Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಎ-ಎನ್‌ಆರ್‌ಸಿ ವಿರೋಧಿಸಿ ಕೋಲಾರದಲ್ಲಿ...

ಸಿಎಎ-ಎನ್‌ಆರ್‌ಸಿ ವಿರೋಧಿಸಿ ಕೋಲಾರದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ23 Dec 2019 12:03 PM IST
share
ಸಿಎಎ-ಎನ್‌ಆರ್‌ಸಿ ವಿರೋಧಿಸಿ ಕೋಲಾರದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ

ಕೋಲಾರ, ಡಿ.23: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಯುನ್ನು ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳು ಕೋಲಾರ ಜಿಲ್ಲಾ ಅಂಜುಮನ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದರು. 

ಇಲ್ಲಿನ ಅಮ್ಮವಾರಿಪೇಟೆಯ ವೃತ್ತದಲ್ಲಿ ಕೋಲಾರ ನಗರದ ವಿವಿಧ ವಾರ್ಡುಗಳಿಂದ ಆಗಮಿಸಿದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನರು ನಗರದ ಪ್ರಮುಖ ಬೀದಿಗಳಲ್ಲಿ ಸೇರಿದ್ದರು. ಬೆಳಗ್ಗೆಯಿಂದಲೇ ಇಡೀ ಕೋಲಾರ ನಗರ ಅಘೋಷಿತ ಬಂದ್ ಪರಿಸ್ಥಿತಿಯಲ್ಲಿತ್ತು. 10 ಗಂಟೆ ವೇಳೆಗೆ ಅಂಜುಮನ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆಗೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಬಂಗಾರಪೇಟೆ ವೃತ್ತದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಅಮ್ಮವಾರಿ ವೃತ್ತದಲ್ಲಿ ನಿರ್ಮಿಸಿದ್ದ ವೇದಿಕೆಯತ್ತ ತೆರಳಿದರು.

ಕೋಲಾರದ ವಿವಿಧ ವಾರ್ಡ್‍ಗಳಿಂದ, ಸುತ್ತಮುತ್ತಲ ಹಳ್ಳಿಗಳಿಂದ ಸಾವಿರಾರು ಜನ ವೇದಿಕೆಯತ್ತ ಧಾವಿಸಿದರು. ಬೆಳಗ್ಗಿನಿಂದಲೇ ಇಡೀ ನಗರದ ಪ್ರಮುಖ ಬೀದಿಗಳು ಜನ ಓಡಾಟವಿಲ್ಲದೆ, ಎಲ್ಲಿ ನೋಡಿದರೂ ಬರೀ ಪೊಲೀಸರೇ ಕಾಣುತ್ತಿದ್ದರು. ಆದರೆ ಶಾಲಾ ಕಾಲೇಜುಗಳು ಮತ್ತು ಸಾರಿಗೆ ವ್ಯವಸ್ಥೆ ಎಂದಿನಂತೆ ಇತ್ತು. ಸಮಾವೇಶದಲ್ಲಿ ರಾಷ್ಟ್ರದ್ವಜ ಮತ್ತು ಕಪ್ಪು ಬಾವುಟಗಳು ಏಕಾಕಾಲದಲ್ಲಿ ಒಟ್ಟಿಗೆ ಜನರು ಪ್ರದರ್ಶಿಸಿದ್ದು, ರಾಷ್ಟ್ರಗೀತೆ ಹಾಡುವಾಗಲೂ ಕಪ್ಪು ಬಾವುಟ ಹಾರಾಡುತ್ತಿದ್ದು, ಜನರ ಆಕ್ರೋಶವನ್ನು ಎತ್ತಿತೋರಿಸಿದಂತಿತ್ತು. 

ಸಮಾವೇಶಕ್ಕೆ ವಿಧಾನಸಭಾ ಮಾಜಿ ಅಧ್ಯಕ್ಷರಾದ ರಮೇಶ್ ಕುಮಾರ್, ಕೋಲಾರ ಶಾಸಕ ಶ್ರೀನಿವಾಸಗೌಡ, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್, ಮಾಜಿ ಸಚಿವ ವರ್ತೂರ್ ಪ್ರಕಾಸ್ ಮೊದಲಾದವರು ಭಾಗವಹಿಸಿ ಎನ್ಆರ್ಸಿ  ಹಾಗೂ ಸಿಎಎ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. 

