ಭಟ್ಕಳದಲ್ಲಿ ಎನ್ಆರ್ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟನೆ ಆರಂಭ

ಭಟ್ಕಳ, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿಯನ್ನು ವಿರೋಧಿಸಿ ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ ಆರಂಭಗೊಂಡಿದೆ.
ಇಲ್ಲಿನ ಸಾಮಾಜಿಕ, ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್ ವ- ತಂಝೀಮ್ ನೇತೃತ್ವದಲ್ಲಿ ಇಲ್ಲಿನ ಅಂಜುಮಾನ್ ಶಾಲಾ ಮೈದಾನದಲ್ಲಿ ಈ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಗೆ ಮೊದಲು ಇಲ್ಲಿನ ವೈಭವ್ ಹೋಟೆಲ್ ಬಳಿಯಿಂದ ಪ್ರತಿಭಟನಾ ವೇದಿಕೆಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ ಸಿಎಎ, ಎನ್ಆರ್ಸಿ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಈ ಕಾಯ್ದೆಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸಮಾವೇಶವನ್ನುದ್ದೇಶಿಸಿ ಚಿಂತಕ, ಅಂಕಣಕಾರ ಶಿವಸುಂದರ್ ಹಾಗೂ ಸಿಪಿಎಂ ಮುಖಂಡ ಕೆ.ರಮೇಶ್ ಮಾತನಾಡುವರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.






.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)
.gif)










