವನ್ನು ಶೇಕಡ 80ರಷ್ಟು ಹೆಚ್ಚಿಸಲು ಕೂಡಾ ರೈಲ್ವೆ ನಿರ್ಧರಿಸಿದೆ.

ಮೂಲ ಸೌಕರ್ಯದ ವಿಭಾಗವಾರು ಗುಂಪಿನ ಭಾಗವಾಗಿರುವ ರೈಲ್ವೆ ಸಚಿವಾಲಯ ಈ ಸಂಬಂಧ ಪ್ರಸ್ತುತಿಯನ್ನು ಶನಿವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಸಂಪುಟದ ಮುಂದೆ ನೀಡಿದ್ದು, ಮುಂದಿನ ಐದು ವರ್ಷಗಳ ಕಾರ್ಯಯೋಜನೆಯನ್ನು ತೆರೆದಿಟ್ಟಿದೆ. ಸದ್ಯ ಸರಕು ಸಾಗಾಟ ರೈಲುಗಳ ವೇಗ ಗಂಟೆಗೆ 25ರಿಂದ 30 ಕಿಲೋಮೀಟರ್ ಇದ್ದು 2024ರ ವೇಳೆಗೆ ಇದನ್ನು 45 ಕಿಲೋಮೀಟರ್‌ಗೆ ಹೆಚ್ಚಿಸುವ ಉದ್ದೇಶ ಹೊಂದಿದೆ.

ಪ್ರಯಾಣಿಕ ರೈಲುಗಳಲ್ಲಿ ಕೂಡಾ ಇಂಥದ್ದೇ ವೇಗವರ್ಧನೆಗೆ ಉದ್ದೇಶಿಸಿದ್ದು, ಇದು ಕೇವಲ ರಾಜಧಾನಿ ರೈಲುಗಳಿಗೆ ಸೀಮಿತವಾಗದೇ, ಇತರ ರೈಲುಗಳ ವೇಗವನ್ನೂ ಹೆಚ್ಚಿಸಲಾಗುತ್ತಿದೆ. ರಾಜಧಾನಿ ರೈಲುಗಳ ವೇಗವನ್ನು ಈಗಾಗಲೇ ಹೆಚ್ಚಿಸಲಾಗಿದ್ದು, ಮುಂಬೈ- ದೆಹಲಿ ನಡುವಿನ ಅಂತರವನ್ನು ಈ ರೈಲುಗಳು ಕೇವಲ 12 ಗಂಟೆಗಳಲ್ಲಿ ಕ್ರಮಿಸುತ್ತಿವೆ.

ದೆಹಲಿ ಬಳಿಯ ದಾದ್ರಿಯಿಂದ ಮುಂಬೈನ ಜವಾಹರಲಾಲ್ ನೆಹರೂ ಬಂದರು ಹಾಗೂ ಲೂಧಿಯಾನಾದಿಂದ ಪಶ್ಚಿಮ ಬಂಗಾಳದ ಧನಕುಣಿ ನಡುವೆ ಸಂಪರ್ಕ ಕಲ್ಪಿಸುವ ಎರಡು ವಿಶೇಷ ಸರಕು ಸಾಗಾಟ ಕಾರಿಡಾರ್‌ಗಳು ಈ ವರ್ಷ ಕಾರ್ಯಾರಂಭವಾಗುವ ಸಾಧ್ಯತೆ ಇದ್ದು, ಇದು ಸರಕು ಸಾಗಾಟ ರೈಲುಗಳ ವೇಗ ಹೆಚ್ಚಳಕ್ಕೆ ಕಾರಣವಾಗಲಿದೆ. ಇತರ ರೈಲು ಮಾರ್ಗಗಳಲ್ಲಿನ ಸಂಚಾರ ದಟ್ಟಣೆಯನ್ನು ಇದು ಕಡಿಮೆ ಮಾಡಲಿದ್ದು, ಅಲ್ಲದೆ ಇತರ ಮಾರ್ಗಗಳಲ್ಲಿ ವೇಗ ಹೆಚ್ಚಳಕ್ಕೂ ಅವಕಾಶ ಮಾಡಿಕೊಡಲಿದೆ. ಇದೀಗ ಮುಂಬೈ- ದೆಹಲಿ ಹಾಗೂ ಮುಂಬೈ ಹೌರಾ ನಡುವಿನ ರೈಲು ಮಾರ್ಗದಲ್ಲಿ ದಟ್ಟಣೆ ಅಧಿಕವಾಗಿದ್ದು, ಇತರ ರೈಲುಗಳ ವೇಗ ಹೆಚ್ಚಿಸಲು ಅವಕಾಶವಾಗುತ್ತಿಲ್ಲ ಎಂದು ರೈಲ್ವೆ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X