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತನಾಡಿ, ದೇಶದ ಜನ ಶಾಂತಿಯಿಂದ ಇದ್ದರು ಕೇಂದ್ರ ಸರ್ಕಾರ ಧರ್ಮದ ಹೆಸರಿನಲ್ಲಿ ಜನರನ್ನು ವಿಭಜನೆ ಮಾಡಲು ಈ ಕಾನೂನುಗಳನ್ನು ತಂದಿದೆ. ಇದು ಸಂವಿಧಾನ ವಿರೋಧಿ ನೀತಿ, ಇಂದು ಇಡೀ ದೇಶದ ಜನ ಡಾ.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ನೇತೃತ್ವದಲ್ಲಿ ಹೋರಾಟ ಮಾಡಬೇಕಿದೆ. ಈ ದೇಶದ ಸಂವಿಧಾನ ಉಳಿವಿಗಾಗಿ, ಅಖಂಡ ಭಾರತದ ಉಳಿವಿಗಾಗಿ, ನಾವು ಜೀವಕೊಟ್ಟಾದರೂ ದೇಶ ಉಳಿಸಬೇಕು ಎಂದು ಕರೆ ನೀಡಿದರು. 

ಪ್ರತಿಭಟನೆಯ ಕೊನೆಯಲ್ಲಿ ಎನ್ಆರ್ಸಿ, ಸಿಎಎ ಬೇಡ, ನಮಗೆ ಆಝಾದಿ ಬೇಕು, ಮನುವಾದಿಗಳಿಂದ ಆಝಾದಿ, ದೇಶದ್ರೋಹಿಗಳಿಂದ ಆಝಾದಿ, ಸಂವಿಧಾನ ವಿರೋಧಿಗಳಿಂದ ಆಝಾದಿ, ಜಾತಿವಾದಿಂದ ಆಝಾದಿ ಹೀಗೇ ಹಲವಾರು ಘೋಷಣೆಗಳನ್ನು ಕೂಗಿದರು. ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಯಿತು. ತದನಂತರ ಸಂವಿಧಾನ ವಿರೋಧಿ ಈ ಕಾಯ್ದೆಯನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ರವರ ಮೂಲಕ ವೇದಿಕೆಯಲ್ಲಿ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಕೋಲಾರ ಅಂಜುಮನ್ ಅಧ್ಯಕ್ಷ ಕೆ.ಎಂ. ಜಮೀರ್ ಅಹ್ಮದ್, ಕಾರ್ಯದರ್ಶಿ ಸೈಫುಲ್ಲಾ, ಸದಸ್ಯರಾದ ಹನೀಫ್ ಮೂಸಾನಿ, ಇಕ್ಬಾಲ್, ಮೌಲವಿ ಖಲೀಮುಲ್ಲಾ, ಮೌಲಾನಾ ಷಾ ಘಲೀಬ್, ಖಲೀಲುಲ್ಲಾ, ಮೌಲಾನಾ ಮುಜೀರ್, ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡರಾದ ಎನ್. ಮುನಿಸ್ವಾಮಿ, ಸಿ.ಎಂ.ಮುನಿಯಪ್ಪ, ಸಿಪಿಎಂ ಮುಖಂಡರಾದ ಜಿ.ಸಿ.ಬಯ್ಯಾರೆಡ್ಡಿ, ವಿ.ಗೀತಾ, ನಗರಸಭೆ ಸದಸ್ಯ ಬಿ.ಎಂ.ಮುಬಾರಕ್, ವಾಲ್ಮೀಕಿ ಮುಖಂಡ ಅಂಬರೀಶ್, ಅಂಬೇಡ್ಕರ್ ಸೇವಾ ಸಮಿತಿಯ ರಾಜ್ಯಾಧ್ಯಕ್ಷ ಕೆ.ಎಂ.ಸಂದೇಶ್, ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X